ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

01.05.2019 - ಅವಿಶ್ವಾಸದ ಕಾರಣ ಯೇಸು ಅದ್ಬುತ ಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.

ಕಾರ್ಮಿಕರ ಪಾಲಕ ಸಂತ ಜೋಸೆಫರ ಹಬ್ಬ 



ಮೊದಲನೇ ವಾಚನ: ಆದಿಕಾಂಡ 1:26-2:3


ದೇವರು, "ನಮ್ಮಂತೆಯೇ ಇರುವ ಹಾಗೂ ನಮ್ಮನ್ನು ಹೋಲುವ ಮನುಷ್ಯರನ್ನು ಉಂಟುಮಾಡೋಣ. ಅವರು ಸಮೂದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕು ಪ್ರಾಣಿ ಹಾಗೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿ ಕೀಟಗಳ ಮೇಲೆಯೂ ದೊರೆತನ ಮಾಡಲಿ," ಎಂದರು. ಹೀಗೆ ದೇವರು: ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ. ಅವರನ್ನು ದೇವರು ಆಶೀರ್ವದಿಸಿ, "ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮೂದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸ ಧಾನ್ಯಗಳನ್ನೂ ಹಣ್ಣು ಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ." ಎಂದು ಹೇಳಿದರು. ಹಾಗೆಯೇ ಆಯಿತು. ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು ಅವೆಲ್ಲವೂ ಬಹಳ ಚೆನ್ನಾಗಿತ್ತು. ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಆ ಏಳನೆಯ ದಿನವು ಪರಿಶುದ್ದವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ, ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.

ಕೀರ್ತನೆ: 90:2, 3-4, 12-13, 14, 16

ಶ್ಲೋಕ: ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ, ಓ ಪ್ರಭೂ

ಶುಭಸಂದೇಶ: ಮತ್ತಾಯ 13:54-58

ಯೇಸು ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆ ಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, "ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ? ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ? ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು?" ಎಂದು ಮಾತನಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು. ಅವರಿಗೆ ಯೇಸು, "ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು," ಎಂದು ಹೇಳಿದರು. ಅವರ ಅವಿಶ್ವಾಸದ ಕಾರಣ ಯೇಸು ಅದ್ಬುತ ಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.

ಮನಸಿಗೊಂದಿಷ್ಟು : ಅದೆಷ್ಟೋ ಬಾರಿ ಸಂದೇಶಗಳು ನಮ್ಮ ಮನಸಿನಾಳದಲ್ಲಿ ಹೊಕ್ಕದಿರಲು ನಮ್ಮದೇ ಆದ ತಡೆಗೋಡೆಗಳು ಅಡ್ಡ ಬರುತ್ತದೆ. ಲೋಕದ ರಕ್ಷಕನೇ ಎದುರಿಗೆ ನಿಂತರೂ ಸ್ವಂತ ಜನರು ಬಡಗಿಗಿಂತ ಮಿಗಿಲಾಗಿ ಯೇಸುವಲ್ಲಿ ಏನನ್ನೂ ಗುರುತಿಸಲಿಲ್ಲ. ದೇವರ ಕಾರ್ಯಗಳು ನಮ್ಮ ಜೀವನದಲ್ಲಿ ನಡೆಯದಿರಲೂ ಎಷ್ಟೋ ಬಾರಿ ನಮ್ಮ ಮನಸಿನಾಳದಲ್ಲಿನ ವಿಶ್ವಾಸದ ಕೊರತೆಯೇ ಕಾರಣವಾಗಬಲ್ಲದು. ಆ ಕೊರತೆ ನೀಗಿಸಿಕೊಳ್ಳೋಣ.

ಪ್ರಶ್ನೆ : ಯೇಸುವನ್ನು ಬರಮಾಡಿಕೊಳ್ಳದಿರಲು ನಮ್ಮೊಳಗಿನ ತಡೆಗೋಡೆಗಳಾವುವು?

30.04.2019 - "ಅವರಲ್ಲಿ ಕೊರತೆಯಿದ್ದವರು ಒಬ್ಬರೂ ಇರಲಿಲ್ಲ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:32-37

ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹದುವಾಗಿ ಹಂಚಿಕೊಳ್ಳುತ್ತಿದ್ದರು. ಪ್ರೇಷಿತರು ಪ್ರಭು ಯೇಸುವಿನ ಪುನರುತ್ದಾನಕ್ಕೆ ಬಹು ಸಾಮರ್ಥ್ಯದಿಂದ ಸಾಕ್ಷಿಕೊಡುತ್ತಿದ್ದರು. ಜನರು ಅವರೆಲ್ಲರನ್ನು ಗೌರವದಿಂದ ಕಾಣುತ್ತಿದ್ದರು. ಅವರಲ್ಲಿ ಕೊರತೆಯಿದ್ದವರು ಒಬ್ಬರೂ ಇರಲಿಲ್ಲ. ಕಾರಣ - ಹೊಲಗದ್ದೆ, ಮನೆಮಾರು ಇದ್ದವರೆಲ್ಲರೂ ಅವುಗಳನ್ನು ವಿಕ್ರಯಿಸಿ, ಬಂದ ಹಣವನ್ನು ತಂದು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸುತ್ತಿದ್ದರು. ಇವರು ಅದನ್ನು ಪ್ರತಿ ಒಬ್ಬರಿಗೂ ಅವರವರ ಅವಶ್ಯಕತೆಗೆ ತಕ್ಕಂತೆ ಹಂಚುತ್ತಿದ್ದರು. ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ "ಬಾರ್ನಬ" (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು. ಇವನು ತನ್ನ ಜಮೀನನ್ನು ಮಾರಿ ಬಂದ ಹಣವನ್ನು ಪ್ರೇಷಿತರಿಗೆ ಪಾದ ಕಾಣಿಕೆಯಾಗಿ ಒಪ್ಪಿಸಿದನು.

