06.12.2018

ಮೊದಲನೇ ವಾಚನ: ಯೆಶಾಯ 26:1-6 

ಕಾಲ ಬರುವುದುಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನ್ನು: ನಮಗಿದೆ ಸುಭದ್ರ
ನಗರದೇವರೇ ಅದರ ದುರ್ಗಪ್ರಾಕಾರ ತೆರೆಯಿರಿ ನಗರ ದ್ವಾರಗಳನ್ನುಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು. ನಿನ್ನ ನೆಚ್ಚಿದವರಿಗೆಸ್ಥಿರಚಿತ್ತವುಳ್ಳವರಿಗೆಚಿರಶಾಂತಿಯ ನೀ ನೀಡುವೆ. ಶಾಶ್ವತ ಆಶ್ರಯಗಿರಿಸ್ವಾಮಿ ಸರ್ವೇಶ್ವರನೇಸತತ ಭರವಸೆಯಿಡಿರಿ ಆತನಲ್ಲೇ. ತಗ್ಗಿಸುವನಾತ ಎತ್ತರದಲಿ ವಾಸಿಸುವವರನ್ನುಕೆಡವಿ ನೆಲಸಮಮಾಡಿಧೂಳಾಗಿಸುವನು ಅವರು ವಾಸಮಾಡುವ ಉನ್ನತ ನಗರವನ್ನುಈಡು ಮಾಡುವುದು ಕಾಲ ತುಳಿತಕ್ಕೆದೀನದಲಿತರ ಪಾದ ತುಳಿತಕ್ಕೆ.

 ಕೀರ್ತನೆ: 118:1, 8-9, 19-21, 25-27a

 ಶ್ಲೋಕ: ಪ್ರಭುವಿನ ನಾಮದಲ್ಲಿ ಬರುವವನಿಗೆ ಜಯಮಂಗಳ.

 ಶುಭಸಂದೇಶ: ಮತ್ತಾಯ  7:21, 24-27


"ನನ್ನನ್ನು 'ಸ್ವಾಮೀಸ್ವಾಮೀ,' ಎನ್ನುವ ಪ್ರತಿಯೊಬ್ಬನೂ ಸ್ವರ್ಗ ಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. ನನ್ನ ಈ ಮಾತುಗಳನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ. ಮಳೆ ಬಿತ್ತು ನೆರೆ ಬಂತು ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ. ಮಳೆ ಬಂತುನೆರೆ ಬಂತುಗಾಳಿ ಬೀಸಿ ಆ ಮನೇಗೆ ಅಪ್ಪಳಿಸಿತುಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!" ಎಂದರು ಯೇಸುಸ್ವಾಮಿ.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...