ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

21.02.2019 - ಈ ಪ್ರತಿಜ್ಞೆಗೆ ಮೇಘಗಳಲ್ಲಿ ನಾನಿಟ್ಟಿರುವ ಮಳೆ ಬಿಲ್ಲೇ ಗುರುತು.

ಮೊದಲನೇ ವಾಚನ: ಆದಿಕಾಂಡ 9:1-13

ದೇವರು ನೋಹನನ್ನೂ ಅವರ ಮಕ್ಕಳನ್ನೂ ಆಶೀರ್ವದಿಸಿ ಹೀಗೆಂದರು "ನೀವು ಅಭಿವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯಿರಿ; ಭೂಲೋಕದಲ್ಲೆಲ್ಲ ಹರಡಿಕೊಳ್ಳಿ. ಭೂಮಿಯ ಮೇಲಿರುವ ಎಲ್ಲ ಪ್ರಾಣಿಗಳೂ ಆಕಾಶದ ಎಲ್ಲ ಪಕ್ಷಿಗಳೂ ನೆಲದಮೇಲೆ ಹರಿದಾಡುವ ಎಲ್ಲ ಕ್ರಿಮಿಕೀಟಗಳೂ ಸಮುದ್ರದ ಎಲ್ಲ ಮೀನುಗಳು ನಿಮಗೆ ಹೆದರಿ ಬೆದರುವುವು. ಅವುಗಳನ್ನೆಲ್ಲ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ. ಭೂಮಿಯ ಮೇಲೆ ಪೈರುಪಚ್ಚೆಯನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ. ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತಸಮೇತ ತಿನ್ನಬಾರದು. ನಿಮ್ಮ ರಕ್ತಸುರಿಸಿ ಪ್ರಾಣತೆಗಿಯುವವರೆಗೆ ಮುಯ್ಯಿ ತೀರಿಸುವೆನು. ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಃದ ಅವನಿಗೂ ಮುಯ್ಯಿ ತೀರಿಸುವೆನು. "ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರರನ್ನು ಎಂತಲೆ ನರರನ್ನು ಕೊಲ್ಲುವವನು ನರನಿಂದಲೇ ಹತನಾಗುವನು. ನೀವು ಹೆಚ್ಚಿ ಅಭಿವೃಧಿಯಾಗುವಿರಿ, ನಿಮ್ಮ ಸಂಖೆ ಬೆಳೆಯಲಿ ಭೂಮಿಯಲ್ಲಿ." ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ ಇಂತೆಂದು ಹೇಳಿದರು: "ಕೇಳಿ, ನಾನೂ ನಿಮ್ಮನ್ನೂ ನಿಮ್ಮ ಸಂತತಿಯವರನ್ನೂ ನಿಮ್ಮ ಕೂಡ ನಾವೆಯಿಂದ ಹೊರಟು ಬಂದ ಪ್ರಾಣಿ - ಪಕ್ಷಿ ಮೃಗಾದಿ ಸಕಲ ಭೂಮಿಜಂತುಗಳನ್ನೂ ಕುರಿತು ಒಂದು ಸ್ಥರ ಪ್ರತಿಜ್ಞೆಯನ್ನು ಮಾಡುತ್ತೇನೆ. ಆ ಪ್ರಜ್ಞೆ ಏನೆಂದರೆ - ಇನ್ನು ಮೇಲೆ ನಾನು ಪ್ರಾಣಿಗಳನ್ನೆಲ್ಲಾ ಜಲಪ್ರಳಯದಿಂದ ನಾಶಮಾಡುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಪ್ರಳಯವು ಬರುವುದೇ ಇಲ್ಲ," ದೇವರು ಮತ್ತೆ ಹೇಳಿದ್ದೇನೆಂದರೆ - "ನಾನು ನಿಮ್ಮನ್ನೂ ನಿಮ್ಮ ಸಂಗಡವಿರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಿಗೆ ಮಾಡುವ ಈ ಪ್ರತಿಜ್ಞೆಗೆ ಮೇಘಗಳಲ್ಲಿ ನಾನಿಟ್ಟಿರುವ ಮಳೆಬಿಲ್ಲೇ ಗುರುತು. ನನಗೂ ಭೂಪ್ರಾಣಿಗಳಿಗೂ ಆದ ಒಡಂಬಡಿಕೆಗೆ ಇದೇ ಕುರುಹು.