ಕೀರ್ತನೆ: 93:1-2, 5
ಶ್ಲೋಕ: ವಹಿಸಿಹನು ಪ್ರಭು ರಾಜ್ಯಾಧಿಕಾರವನು ಧರಿಸಿಹನು ಘನತೆಯ ವಸ್ತ್ರಾಲಾಂಛನವನು

ಶುಭಸಂದೇಶ: ಯೊವಾನ್ನ  3:7-15

ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ. ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮನಿಂದ ಹುಟ್ಟದ ಪ್ರತಿಯೊಬ್ಬನೂ ಅದರಂತೆಯೇ," ಎಂದು ಹೇಳಿದರು. ಅದಕ್ಕೆ ನಿಕೊದೇಮನು, "ಇದೆಲ್ಲಾ ಹೇಗೆ ಸಾಧ್ಯ?" ಎಂದು ಕೇಳಿದನು ಆಗ ಯೇಸು, "ಇಸ್ರಯೇಲಿನ ಹೆಸರಾಂತ ಬೊಧಕನಾದ ನಿನಗೇ ಇದು ಅರ್ಥವಾಗಲಿಲ್ಲವೆ? ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದಿದನ್ನೇ ಕುರಿತು ನಾವು ಮಾತನಾಡುತ್ತೇವೆ; ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ದರಿಲ್ಲ. ಭೂಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಾಗಲೇ ನಿಮಗೆ ವಿಶ್ವಾಸವಿಲ್ಲವೆಂದ ಮೇಲೆ, ಸ್ವರ್ಗಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಲ್ಲಿ ನೀವು ವಿಶ್ವಾಸಿಸುವುದು ಉಂಟೆ? ಸ್ವರ್ಗಲೋಕದಿಂದಲೇ ಇಳಿದು ಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿ ಹೋದವರಿಲ್ಲ. "ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು. ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು."

ಮನಸಿಗೊಂದಿಷ್ಟು :  ’ಏರಿಸಬೇಕು’  ಎಂಬುದು ಇಲ್ಲಿ ಮತ್ತೆ ಬಹಳ ಅರ್ಥಗರ್ಭಿತವಾಗಿ ಬಳಕೆಯಾಗಿದೆ. ಶಿಲುಬೆಗೆ ಏರುವುದು ಮಾತ್ರವಲ್ಲದೆ, ಮತ್ತೆ ಮಹಿಮಾಭರಿತವಾಗಿ ಎದ್ದು ಬರುವುದು ಎಂಬ ಅರ್ಥವನ್ನು ತರುತ್ತದೆ. ಯೇಸು ಶಿಲುಬೆಗೆ ಏರಿದ್ದೇ ಮತ್ತೆ ಸಾವನ್ನು ಜಯಸಿ ಏರಿ ಬಂದದ್ದಕ್ಕೆ ದಾರಿಯಾಯಿತು. ಶಿಲುಬೆಯಿಲ್ಲದೆ ಪುನರುತ್ಥಾನವಿಲ್ಲ ಎಂಬುದು ಕ್ರೈಸ್ತರಾದ ನಮಗೆ ನಿತ್ಯ ಸತ್ಯವಾಗಿದೆ.

ಪ್ರಶ್ನೆ :  ನಿತ್ಯ ಜೀವದ ಬಗ್ಗೆ ನಮ್ಮ ವಿಶ್ವಾಸವೆಷ್ಟು?

29.04.2019 - "ದೇವರ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:23-31

ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆ ಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯ ಯಾಜಕರು ಹಾಗೂ ಪ್ರಜಾಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು. ಈ ಸಮಾಚಾರವನ್ನು ಕೇಳಿದ ಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: "ಪ್ರಭುವೇ, ಇಹಪರಗಳನ್ನೂ ಸಮುದ್ರ ಸಾಗರಗಳನ್ನೂ ಆತ ಅಭಿಷೇಕಿಸಿದವನಿಗೂ ವಿರುದ್ಧ 'ಅನ್ಯಧರ್ಮಿಯರೇಕೆ ರೋಷಭರಿತರಾದರು? ಜನರೇಕೆ ವ್ಯರ್ಥ ಒಳಸಂಚು ಹೂಡಿದರು? ಲೋಕಾಧಿಪತಿಗಳೇಕೆ ಸನ್ನದ್ಧರಾದರು? ಜನನಾಯಕರೇಕೆ ಸಮಾಲೋಚಿಸಿದರು?" ಎಂದು ನಮ್ಮ ಪಿತಮಹ ಹಾಗೂ ನಿಮ್ಮ ದಾಸನಾದ ದಾವೀದನ ಬಾಯಿಂದ ನುಡಿಸಿದಿರಿ. ಅಂತೆಯೇ, ನಿಮ್ಮ ಪರಮಪೂಜ್ಯ ದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು. ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು. ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ. ಸ್ವಸ್ಥಪಡಿಸುವ ನಿಮ್ಮ ಅಮೃತ ಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಬುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ." ಹೀಗೆಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ತಾತ್ಮಭರಿತರಾದರು. ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.

