ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

05.03.2019 - ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು

ಮೊದಲನೇ ವಾಚನ: ಸಿರಾಖನು 35:1-12 

ರ್ಮಶಾಸ್ತ್ರವನ್ನು ಅನುಸರಿಸುವವನು ಕಾಣಿಕೆಗಳನು ಹೆಚ್ಚಾಗಿ ಅರ್ಪಿಸಿದವನಂತೆ ಆಜ್ಞೆಗಳನ್ನು ಕೈಗೊಳ್ಳುವವನು  ಶಾಂತಿ ಸಮಾಧಾನದ ಬಲಿಯರ್ಪಿಸಿದವನಂತೆ. ಪ್ರತ್ಯುಪಕಾರ ಮಾಡುವವನು ಗೋದಿ ಹಿಟ್ಟನ್ನು ನೈವೇದ್ಯ ಮಾಡಿದವನಂತೆ ದಾನಧರ್ಮ ಮಾಡುವವನು ಸ್ತುತಿ ಬಲಿಯನ್ನು ಅರ್ಪಿಸಿದವನಂತೆ. ದುಷ್ಟತನವನು ಬಿಟ್ಟುಬಿಡುವುದು ಪಾಪಕ್ಕೆ ಪ್ರಾಯಶ್ಚಿತ್ತ. ಸರ್ವೇಶ್ವರನ ಸನ್ನಿಧಿಯನು ಸೇರಬಾರದು ಬರಿಗೈಯಿಂದ. ಇವುಗಳನ್ನೆಲ್ಲ ಮಾಡಬೇಕಾಗಿದೆ ಆತನ ಆಜ್ಞೆಯ ನಿಮಿತ್ತ. ನೀತಿವಂತನ ಅರ್ಪಣೆ ಒಂದು ಅಲಂಕಾರ ಯಜ್ಞವೇದಿಕೆ ಅದರ ಸುವಾಸನೆ ಏರುವುದು ಮಹೋನ್ನತನ ಸನ್ನಿಧಿಗೆ. ಸಮರ್ಪಕವಾಗಿರುವುದು ನೀತಿವಂತ ನೀಡುವ ಬಲಿಕಾಣಿಕೆ ಮರೆತುಹೋಗುವುದಿಲ್ಲ ಅದರ ಸ್ಮರಣೆ. ಉದಾರದೃಷ್ಟಿಯಿಂದ ಸರ್ವೇಶ್ವರನನು ಮಹಿಮೆಪಡಿಸು ಕಡಿಮೆಮಾಡಬೇಡ ನಿನ್ನ ಕೈಯ ಪ್ರಥಮ ಫಲಗಳನು, ಕಾಣಿಕೆ ಕೊಡುವಾಗಲೆಲ್ಲ ಹಸನ್ಮುಖಿಯಾಗಿರು ಸಂತೋಷದಿಂದ ದಶಮಾಂಶವನು ಸಲ್ಲಿಸು. ಮಹೋನ್ನತನು ನಿನಗೆ ಕೊಟ್ಟ ಪ್ರಮಾಣಕ್ಕೆ ಕೊಡು ನಿನ್ನ ಕೈ ಗಳಿಸಿದ ಪ್ರಮಾಣಕ್ಕೆ ಸರಿಯಾಗಿ ಒಳ್ಳೇ ದೃಷ್ಟಿಯಿಂದ ಕೊಡು. ಏಕೆಂದರೆ ಸರ್ವೇಶ್ವರ ಪ್ರತಿಫಲ ನೀಡುವನು ಏಳ್ಮಡಿಯಾಗಿ ನಿನಗೆ ಕೊಡುವನು. ಲಂಚದೋಪಾದಿ ಕಾಣಿಕೆ ತರಬೇಡ, ಆತನು ಅವುಗಳನ್ನು ಅಂಗೀಕರಿಸುವುದಿಲ್ಲ ಅಕ್ರಮವಾದ ಬಲಿಯ ಮೇಲೆ ಮನಸ್ಸಿಡಬೇಡ, ಅತ ನ್ಯಾಯಧೀಶ, ಆತನಲ್ಲಿ ಮುಖದಾಕ್ಷಿಣ್ಯವಿಲ್ಲ.

ಕೀರ್ತನೆ: 50:5-6, 7-8, 14, 23

ಶ್ಲೋಕ: ಪ್ರಭು, ಮೋಡಗಳ ಮಧ್ಯೆ ಬೆಳಗುವ ಬೆಳಗಿನ ಚುಕ್ಕಿಯಂತೆ, ಪೂರ್ಣಚಂದ್ರನಂತೆ

ಶುಭಸಂದೇಶ: ಮಾರ್ಕ 10:28-31


ಗ ಪೇತ್ರನು ಮುಂದೆ ಬಂದು, "ನೋಡಿ ನಾವು ಎಲ್ಲವನ್ನೂ ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ," ಎಂದನು ಆಗ ಯೇಸು "ನಾನು ನಿಶ್ಚಯವಾಗಿ ಹೇಳುತ್ತೇನೆ: ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ ಅವನು, ಈ ಕಾಲದಲ್ಲೇ ಮನೆ, ಅಣ್ಣತಮ್ಮ, ಅಕ್ಕತಂಗಿ, ತಾಯಿ, ಮಕ್ಕಳು, ಹೊಲಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು; ಅದಲ್ಲದೆ ಮುಂದಿನ ಲೋಕದಲ್ಲಿ ಅಮರ ಜೀವವನ್ನು ಪಡೆಯುವನು. "ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು," ಎಂದರು.

ಮನಸಿಗೊಂದಿಷ್ಟು :  ಅಂತೆಯೇ ದೇವರನ್ನು ಹಿಂಬಾಲಿಸುವುದು ಸುಲಭದ ಮಾತಲ್ಲ ಎಂಬುದನ್ನೂ ಹೇಳುತ್ತಾರೆ. ಆಮಿಷಗಳನ್ನು ಒಡ್ಡಿ ದೇವರತ್ತ ಸೆಳೆಯುವವರಿಗೆ ಅಥವಾ ಆಮಿಷಗಳಿಂದ ದೇವರತ್ತ ಸಾಗುವುವವರಿಗೆ ಇದೊಂದು ಎಚ್ಚರಿಕೆಯ ಗಂಟೆಯಾಗಿದೆ. ಅಂತೆಯೇ ದೇವರ ತೀರ್ಪು ಲೋಕ ರೂಢಿಗಿಂತ ಭಿನ್ನವಾದುದು ಎಂಬ ಸಣ್ಣ ಎಚ್ಚರಿಕೆಯನ್ನು ಯೇಸು ನೀಡುತ್ತಾರೆ. ನಾವು ಇತರರಿಗಿಂತ ಮೇಲು ಎಂಬ ನಮ್ಮ ಭಾವ ದೇವರ ಮುಂದೆ ಏನೂ ಇಲ್ಲದ್ದಂತಾಗಬಹುದು.

ಪ್ರಶ್ನೆ : ಯೇಸುವಿನ ನಿಮಿತ್ತ, ಶುಭಸಂದೇಶದ ನಿಮಿತ್ತ ನಾವೇನು ತ್ಯಜಿಸಿದ್ದೇವೆ?

No comments:

Post a Comment