ಮೊದಲನೇ ವಾಚನ: ಯೆಶಾಯ 26:1-6
ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನ್ನು: ನಮಗಿದೆ ಸುಭದ್ರ
ನಗರ, ದೇವರೇ ಅದರ ದುರ್ಗ, ಪ್ರಾಕಾರ ತೆರೆಯಿರಿ ನಗರ ದ್ವಾರಗಳನ್ನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು. ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ. ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ. ತಗ್ಗಿಸುವನಾತ ಎತ್ತರದಲಿ ವಾಸಿಸುವವರನ್ನು, ಕೆಡವಿ ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವ ಉನ್ನತ ನಗರವನ್ನು, ಈಡು ಮಾಡುವುದು ಕಾಲ ತುಳಿತಕ್ಕೆ, ದೀನದಲಿತರ ಪಾದ ತುಳಿತಕ್ಕೆ.
ನಗರ, ದೇವರೇ ಅದರ ದುರ್ಗ, ಪ್ರಾಕಾರ ತೆರೆಯಿರಿ ನಗರ ದ್ವಾರಗಳನ್ನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು. ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ. ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ. ತಗ್ಗಿಸುವನಾತ ಎತ್ತರದಲಿ ವಾಸಿಸುವವರನ್ನು, ಕೆಡವಿ ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವ ಉನ್ನತ ನಗರವನ್ನು, ಈಡು ಮಾಡುವುದು ಕಾಲ ತುಳಿತಕ್ಕೆ, ದೀನದಲಿತರ ಪಾದ ತುಳಿತಕ್ಕೆ.
ಕೀರ್ತನೆ: 118:1, 8-9, 19-21, 25-27a
ಶ್ಲೋಕ: ಪ್ರಭುವಿನ ನಾಮದಲ್ಲಿ ಬರುವವನಿಗೆ ಜಯಮಂಗಳ.
ಶುಭಸಂದೇಶ: ಮತ್ತಾಯ 7:21, 24-27
"ನನ್ನನ್ನು 'ಸ್ವಾಮೀ, ಸ್ವಾಮೀ,' ಎನ್ನುವ ಪ್ರತಿಯೊಬ್ಬನೂ ಸ್ವರ್ಗ ಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. ನನ್ನ ಈ ಮಾತುಗಳನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ. ಮಳೆ ಬಿತ್ತು ನೆರೆ ಬಂತು ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ. ಮಳೆ ಬಂತು, ನೆರೆ ಬಂತು, ಗಾಳಿ ಬೀಸಿ ಆ ಮನೇಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!" ಎಂದರು ಯೇಸುಸ್ವಾಮಿ.
No comments:
Post a Comment