ಕೀರ್ತನೆ: 2:1-3, 4-7, 7-9

ಶ್ಲೋಕ: ದೇವರನ್ನು ಆಶ್ರಯಿಸುವವರಿಗಿದೆ ಸೌಭಾಗ್ಯ, ಸಂತೋಷ.

ಶುಭಸಂದೇಶ: ಯೊವಾನ್ನ 3:1-8


ನಿಕೊದೇಮನೆಂಬ ಫರಿಸಾಯನು ಇದ್ದನು. ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸುಸ್ವಾಮಿಯ ಬಳಿಗೆ ಬಂದು, "ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕ ಕಾರ್ಯಗಳನ್ನು ಮಾಡಲು ಆಗದು," ಎಂದು ಹೇಳಿದನು. ಆಗ ಯೇಸು, "ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ," ಎಂದು ಹೇಳಿದರು. ಅದಕ್ಕೆ ನಿಕೊದೇಮನು, ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರು ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?" ಎಂದು ಕೇಳಿದನು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ನಾನು, ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು. ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ. ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ. ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ. ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ," ಎಂದು ಹೇಳಿದರು.

ಮನಸಿಗೊಂದಿಷ್ಟು : ಒಳ್ಳೆಯ ಸಾಮಾಜಿಕ ಸ್ಥಾನಮಾನ ಇದ್ದರೂ ನಿಕೊದೇಮನಲ್ಲೊಂದು ಗೊಂದಲವಿತ್ತು. ಅದಕ್ಕಿಂತ ಹೆಚ್ಚಾಗಿ ಒಳ್ಳೆಯದೆಡೆಗಿನ ತುಡಿತವಿತ್ತು. ಸ್ಥಾನಮಾನದಿಂದಾಗಿ ಯೇಸುವಿನೊಂದಿಗೆ ಬಹಿರಂಗವಾಗಿ ಗುರುತಿಸಿಕೊಳ್ಳಲಾಗದ ಕತ್ತಲ ಸ್ಥಿತಿ. ಆ ಸ್ಥಿತಿಯಿಂದ ಯೇಸು ಅವನ ಗೊಂದಲ, ಪ್ರಶ್ನೆಗಳಿಗೆ ಬೆಳಕು ಚೆಲ್ಲುತ್ತಾರೆ. ನಮ್ಮ ಜೀವನದ ಕತ್ತಲ ಆಯಮಗೆಳಿಗೆ ನಾವು ಹೋಗಬೇಕಾದುದು ಯೇಸುವಿನ ಬಳಿಗೇ. ಖಂಡಿತ ಬೆಳಕು ನಮ್ಮದಾಗುತ್ತದೆ.

ಪ್ರಶ್ನೆ : ಹೊಸದಾಗಿ ಹುಟ್ಟಲು ನಾವು ಸಿದ್ಧರಾಗಿದ್ದೇವೆಯೇ?

28.04.2019 - "ನನ್ನ ಪ್ರಭುವೇ, ನನ್ನ ದೇವರೇ,"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 5:12-16


ಜನರೆಲ್ಲರ ಕಣ್ಮುಂದೆ ಆನೇಕ ಅದ್ಬುತ ಕಾರ್ಯಗಳೂ ಸೂಚಕಕಾರ್ಯಗಳೂ ಪ್ರೇಷಿತರ ಮುಖಾಂತರ ನಡೆಯುತ್ತಿದ್ದವು. ಭಕ್ತವಿಶ್ವಾಸಿಗಳೆಲ್ಲರೂ ಸೊಲೊಮೋನನ ಮಂಟಪದಲ್ಲಿ ಸಭೆ ಸೇರುತ್ತಿದ್ದರು ಹೊರಗಿನವರು ಅವರನ್ನು ಬಹಾಳವಾಗಿ ಹೊಗಳುತ್ತಿದ್ದರೂ ಅವರ ಸಂಗಡ ಸೇರಲು ಯಾರಿಗೂ ಧೈರ್ಯವಿರಲಿಲ್ಲ. ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು. ಪೇತ್ರನು ಹಾದು ಹೋಗುವಾಗ ಆತನ ನೆರಳಾದರೂ ಕೆಲವರ ಮೇಲೆ ಬೀಳಲೆಂದು ಜನರು ರೋಗಿಗಳನ್ನು ಹಾಸಿಗೆ ಅಥವಾ ಡೋಲಿಗಳ ಸಮೇತ ಹೊತ್ತುತಂದು ಹಾದಿಗಳಲ್ಲಿ ಮಲಗಿಸುತ್ತಿದ್ದರು. ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದಲೂ ರೋಗಿಗಳನ್ನು ಮತ್ತು ಪಿಶಾಚಿ ಪೀಡಿತರನ್ನು ಜನರು ತರುತ್ತಿದ್ದರು; ಎಲ್ಲರೂ ಸ್ವಸ್ಥರಾಗುತ್ತಿದ್ದರು.

ಕೀರ್ತನೆ: 118: 2-4, 13-15, 22-24

ಶ್ಲೋಕ: ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ.

