ಮೊದಲನೇ ವಾಚನ: 1 ಯೊವಾನ್ನ 5:14-21
ದೇವರ ಚಿತ್ತಾನುಸಾರ ಏನನ್ನು ಬೇಡಿಕೊಂಡರೂ ಅವರು ನಮ್ಮ ವಿಜ್ಞಾಪನೆಗೆ ಕಿವಿಗೊಡುತ್ತಾರೆಂಬ ಭರವಸೆ ನಮಗಿದೆ. ನಾವು ಏನನ್ನು ಬೇಡಿಕೊಂಡರೂ ನಮ್ಮ ವಿಜ್ಞಾಪನೆಗೆ ದೇವರು ಕಿವಿಗೊಡುತ್ತಾರೆ ಎಂಬುದು ನಮಗೆ ತಿಳಿದಿದ್ದರೆ ನಾವು ಬೇಡಿದುದೆಲ್ಲವೂ ನಮಗೆ ಲಭಿಸಿದಂತೆಯೇ ಎಂಬುದೂ ನಮಗೆ ತಿಳಿದಿದೆ. ಮಾರಕವಲ್ಲದ ಪಾಪವೂಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೊದರನಿಗೆ ಸಜ್ಜೀವವನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಲ್ಲದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ. ಅಕ್ರಮವಾದುದೆಲ್ಲವೂ ಪಾಪವೇ ಆದರೆ ಮಾರಕವಲ್ಲದಂಥ ಪಾಪವೂ ಇದೆ. ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೆವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ ನಿಜವಾದ ದೇವರೂ ನಿತ್ಯಜೀವವೂ ಇವರೇ. ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.
ಕೀರ್ತನೆ: 149:1-2, 3-4, 5-6, 9
ಶ್ಲೋಕ: ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು
ಶುಭಸಂದೇಶ: ಯೊವಾನ್ನ 3:22-30
ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು. ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು. ಯೊವಾನ್ನನು ಆಗ ಇನ್ನೂ ಬಂಧಿತನಾಗಿರಲಿಲ್ಲ. ಶುದ್ಧಾಚಾರವನ್ನು ಕುರಿತು ಯೊವಾನ್ನನ ಶಿಷ್ಯರಿಗೂ ಯೆಹೂದ್ಯನೊಬ್ಬನಿಗೂ ವಿವಾದ ಎದ್ದಿತು. ಅವರು ಯೊವಾನ್ನನ ಬಳಿಗೆ ಬಂದು, "ಗುರುವೇ, ಜೋರ್ಡಾನಿನ ಆಚೆ ಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೇ ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೋಗುತ್ತಿದ್ದಾರೆ," ಎಂದು ದೂರಿತ್ತರು. ಅದಕ್ಕೆ ಯೊವಾನ್ನನು, "ದೇವರು ದಯಪಾಲಿಸದೆ ಹೋದರೆ ಮಾನವನಿಗೇನು ದಕ್ಕದು. "ನಾನು ಲೋಕೋದ್ಧಾರಕನಲ್ಲ; ಆತನ ಮುಂದೂತ ಮಾತ್ರ' ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ. ಆತ ಬೆಳೆಯುತ್ತಿರಬೇಕು, ನಾನು ಅಳಿಯುತ್ತಿರಬೇಕು.
No comments:
Post a Comment