04.12.2018

ಆಗಮನ ಕಾಲದ ಮೊದಲನೆಯ ಮಂಗಳವಾರ

ಮೊದಲನೇ ವಾಚನ: ಯೆಶಾಯ  11: 1-10

ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರುಅದರ ಬೇರಿನಿಂದ ಫಲಿಸುವುದೊಂದು ತಳಿರು. ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮಶಕ್ತಿ ಸಮಾಲೋಚನೆಯನ್ನಿಯುವ ಆತ್ಮಸರ್ವೇಶ್ವರನ ಅರಿವನುಭಯವನು ಹುಟ್ಟಿಸುವ ಆತ್ಮ ಅಹುದುನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ ಸರ್ವೇಶ್ವರನ ಭಯಭಕ್ತಿ ಆತನಿಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆನಿರ್ಣಯಿಸನಾತ ಕಿವಿಗೆ ಬಿದ್ದಂತೆ. ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದನಾಡದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದದಂಡಿಸುವನು ಲೋಕವನು ನುಡಿಯೆಂಬ ದಂಡದಿಂದಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ. ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ. ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆನಡೆಸುವುದವುಗಳನು ಚಿಕ್ಕ ಮಗು ಮೇಯಿಸುವುದಕೆ. ಮೇಯುವುವು ಕರಡಿಆಕಳುಗಳು ಒಟ್ಟಿಗೆಮಲಗುವುವು ಅವುಗಳ  ಮರಿಗಳ ಜೊತೆಗೆ. ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ. ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆಕೈ ಹಾಕುವುದು ಮೊಲೆಬಿಟ್ಟ ಮಗುಹಾವಿನ ಬಿಲದ ಒಳಗೆ. ಹಾನಿಯನುಕೇಡನು ಮಾಡರಾರೂ ನನ್ನ ಪರ್ವತದ ಮೇಲೆಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞನ ಧರೆಯಮೇಲೆ. ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ  ನಿಲ್ಲುವುದು. ಆತನನು ರಾಷ್ಪ್ರಗಳು ಆಶ್ರಯಿಸುವುವುವೈಭವದಿಂದಿರುವುದಾತನ ವಿಶ್ರಾಂತಿ ನಿಲಯವು.

ಕೀರ್ತನೆ:  72:1-2, 7-8, 12-13, 17
ಶ್ಲೋಕ:  ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ

 ಶುಭಸಂದೇಶ:  ಲೂಕ  10:21-24

ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, "ಪಿತನೇಭೂಸ್ವರ್ಗಗಳ ಒಡೆಯನೇಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆ ಮಾಡಿಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇಇದೇ ನಿಮ್ಮ ಸುಪ್ರೀತ ಸಂಕಲ್ಪನನ್ನ ಪಿತ ಸಮಸ್ತವನ್ನು ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಚಿಸುತ್ತಾನೋ ಅವರೇ ಹೊರತು ಮತ್ತಾರೂ ಅರಿಯರು." ಎಂದು ಹೇಳಿದರು. ಆನಂತರಯೇಸು ಶಿಷ್ಯರ ಕಡೆ ತಿರುಗಿಅವರಿಗೆ ಪ್ರತ್ಯೇಕವಾಗಿ, "ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು. ಏಕೆಂದರೆ,  "ಎಷ್ಟೋ ಪ್ರವಾದಿಗಳು ಹಾಗೂ ಅರಸರುನೀವು ನೋಡುವುದನ್ನು ನೋಡುವುದಕ್ಕೂನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ," ಎಂದರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...