ಎರಡನೇ ವಾಚನ: ಪ್ರಕಟನಾಗ್ರಂಥ 1:9-11, 12-13, 17-19

ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತಯೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ, ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.  ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು. ಅದು ಹೀಗೆಂದು ನುಡಿಯಿತು: "ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು." ನನ್ನ ಸಂಗಡ ಮಾತನಾಡುತ್ತಿರುವ ಈ ಶಬ್ದ ಯಾರದೆಂದು ನೋಡಲು ನಾನು ಹಿಂದಕ್ಕೆ ತಿರುಗಿದೆ. ಹಾಗೆ ತಿರುಗಿದಾಗ, ಏಳು ಚಿನ್ನದ ದೀಪಸ್ತಂಭಗಳನ್ನು ಕಂಡೆ. ಆ ದೀಪಸ್ತಂಭಗಳ ನಡುವೆ "ನರಪುತ್ರ"ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು. ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, "ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನು ಆಗಿದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗ ಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ. ಆದುದರಿಂದ ನೀನು ಕಂಡ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ,"ಎಂದರು.

ಶುಭಸಂದೇಶ: ಯೊವಾನ್ನ  20:19-31

ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು.  ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು ಆಗ ಯೇಸು ಬಂದು ಅವರ ನಡುವೆ ನಿಂತರು. "ನಿಮಗೆ ಶಾಂತಿ" ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. ಯೇಸು ಪನಃ, "ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನು ನಿಮ್ಮನ್ನು ಕಳುಹಿಸುತ್ತೇನೆ,"ಎಂದರು. ಅನಂತರ ಅವರ ಮೇಲೆ ಉಸಿರೂದಿ, "ಪವಿತ್ರಾತ್ಮರನ್ನು ಸ್ವೀಕರಿಸಿರಿ. ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು," ಯಾರ ಪಾಪಗಳನ್ನು ನೀವು ಕ್ಷಮಿಸದೆ ಉಳಿಸುತ್ತಿರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು," ಎಂದು ನುಡಿದರು. ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸುಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ. ಉಳಿದ ಶಿಷ್ಯರು "ನಾವು ಪ್ರಭುವನ್ನು ನೋಡಿದೆವು," ಎಂದು ಹೇಳಿದರು. ಅದಕ್ಕೆ ಅವನು, "ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು, ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ," ಎಂದುಬಿಟ್ಟನು. ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನು ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, "ನಿಮಗೆ ಶಾಂತಿ" ಎಂದರು. ಆಮೇಲೆ ತೋಮನಿಗೆ, "ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಹಿರಬೇಡ, ವಿಶ್ವಾಸಿಸು," ಎಂದು ಹೇಳಿದರು. ಆಗ ತೋಮನು, "ನನ್ನ ಪ್ರಭುವೇ, ನನ್ನ ದೇವರೇ," ಎಂದನು. ಯೇಸು ಅವನಿಗೆ "ನನ್ನನ್ನು ಕಂಡದ್ದರಿಂದ ತಾನೇ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು," ಎಂದು ಹೇಳಿದರು. ಯೇಸು ತಮ್ಮ ಶಿಷ್ಯರ ಕಣ್ಮಂದೆ ಮಾಡಿದ ಸೂಚಕಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನು ಈ ಪುಸ್ತಕದಲ್ಲಿ ಬರೆದಿಲ್ಲ. ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ: ಯೇಸು, ದೇವರ ಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಲ್ಲಿ ಸಜ್ಜೀವವನ್ನು ಪಡೆಯಬೇಕು.

ಮನಸಿಗೊಂದಿಷ್ಟು : ತೋಮ ಸಂದೇಹಪಟ್ಟ ಎಂಬುದು ಪ್ರಚಲಿತ ಸಂಗತಿ.  ಅದರೆ ಸಂದೇಹ ಪರಿಹಾರವಾದ ಮೇಲೆ ಶುಭ ಸಂದೇಶವನ್ನು ಸಾರಲು ತೋರಿದ ಬದ್ಧತೆ ಐತಿಹಾಸಿಕ. ಈಗಾಗಲೇ ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಭದ್ರವಾದ ಅಡಿಪಾಯ ಹೊಂದಿದ್ದ ದೂರದ ಭಾರತ ದೇಶಕ್ಕೆ ಬಂದು , ಹೊಸ ಧರ್ಮವನ್ನು ಸಾರುವುದು ಸುಲಭದ ವಿಷಯವಲ್ಲ. ಅಂತಹ ಸಾಧನೆಗೈದ ತೋಮಾಸ್ ಕೊನೆಗೆ ನೆನಪಿನಲ್ಲಿ ಉಳಿಯುವುದು ಸಂದೇಹಪಟ್ಟಿದಕ್ಕಲ್ಲ. ಬದಲಾಗಿ ಯೇಸುವನ್ನು ಸಮರ್ಥವಾಹಿ ಸಾರಿ, ಅಮರವಾದುದ್ದಕ್ಕೆ.್

ಪ್ರಶ್ನೆ : ನಮ್ಮ ವಿಶ್ವಾಸ ಎಷ್ತು ಆಳ?

