28.11.2018


ಸಾಧಾರಣ ಕಾಲದ 34ನೇ ಬುಧವಾರ

ಮೊದಲನೇ ವಾಚನ: ಪ್ರಕಟಣೆ 15:1-4

ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು. ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ  ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು. ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನು ಹಾಡುತ್ತಿದ್ದರು. ಅದು ಯಾವುದೆಂದರೆ: "ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ! ಏನು ಘನ, ಏನು ಅದ್ಬುತ, ನಿನ್ನ ಸತ್ಕಾರ್ಯ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ನಾರು? ಪ್ರಕಟವಾಗಿದೆ ನನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ  ಸಕಲ ಜನಾಂಗಗಳೂ,"

ಕೀರ್ತನೆ:981, 2-3ab, 7-8, 9
ಶ್ಲೋಕ: ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ!

ಶುಭಸಂದೇಶ:ಲೂಕ 21:12-19

"ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾ ಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ನಿಮ್ಮನ್ನು ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು. ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ ಸದವಕಾಶವಾಗಿರುತ್ತದೆ. ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ. ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು. ನಿಮ್ಮ ತಂದೆ ತಾಯಿಗಳೇ, ಒಡಹುಟ್ಟಿದವರೇ, ಬಂಧು ಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದು ಹಾಕಿಸುವರು. ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೂ ನಿಮ್ಮ ತಲೆ ಕೂದಲೊಂದು ನಾಶವಾಗುವುದಿಲ್ಲ. ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ," ಎಂದರು ಯೇಸುಸ್ವಾಮಿ.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...