ಸಾಧಾರಣ ಕಾಲದ 34ನೇ ಬುಧವಾರ
ಮೊದಲನೇ ವಾಚನ: ಪ್ರಕಟಣೆ 15:1-4
ಕೀರ್ತನೆ:981,
2-3ab, 7-8, 9
ಶ್ಲೋಕ: ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ! ಏನು ಘನ,
ಏನು ಅದ್ಭುತ, ನಿನ್ನ ಸತ್ಕಾರ್ಯ!
ಶುಭಸಂದೇಶ:ಲೂಕ 21:12-19
"ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ
ಹಿಂಸೆಗೊಳಪಡಿಸುವರು. ಪ್ರಾರ್ಥನಾ ಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ನಿಮ್ಮನ್ನು ಅರಸರ ಹಾಗೂ
ಅಧಿಪತಿಗಳ ಮುಂದಕ್ಕೆ ಎಳೆಯುವರು. ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ
ಸದವಕಾಶವಾಗಿರುತ್ತದೆ. ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ;
ಇದು ನಿಮಗೆ ಮನದಟ್ಟಾಗಿರಲಿ. ಏಕೆಂದರೆ ನಿಮ್ಮ
ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ
ನಿಮಗೆ ಕೊಡುವೆನು. ನಿಮ್ಮ ತಂದೆ ತಾಯಿಗಳೇ, ಒಡಹುಟ್ಟಿದವರೇ, ಬಂಧು ಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದು ಹಾಕಿಸುವರು. ನೀವು ನನ್ನವರು
ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೂ ನಿಮ್ಮ ತಲೆ ಕೂದಲೊಂದು
ನಾಶವಾಗುವುದಿಲ್ಲ. ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ,"
ಎಂದರು ಯೇಸುಸ್ವಾಮಿ.
No comments:
Post a Comment