27.04.2019 - ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:13-21

ಅವಿದ್ಯಾವಂತರು ಹಾಗೂ ಜನ ಸಾಮಾನ್ಯರು ಆಗಿದ್ದರೂ, ಪ್ರೇಷಿತರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು ಗುಣ ಹೊಂದಿದ್ದ ಆ ಮನುಷ್ಯನು ಪೇತ್ರ ಮತ್ತು ಯೊವಾನ್ನರ ಜೋತೆ ನಿಂತಿರುವುದನ್ನು ಕಂಡು ನಿರುತ್ತರರಾದರು. ಸಭಾಕೂಟದಿಂದ ಪ್ರೇಷಿತರನ್ನು ಹೊರಗೆ ಕಳುಹಿಸಿ ತಮ್ಮೊಳಗೆ ಚರ್ಚಿಸಲಾರಂಭಿಸಿದರು: "ಇವರನ್ನು ಏನು ಮಾಡೋಣ? ಇವರು ಮಾಡಿರುವ ಅಪರೂಪ ಅದ್ಬುತ ಜೆರುಸಲೇಮಿನ ಸರ್ವರಿಗೂ ತಿಳಿದು ಹೋಗಿದೆ. ಅದನ್ನು ಅಲ್ಲಗಳೆಯುವಂತಿಲ್ಲ. ಆದರೂ, ಈ ಸಮಾಚಾರ ಜನರಲ್ಲಿ ಮತ್ತಷ್ಟು ಹರಡದಂತೆ ಇನ್ನು ಮೇಲೆ ಯಾರ ಬಳಿಯಲ್ಲೂ ಯೇಸುವಿನ ಹೆಸರೆತ್ತದಂತೆ ಇವರಿಗೆ ಎಚ್ಚರಿಕೆ ಕೊಡೋಣ," ಎಂದುಕೊಂಡರು. ಅನಂತರ ಪ್ರೇಷಿತರನ್ನು ಒಳಕ್ಕೆ ಕರೆದು, "ಇನ್ನು ಮುಂದೆ ಯೇಸುವಿನ ಹೆಸರೆತ್ತಿ ಮಾತನಾಡಬಾರದು, ಭೋಧಿಸ ಕೂಡದು," ಎಂದು ಕಟ್ಟಪ್ಪಣೆ ಮಾಡಿದರು ಆಗ ಪೇತ್ರ ಮತ್ತು ಯೊವಾನ್ನರು, "ನಾವು ದೇವರಿಗೆ ವಿಧೇಯರಾಗಿರಬೇಕೋ? ನಿಮಗೆ ವಿಧೇಯರಾಗಿರಬೇಕೋ ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ. ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯವನ್ನು ಕುರಿತು ಮೌನದಿಂದಿರಲಾಗದು," ಎಂದು ಬದಲು ನುಡಿದರು ನಡೆದ ಅದ್ಬುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆ ಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.

ಕೀರ್ತನೆ: 118:1, 14-15, 16-18, 19-21

ಶ್ಲೋಕ: ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ


ಶುಭಸಂದೇಶ: ಮಾರ್ಕ 16:9-15


ಭಾನುವಾರ ಮುಂಜಾನೆ ಪುನರುತ್ದಾನ ಹೊಂದಿದ ಯೇಸುಸ್ವಾಮಿ, ಮೊತ್ತಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡರು ಅವರು ಏಳು ದೆವ್ವಗಳನ್ನು ಹೊರಗಟ್ಟಿದ್ದು ಈಕೆಯಿಂದಲೇ. ಈಕೆ ಹೋಗಿ ತಾನು ಕಂಡದ್ದನ್ನು ಯೇಸುವಿನ ಸಂಗಡಿಗರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಾ ಕುಳಿತ್ತಿದ್ದರು. ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ ಅವರು ಅದನ್ನು ನಂಬಲೇ ಇಲ್ಲ ತರುವಾಯ, ಹಳ್ಳಿಯೊಂದಕ್ಕೆ ಪ್ರಯಾಣ ಮಾಡುತ್ತಿದ್ದ ತಮ್ಮ ಇಬ್ಬರು ಶಿಷ್ಯರಿಗೆ ಯೇಸುಸ್ವಾಮಿ ಇನ್ನೊಂದು ರೀತಿಯಲ್ಲಿ ಕಾಣಿಸಿಕೊಂಡರು. ಇವರಿಬ್ಬರೂ ಹಿಂದಿರುಗಿ  ಬಂದು, ಮಿಕ್ಕ ಶಿಷ್ಯರಿಗೆ ಇದನ್ನು ತಿಳಿಸಿದರು. ಆದರೆ ಅದನ್ನು ಅವರು ನಂಬದೆ ಹೋದರು. ಆನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ದಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು. ಬಳಿಕ ಅವರಿಗೆ, "ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ," ಎಂದರು.

ಮನಸಿಗೊಂದಿಷ್ಟು : ಇಂದಿನ ಶುಭ ಸಂದೇಶ ಪ್ರತಿಯೊಬ್ಬ ಕ್ರೈಸ್ತನ ಕರ್ತವ್ಯವನ್ನು ನೆನಪಿಸುತ್ತಾ ಮುಗಿಯುತ್ತದೆ. ಶುಭ ಸಂದೇಶವನ್ನು ಸಾರದವರು ಖಂಡನೆಗೆ ಗುರಿಯಾಗದಿದ್ದರೂ ಯೇಸುವಿನ ನಿರಾಸೆಗಂತೂ ಖಂಡಿತ ಪ್ರಾತ್ರರು. ಯೇಸುವಿನ ಜೀವನ, ಪುನರುತ್ಥಾನವನ್ನು ಕೇಳಿ ಓದಿ, ವಿಶ್ವಾಸಿರುವ ನಾವು ಅಷ್ಟಕ್ಕೆ ತೃಪ್ತರಾಗದೆ ಯೇಸುವಿನ ಶುಭಸಂದೇಶ ಆಶಯಗಳನ್ನು ಜಗದಲ್ಲಿ ಸಾರಲು ಕರೆ ಹೊಂದಿದವರಾಗಿದ್ದೇವೆ.

ಪ್ರಶ್ನೆ :  ಶುಭಸಂದೇಶವನ್ನು ನಾವು ಪ್ರಬೋಧಿಸುತ್ತಿದ್ದೇವೆಯೇ?  

