ಮೊದಲನೇ ವಾಚನ: 2 ಸಮುವೇಲ 7:1-5, 8-12, 14, 16
ಶ್ಲೋಕ: ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು.
ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು: ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ. ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ. ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು ನಮಗೊಬ್ಬ ಶಕ್ತಿಯುತ ಮುಕ್ತಿದಾತನನು. ಪುರಾತನ ಕಾಲದಿಂದಲೆ. ಪೂಜ್ಯ ಪ್ರವಾದಿಗಳ ಬಾಯಿಂದಲೆ ಆರುಹಿಸಿರುವನು ಇಂತೆದು ನಮಗೆ: 'ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ' ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು. ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು . ಪಿತಮಹ ಅಬ್ರಹಾಮನಿಗಿತ್ತ ಮಾತಿಗನುಸಾರ ನಮಗಿತ್ತಿರುವರು ಶತ್ರುಗಳಿಂದ ರಕ್ಷಿಸುವನೆಂಬ ಅಭಯ. ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ, ಆತನ ಸನ್ನಿಧಿಯಲಿ ಬಾಳುವಂತಾಯಿತು ಪುನೀತರಾಗಿ, ಸದ್ಬಕ್ತರಾಗಿ, ಸುಕುಮಾರಾ, ನೀನೆನಿಸಿಕೊಳ್ಳುವೆ "ಪರಾತ್ಪರನ ಪ್ರವಾದಿ" ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ ಪಾಪಕ್ಷಮೆಯನು ಸಾರುವೆ ಆತನ ಪ್ರಜೆಗೆ. ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ, ಕೃಪಾಸಾಗರ, ದಯಾಮಯ, ನಮ್ಮ ದೇವನು, ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು, ನಮ್ಮ ಕಾಲುಗಳನ್ನೂರಿಸಿ ನಡೆಸಲು ಶಾಂತಿಪಥದೊಳು.
ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸಿತ್ತಿದ್ದನು. ಒಂದು ದಿನ ಅವನು ಪ್ರವಾದಿನಾತಾನನಿಗೆ, "ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!" ಎಂದನು. ಆದಕ್ಕೆ ನಾತಾನನು ಸಮ್ಮತಿಸಿ, "ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ," ಎಂದನು. ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದನು: "ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: 'ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ "ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆನೆಂದು ತಿಳಿಸು; 'ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ. ನೀನು ಹೋದ ಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು. ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು. ಪೂರ್ವ ಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯ ಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚಿಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ, ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ. ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರ ಪಡಿಸುವೆನು. ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು. ಆದರೆನನ್ನ ಕೃಪೆ, ನಿನ್ನ ಕಣ್ಮುಂದೆಯೇ ಸೌಲನನ್ನು ಬಿಟ್ಟು ಹೋದಹಾಗೆ, ಅವನನ್ನು ಬಿಟ್ಟು ಹೋಗುವುದಿಲ್ಲ. ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಂಹಾಸನ ಶಾಶ್ವತವಾಗಿರುವುದು.
ಕೀರ್ತನೆ: 89:2-3, 4-5, 27-29
ಶ್ಲೋಕ: ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು.
ಶುಭಸಂದೇಶ: ಲೂಕ 16: 7-9

No comments:
Post a Comment