ಕೀರ್ತನೆ: 102:16-18, 19-21, 29, 23-24

ಶ್ಲೋಕ: ಭೂಲೋಕವನ್ನು ವೀಕ್ಷಿಸಿದನು ಪ್ರಭು ಪರಲೋಕದಿಂದ

 ಶುಭಸಂದೇಶ: ಮಾರ್ಕ 8:27-33


ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ಫಿಲಿಪ್ಪನ ಸೆಜರೇಯ ಎಃಬ ಪಟ್ಟಣದ ಪಕ್ಕದಲ್ಲಿರುವ ಹಳ್ಳಿಗಳಿಗೆ ಪ್ರಯಾಣ ಬೆಳೆಸಿದರು. ದಾರಿಯಲ್ಲಿ, "ಜನರು ನನ್ನನ್ನು ಯಾರೆಂದು ಹೇಳುತ್ತಾರೆ?" ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಶಿಷ್ಯರು, "ಕೆಲವರು ತಮ್ಮನ್ನು 'ಸ್ನಾನಿಕ ಯೊವಾನ್ನ' ಎನ್ನುತ್ತಾರೆ. ಇನ್ನು ಕೆಲವರು 'ಎಲೀಯನು,' ಮತ್ತೆ ಕೆಲವರು ಪ್ರವಾದಿಗಳಲ್ಲಿ ತಾವೂ ಒಬ್ಬರು ಎನ್ನುತ್ತಾರೆ," ಎಂದರು ಆಗ ಯೇಸು, "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?" ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, "ಅಭಿಷಿಕ್ತರಾದ ಲೋಕೋದ್ಧಾರಕ ತಾವೇ" ಎಂದು ಉತ್ತರವಿತ್ತನು. ಆಗ ಯೇಸು, "ಈ ವಿಷಯವನ್ನು ಯಾರಿಗೂ ತಿಳಿಸಬೇಡಿ," ಎಂದು ತಮ್ಮ ಶಿಷ್ಯರಿಗೆ ಕಟ್ಟಪ್ಪಣೆ ಮಾಡಿದರು. ಈ ಘಟಣೆಯ ಬಳಿಕ ಯೇಸುಸ್ವಾಮಿ, "ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ದಾನ ಹೊಂದುವನು." ಎಂದು ತಮ್ಮ ಶಿಷ್ಯರಿಗೆ ಮುಚ್ಚು ಮರೆ ಇಲ್ಲದೆ ಬೋಧಿಸಲಾರಂಭಿಸಿದರು.ಇದನ್ನು ಕೇಳಲಾಗದೆ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು, "ತಾವು ಹೀಗೆಲ್ಲಾ ಹೇಳಬಾರದು," ಎಂದು ಪ್ರತಿಭಟಿಸಿದನು. ಆಗ ಯೇಸು ಹಿಂದಕ್ಕೆ ತಿರುಗಿ, ತಮ್ಮ ಶಿಷ್ಯರನ್ನು ನೋಡಿ ಪೇತ್ರನನ್ನು ಎದರಿಸುತ್ತಾ, "ಸೈತಾನನೇ, ತೊಲಗು ಇಲ್ಲಿಂದ; ನಿನ್ನ ಈ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ," ಎಂದರು.

ಮನಸಿಗೊಂದಿಷ್ಟು : ’ಅಭಿಷಿಕ್ತರಾದ ಲೋಕೋದ್ಧಾರಕ ತಾವೇ’ ಎಂದ ಪೇತ್ರ, ಯೇಸು ಕಠಿಣ ಯಾತನೆಯನ್ನು ಅನುಭವಿಸಬೇಕು ಎಂಬುದನ್ನು ಜೀರ್ಣಿಸಿಕೊಳ್ಳದಾದ. ಯೇಸುವಿನ ಮೇಲಿನ ಆತನ ಪ್ರೀತಿಯಿಂದ ಅದು ಸಹಜವೇ ಆಗಿತ್ತು. ಆದರೆ ದೇವರ ಆಲೋಚನೆ ಅದೆಷ್ಟೇ ಕಠಿಣ ಎನಿಸಿದರೂ ಅದು ಕೊನೆಗೆ ಒಳಿತಿಗಾಗಿಯೇ ಎಂಬ ಸಂದೇಶವನ್ನು ಯೇಸು ಕಟುವಾಗಿಯೇ ನೀಡುತ್ತಾರೆ. ನಮ್ಮ ಬದುಕಿನಲ್ಲಿ ಎಂತಹ  ಪ್ರಳಯ ಬಂದರೂ ಒಂದು ದಿನ ಭರವಸೆಯ ಮಳೆ ಬಿಲ್ಲು ನಮಗಾಗಿ ಕಾದಿದೆ

ಪ್ರಶ್ನೆ: ನೀವು ಯೇಸುವನ್ನು ಯಾರೆನುತ್ತೀರಿ?

No comments:

Post a Comment