26.04.2019 - "ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೆ?"


ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:1-12

ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರು ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು. ಯೇಸುವಿನ ಪುನರುತ್ದಾನದ ಆದ್ಧಾರದ ಮೇಲೆ ಮೃತರಾದ ಎಲ್ಲರೂ ಪುನರುತ್ದಾನ ಹೊಂದುವರು ಎಂದು ಈ ಇಬ್ಬರು ಪ್ರೇಷಿತರು ಭೋಧಿಸುತ್ತಿದ್ದರು. ಇದನ್ನು ಕೇಳಿ ಸಿಟ್ಟುಗೊಂಡಿದ್ದ ಅವರು ಪೇತ್ರಯೊವಾನ್ನರನ್ನು ಬಂಧಿಸಿದರು. ಆಗಲೇ ಹೊತ್ತು ಮೀರಿದ್ದರಿಂದ ಮಾರನೆಯ ದಿನದವರೆಗೆ ಅವರನ್ನು ಸೆರೆಮನೆಯಲ್ಲಿಟ್ಟರು. ಆದರೆ ಪ್ರೇಷಿತರ ಭೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖೆ ಸುಮಾರು ಐದು ಸಾವಿರಕ್ಕೆ ಏರಿತು. ಮಾರನೆಯ ದಿನ ಯೆಹೂದ್ಯ ಅಧಾಕಾರಿಗಳೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಜೆರುಸಲೇಮಿಗಲ್ಲಿ ಸಭೆ ಸೇರಿದರು. ಪ್ರಧಾನ ಯಾಜಕ ಅನ್ನಾ ಹಾಗೂ ಕಾಯಫಯೊವಾನ್ನಅಲೆಕ್ಸಂಡರ್ ಮತ್ತು ಪ್ರಧಾನ ಯಾಜಕನ ಕುಟುಂಬದವರು ಆ ಸಭೆಯಲ್ಲಿ ಹಾಜರಿದ್ದರು. ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, "ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ?" ಎಂದು ಪ್ರಶ್ನಿಸಿದರು. ಪ್ರೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: "ಜನರ ಅಧಿಕಾರಿಗಳೇಪ್ರಮುಖರೇನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆಅವನು ಸ್ವಸ್ಥನಾದುದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ. ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ  ಈ ವಿಷಯ ತಿಳಿದಿರಲಿ: ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ. ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ದಾನಗೊಳಿಸಿದ್ದಾರೆ. "ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು" ಎಂದು ಬರೆದಿರುವುದು ಇವರನ್ನು ಕುರಿತೇ. ಇವರಿಂದಲ್ಲದೆ ಬೇರೆಯಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ."

ಕೀರ್ತನೆ: 118:1-2, 4, 22-24, 25-27

ಶ್ಲೋಕ: ಮನೆಕಟ್ಟುವವರು ಮೂಲೆಗೆಸೆದ ಕಲ್ಲುಆಯಿತು ನೋಡುಮುಖ್ಯವಾದ ಮೂಲೆಗಲ್ಲು

ಶುಭಸಂದೇಶ: ಯೊವಾನ್ನ 21:1-14


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೊಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು: ಸಿಮೋನ ಪೇತ್ರನುದಿದುಮನೆಂಬ ತೋಮನುಗಲೆಲೇಯದ ಕಾನಾ ಊರಿನ ನತಾನಯೇಲನುಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿದ್ದರು. ಆಗ ಸಿಮೋನ ಪೇತ್ರನು, "ನಾನು ಮೀನು ಹಿಡಿಯಲು ಹೋಗುತ್ತೇನೆ," ಎಂದನು. ಮಿಕ್ಕವರು, "ನಾವೂ ನಿನ್ನೊಡನೆ ಬರುತ್ತೇವೆ," ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು. ಆ ರಾತ್ರಿಯೆಲ್ಲಾ ಅವರಿಗೆ ಒಂದು ಮೀನೂ ಸಿಗಲಿಲ್ಲ. ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರು ಯೇಸು ಎಂದು ಶಿಷ್ಯರಿಗೆ  ಹೊಳೆಯಲಿಲ್ಲ. ಯೇಸು ಅವರಿಗೆ "ಮಕ್ಕಳೇಊಟಕ್ಕೆ ಏನಾದರೂ ಸಿಕ್ಕಿತೆಎಂದು ಕೇಳಿದರು. "ಏನೂ ಇಲ್ಲ," ಎಂದರು ಅವರು. "ದೋಣಿಯ ಬಲಗಡೆ ಬಲೆ ಬೀಸಿರಿಮೀನುಗಳು ಸಿಗುತ್ತವೆ," ಎಂದು ಯೇಸು ಹೇಳಲು ಅವರು ಹಾಗೆಯೇ ಮಾಡಿದರು. ಆಗ ಮೀನುಗಳು ರಾಶಿರಾಶಿಯಾಗಿ ಸಿಕ್ಕಿದವು. ಬಲೆಯನ್ನು ಎಳೆಯಲೂ ಆಗದೆ ಹೋಯಿತು. ಆಗ ಆಗ ಯೇಸುವಿನ ಆಪ್ತ ಶಿಷ್ಯನು ಪೇತ್ರನಿಗೆ, "ಅವರೇ ಪ್ರಭು" ಎಂದನು. ಪ್ರಭುವೆಂದು ಕೇಳಿದ್ದೇ ತಡಬರೀ ಮೈಯಲ್ಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿದನು. ಮಿಕ್ಕ ಶಿಷ್ಯರು ಮೀನು ತುಂಬಿದ್ದ ಬಲೆಯನ್ನು ಎಳೆಯುತ್ತಾ ಸುಮಾರು ಮುನ್ನೂರು ಅಡಿ ದೂರದಲ್ಲಿ ಇದ್ದ ದಡಕ್ಕೆ ದೋಣಿಯಲ್ಲೇ ಬಂದರು. ಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ಮೀನುಗಳಿದ್ದವು ರೊಟ್ಟಿಯೂ ಅಲ್ಲಿತ್ತು. ಯೇಸು ಅವರಿಗೆ, "ನೀವು ಈಗ ತಾನೇ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿ," ಎಂದು ಹೇಳಿದರು. ಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ  ಎಳೆದು ತಂದನು. ಬಲೆಯ ತುಂಬ ದೊಡ್ಡ ಮೀನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ. ಯೇಸು ಅವರಿಗೆ, "ಬಂದು ಊಟಮಾಡಿ," ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ  ಒಬ್ಬನಿಗಾದರೂ, "ನೀವು ಯಾರು?" ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ. ಯೇಸು ಹತ್ತಿರಕ್ಕೆ ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರುಹಾಗೆಯೇ ಮೀನನ್ನೂ ಕೊಟ್ಟರು. ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.

