ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

04.11.2018

ಸಾಧಾರಣ ಕಾಲದ 31ನೇ ಭಾನುವಾರ

ಮೊದಲನೇ ವಾಚನ: ಧರ್ಮೋಪದೇಶಕಾಂಡ 6: 2-6

ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು ; ನಾನು ಈಗ ಭೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ. ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ ಅಭಿವೃದ್ಧಿಯಾಗುವಂತೆ,  ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿ. "ಇಸ್ರಯೇಲ್ ಜನಾಂಗವೇ ಕೇಳು: ನಿನ್ನ ದೇವರಾದ ಸರ್ವೇಶ್ವರಸ್ವಾಮಿ ಒಬ್ಬರೇ ದೇವರು. ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು. ಈ ದಿನ ನಾನು ನಿನಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿ ನಾಟಿರಲಿ.

ಕೀರ್ತನೆ: 18:2-3,3-4, 47-51

ಶ್ಲೋಕ: ಪ್ರಭುವೇ, ನೀನೆ ನನ್ನ ಬಲವು, ನನಗಿದೆ ನಿನ್ನಲ್ಲೇ ಒಲವು.

ಎರಡನೇ ವಾಚನ: ಹಿಬ್ರಿಯರಿಗೆ  7:23-28

ಲೇವಿಯರ ಯಾಜಕಸೇವೆಯನ್ನು ಮರಣವು ಮೊಟಕುಗೊಳಿಸುತ್ತಿದ್ದುದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು. ಯೇಸುವಾದರೋ ಚಿರಂಜೀವಿಯಾದುದರಿಂದ ಅವರ ಯಾಜಕತ್ವವು  ಶಾಶ್ವತವಾಗಿ ಉಳಿಯುವಂಥಾದ್ದು. ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ದಾರಮಾಡಬಲ್ಲರು, ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು. ನಮಗೆ  ಬೇಕಾಗಿದ್ದ ಪ್ರದಾನ ಯಾಜಕರು ಯೇಸುವೇ. ಇವರು ಪರಿಶುದ್ದರು, ನಿರ್ಧೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು. ಇವರು ಮಿಕ್ಕ ಪ್ರಧಾನ ಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು. ಧರ್ಮಶಾಸ್ತ್ರ  ನೇಮಿಸುವ ಪ್ರದಾನ ಯಾಜಕರು ಕುಂದು ಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸಂಪೂರ್ಪರಾದ ಪುತ್ರನನ್ನೇ ಪ್ರದಾನ ಯಾಜಕರನ್ನಾಗಿ ನೇಮಿಸುತ್ತದೆ.

ಶುಭಸಂದೇಶ: ಮಾರ್ಕ 12:28-34

ಪುನರುತ್ದಾನದ ಬಗ್ಗೆ ತರ್ಕವನ್ನು ಕೇಳುತ್ತಿದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಆವರ ಬಳಿಗೆ ಬಂದು, "ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?" ಎಂದು ಕೇಳಿದನು. ಯೇಸು ಅವನಿಗೆ, "ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ; ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ  ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ, "ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು ಇದೇ ಎರಡನೆಯ ಆಜ್ಞೆ, ಇವೆರಡು ಆಜ್ಞೆಗಳಿಗಿಂತ ಶ್ರೇಷ್ಟವಾದ ಆಜ್ಞೆ ಬೇರೊಂದೂ ಇಲ್ಲ" ಎಂದರು. ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, ಭೋದಕರೇ, ಚೆನ್ನಾಗಿ ಹೇಳಿದಿರಿ ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ; ಅವರನ್ನುನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು, ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದವು," ಎಂದನು. ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು "ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ," ಎಂದರು. ಇದಾದ ಬಳಿಕ ಯೇಸುವನ್ನು  ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.

No comments:

Post a Comment