01.12.2018


ಸಾಧಾರಣ ಕಾಲದ 34ನೇ ಶನಿವಾರ

ಮೊದಲನೇ ವಾಚನ: ಪ್ರಕಟನೆ  22:1-7

ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ, ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲ ಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು. ಶಾಪಗ್ರಸ್ತವಾದುದು ಯಾವುದು ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖದರ್ಶನವಾಗುವುದು. ಆ ಹೆಸರು ಆ ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದು . ರಾತ್ರಿ ಎಂಬುದೇ ಇಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು. ಆನಂತರ ಆ ದೇವದೂತನು ನನಗೆ, "ಈ ಮಾತುಗಳು, ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮ ಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವುವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತರನ್ನೇ ಕಳಿಸಿದ್ದಾರೆ,  "ಯೇಸುಸ್ವಾಮಿ ನುಡಿಯುವುದನ್ನು ಕೇಳು: 'ಇಗೋ, ನಾನು ಬೇಗನೆ ಬರುತ್ತೇನೆ," ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ  ವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!" ಎಂದು ಹೇಳಿದನು.

ಕೀರ್ತನೆ: 95:1-2, 3-5, 6-7ab
ಶ್ಲೋಕ: ಪ್ರಭು ಯೇಸುವೇ, ಬನ್ನಿ.

ಶುಭಸಂದೇಶ: ಲೂಕ 21:34-36

"ಮಿತಿಮೀರಿದ ಭೋಜನದಿಂದಾಗಲೀ, ಕುಡಿತ ದಿಂದಾಗಲೀ, ಲೌಕಿಕ ಚಿಂತೆಗಳಿಂದಾಗಲೀ ಮಂದಮತಗಳಾಗಬೇಡಿ. ಆ ದಿನವು ಅನಿರಿಕ್ಷಿತ ಉರುಳಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ! ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ದರಾಗಿರಬೇಕು. ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮಂದೆ ನಿಲ್ಲಲ್ಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರಿಕೆಯಿಂದಿರಿ," ಎಂದರು ಯೇಸುಸ್ವಾಮಿ.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...