ಮನಸಿಗೊಂದಿಷ್ಟು : ಯೊವಾನ್ನನ ಶುಭಸಂದೇಶದಲ್ಲಿ ಪ್ರತಿಯೊಂದು ಪದಕ್ಕೂ, ವಾಕ್ಯಕ್ಕೂ ಆಳವಾದ ಅರ್ಥಗಳಿವೆ ಎನ್ನುವುದು ಪ್ರಚಲಿತವಾದ ಸಂಗತಿ.  ಅಂತೆಯೇ ಯೇಸುವಿನ ಪುನರುತ್ಥಾನದ ಸತ್ಯಾಸತ್ಯತೆಯನ್ನು ಸ್ಪಷ್ಟವಾಗಿ ದೃಢಪಡಿಸುವುದು ಇಂದಿನ ಶುಭಸಂದೇಶದ ವಾಕ್ಯಗಳು. ಅಂತಹ ಅರ್ಥಗಳಲ್ಲಿ ಬಹಳ ಭರವಸೆಯುಕ್ತವಾದುದು ಅಷ್ಟು ಮೀನುಗಳಿದ್ದರೂ ಬಲೆ ಹರಿಯಲಿಲ್ಲ ಎನ್ನುವುದು. ಈ ಧರ್ಮಸಭೆ ಹಾಗೂ ದೈವ ಸಾಮ್ರಾಜ್ಯದಲ್ಲಿ ಎಲ್ಲರಿಗೂ ಸ್ಥಾನವಿದೆ, ಅದಕ್ಕೆ ಬೇಧ ಭಾವವಿಲ್ಲ, ಬರಲು ಬಯಸುವ ಎಲ್ಲರನ್ನೂ ತನ್ನ ಪ್ರೀತಿಯ ಬಲೆಯಲ್ಲಿ ಹಿಡಿದಿಟ್ಟುಕೊಳ್ಳುತ್ತದೆ. ಆ ಬಂಧನಕ್ಕೆ ಒಳಗಾಗಲು ಹಾತೊರೆಯೋಣ.

ಪ್ರಶ್ನೆ :  ಯೇಸುವಿನ ಬಲೆ ನಮಗೆ ಬಂಧನವೇ? ನಮ್ಮ ಬಿಡುಗಡೆಯೇ? 


25.04.2019 - ಅವರ ಬುದ್ಧಿಯನ್ನು ವಿಕಾಸಗೊಳಿಸಿದರು

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 3:11-26


"ಸೊಲೊಮೋನನ ಮಂಟಪದಲ್ಲಿ ಪೇತ್ರ ಮತ್ತು ಯೊವಾನ್ನರ ಜೊತೆ ಗುಣಹೊಂದಿದ ಆ ಭಿಕ್ಷುಕನು ಇನ್ನೂ ನಿಂತಿದ್ದನು. ಆಶ್ಚರ್ಯಭರಿತರಾದ ಜನರು ಅಲ್ಲಿಗೆ ಓಡಿಬಂದರು. ಇದನ್ನು ನೋಡಿ ಪೇತ್ರನು ಇಂತೆಂದನು: "ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ  ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ  ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ? ಪಿತಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ. ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ. ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ದಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು. ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ, "ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ. ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ. ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು. ಸರ್ವೇಶ್ವರನ  ಸಾನ್ನಿಧ್ಯ ಸೌಭಾಗ್ಯವು ನಿಮ್ಮದಾಗುವುದು; ನಿಮಗೋಸ್ಕರ ನೇಮಿತರಾದ ಉದ್ಧಾರಕ ಯೇಸುವನ್ನು  ಕಳುಹಿಸುವರು. ಸಮಸ್ತವನ್ನೂ ಪುನರ್ ಸ್ಥಾಪನೆಗೊಳಿಸುವವರೆಗೆ ಕ್ತಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ. "ಸರ್ವೇಶ್ವರನಾದ ದೇವರು ನನ್ನನ್ನು ಕಳುಹಿಸಿದಂತೆಯೇ ನಿಮಗೊಬ್ಬ ಪ್ರವಾದಿಯನ್ನು ಕಳುಹಿಸಿದರು. ಆತನು ನಿಮ್ಮ ಸ್ವಂತ ಜನಾಂಗದವನಾಗಿರುವನು. ಆತನು ಹೇಳುವುದನ್ನೆಲ್ಲಾ ನೀವು ಕೇಳಬೇಕು ಆ ಪ್ರವಾದಿಗೆ ಕಿವಿಗೊಡದವನು ದೇವಜನರಿಂದ ದೂರವಾಗಿ ನಾಶವಾಗುತ್ತಾನೆ," ಎಂದು ಮೋಶೆ ಹೇಳಿದ್ದಾನೆ. ಸಮುವೇಲನೂ ಅವನ ನಂತರ ಬಂದ ಎಲ್ಲ ಪ್ರವಾದಿಗಳೂ ಈ ದಿನಗಳಲ್ಲಿ ನಡೆಯುತ್ತಿರುವುದನ್ನು ದೈವಚಿತ್ತವಾಗಿ ಸಾರಿದ್ದಾರೆ. ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು; ಪೂರ್ವಜ ಅಬ್ರಹಾಮನಿಗೆ, "ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರು" ಎಂದಿದ್ದಾರೆ ದೇವರು. ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ ನಿಮ್ಮೆಲ್ಲರನ್ನು ದುಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.

