ಮೊದಲನೇ ವಾಚನ: 2 ಸಮುವೇಲ 7:4-5, 12-14, 16
ಸರ್ವೇಶರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು: "ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: "ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ? ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು. ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು. ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು. ನಿನ್ನ ಮನೆತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಂಹಾಸನ ಶಾಶ್ವತವಾಗಿರುವುದು.
ಕೀರ್ತನೆ: 89:2-3, 4-5, 27, 29
ಶ್ಲೋಕ: ಸ್ಥಾಪಿಸುವೆ ಶಾಶ್ವತವಾಗಿನ ನಿನ್ನ ಸಂತತಿಯನ್ನು ಯುಗಯುಗಕ್ಕೂ
ಎರಡನೇ ವಾಚನ: ರೋಮನರಿಗೆ 4:13, 16-18, 22
ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ. ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸವಿಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ. "ನಾನುನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ." ಎಂದು ಪವಿತ್ರಗ್ರಂಥದಲ್ಲೆ ಬರೆದಿದೆ. ಹೌದು ಮೃತರನ್ನು ಜೆವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ಥಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಅತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು. ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆಯಿಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ "ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತವಾಗುವುದು," ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು. ಆದ್ದರಿಃದಲೇ, "ದೇವರು ಆತನನ್ನು ತನ್ನೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು." ಎಂದು ಲಿಖಿತವಾಗಿದೆ.
ಶುಭಸಂದೇಶ: ಮತ್ತಾಯ 1:18-21, 24

ಗರ್ಜಧರಿಸಿರುವುದು spelling mistake
ReplyDeleteಗರ್ಜಧರಿಸಿರುವುದು spelling mistake
ReplyDeleteThanks
ReplyDelete