01.01.2019

ಸರ್ವರಿಗೂ  ಹೊಸ ವರ್ಷದ ಶುಭಾಶಯಗಳು 

ಮೊದಲನೇ ವಾಚನ: ಸಂಖ್ಯಾಕಾಂಡ 6:22-27 

ಸರ್ವೇಶ್ವರ ಮೋಶೆಗೆ ಹೀಗೆಂದರು:  ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು: 'ನೀವು ಇಸ್ರಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಹೇಳಬೇಕು - ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿ, ಕಾಪಾಡಲಿ! ಸರ್ವೇಶ್ವರ ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ, ನಿಮಗೆ ದಯೆತೋರಲಿ! ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು, ಶಾಂತಿಯನ್ನು ಅನುಗ್ರಹಿಸಲಿ!' ಹೀಗೆ ಅವರು ಇಸ್ರಯೇಲರ ಮೇಲೆ ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು." 

ಕೀರ್ತನೆ: 67:2-3, 5, 6, 8 

ಶ್ಲೋಕ :ಹರಸು ದೇವಾ, ನಮ್ಮನಾಶೀರ್ವದಿಸು 

ಎರಡನೇ ವಾಚನ: ಗಲಾತ್ಯರಿಗೆ 4:4-7 

ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು; ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು, ನೀವು ದೇವರ ಮಕ್ಕಳಾಗಿರುವುದರಿಂದಲೇ, "ಅಪ್ಪ, ತಂದೆಯೇ," ಎಂದು ಕರೆಯುವ ತಮ್ಮಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ. ಆದ್ದರಿಂದ, ದೇವರ ಅನುಗ್ರಹದಿಂದಲೇ ನೀನು ಇನ್ನು ಮನೆಯಾಳಲ್ಲ, ಮಗನಾಗಿದ್ದೀ, ಮಗನೆಂದ ಮೇಲೆ ನೀನು ವಾರಸುದಾರನೂ ಹೌದು. 

 ಶುಭಸಂದೇಶ: ಲೂಕ 2:16-21

ಕುರುಬರು ತ್ವರೆಯಾಗಿ ಹೋಗಿ, ಮರಿಯಳನ್ನೂ ಜೋಸೆಫನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡರು, ಕಂಡ ಮೇಲೆ ಆ ಮಗುವಿನ ವಿಷಯವಾಗಿ ದೂತನು ತಮಗೆ ಹೇಳಿದ್ದನ್ನೆಲ್ಲ ಅವರಿಗೆ ತಿಳಿಯಪಡಿಸಿದರು. ಕುರುಬರು ಹೇಳಿದ ವಿಷಯವನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು. ಮರಿಯಳಾದರೋ ಈ ವಿಷಯಗಳನ್ನೆಲ್ಲಾ ಮನಸ್ಸಿನಲ್ಲಿಯೇ ಇಟ್ಟುಕೊಂಡು ಆಲೋಚಿಸುತ್ತಾ ಬಂದಳು. ಇತ್ತ, ಕುರುಬರುತಾವು ಕೇಳಿದ್ದನ್ನು ನೆನೆಯುತ್ತಾ, ದೇವರ ಮಹಿಮೆಯನ್ನು  ಸಾರುತ್ತಾ, ಕೊಂಡಾಡುತ್ತಾ ಹಿಂದಿರುಗಿದರು. ದೇವದೂತನು ಅವರಿಗೆ ತಿಳಿಸಿದಂತೆ ಎಲ್ಲವೂ ಸಂಭವಿಸಿತು. ಎಂಟನೆಯ ದಿನ ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಸಂದರ್ಭದಲ್ಲಿ ಅದಕ್ಕೆ 'ಯೇಸು' ಎಂಬ ಹೆಸರನ್ನಿಟ್ಟು ನಾಮಕರಣ ಮಾಡಿದರು. ಈ ಹೆಸರನ್ನು ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದನು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...