ಕೀರ್ತನೆ: 8:2, 5, 6-7, 8-9

ಶ್ಲೋಕ: ಪ್ರಭೂ, ಓ ನಮ್ಮ ಪ್ರಭೂ, ಎನಿತು ಮಹಿಮಾನ್ವಿತ ಹರಡಿದೆ ನಿನ್ನ ಸಿರಿನಾಮ ಜಗದಾದ್ಯಂತ

ಶುಭಸಂದೇಶ: ಲೂಕ 24:35-48

ಆಗ ಶಿಷ್ಯರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿ ಮುರಿದು ಕೊಡುವಾಗ ಸ್ವಾಮಿಯನ್ನು ತಾವು ಗುರುತು ಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿ ಮಾಡಿದರು. ಅವರು ವರದಿ ಮಾಡುತ್ತಿದ್ದಂತೆ ಯೇಸುಸ್ವಾಮಿಯೇ ಅವರ ಮಧ್ಯೆ ಪ್ರತ್ಯಕ್ಷವಾಗಿ ನಿಂತು, "ನಿಮಗೆ ಶಾಂತಿ",  ಎಂದರು. ಅವರೆಲ್ಲರೂ ಚಕಿತರಾಗಿ, ದಿಗಿಲುಗೊಂಡು, ತಾವು ಕಾಣುತ್ತಿರುವುದು ಭೂತವೆಂದು ಭಾವಿಸಿದರು. ಆಗ ಯೇಸು, "ಏಕೆ ಕಳವಳಪಡುತ್ತೀರಿ? ನಿಮ್ಮ ಮನಸ್ಸಿನಲ್ಲಿ ಸಂಶಯವೇಕೆ? ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿ, ನಾನೇ ಅಲ್ಲವೇ? ನನ್ನನ್ನು ಮುಟ್ಟಿ ನೋಡಿರಿ, ನೀವು ನನ್ನಲ್ಲಿ ಕಾಣುವಂತೆ, ಮಾಂಸ ಮತ್ತು ಎಲುಬು ಭೂತಕ್ಕೆ ಇರುವುದಿಲ್ಲ" ಎಂದರು.  (ಇಂತೆಂದ ಮೇಲೆ ತಮ್ಮ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದರು.) ಶಿಷ್ಯರು ಇನ್ನೂ ನಂಬದೆ, ಆನಂದಾಶ್ಚರ್ಯಭರಿತರಾಗಿದ್ದರು. ಆಗ ಯೇಸು, ನಿಮ್ಮಲ್ಲಿ ತಿನ್ನಲು ಏನಾದರೂ ಇದೆಯೇ?" ಎಂದು ಕೇಳಿದರು. ಹುರಿದ ಮೀನಿನ ತುಂಡೊಂದನ್ನು ಶಿಷ್ಯರು ಕೊಟ್ಟರು. ಯೇಸು ಅದನ್ನು ತೆಗೆದುಕೊಂಡು ಅವರ ಎದುರಿಗೇ  ತಿಂದರು. ತರುವಾಯ ಯೇಸುಸ್ವಾಮಿ, "ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು," ಎಂದರು. ಆಮೇಲೆ, ಪವಿತ್ರಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ಧಿಯನ್ನು ವಿಕಾಸಗೊಳಿಸಿದರು. ಅನಂತರ, "ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು  ಮೂರನೆಯ ದಿನ ಪುನರುತ್ದಾನ ಹೊಂದಬೇಕಾಗಿತ್ತು; ಅಲ್ಲದೆ ಜನರು ಪಾಪ ಪರಿಹಾರ ಪಡೆಯಬೇಕಾದರೆ, ಪಶ್ಚಾತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು. ಇದಕ್ಕೆಲ್ಲಾ ನೀವೇ ಸಾಕ್ಷಿಗಳು ಎಂದು ಹೇಳಿದರು

ಮನಸಿಗೊಂದಿಷ್ಟು : ಯೇಸು ಪುನರುತ್ಥಾನಗೊಂಡು ದರ್ಶನ ಕೊಟ್ಟಾಗ ಶಿಷ್ಯರು ಅವರನ್ನು ಭೂತವೆಂದು ಭಾವಿಸುತ್ತಾರೆ. ಆದರೆ ಯೇಸುವೇ ಅವರ ಬುದ್ದಿಯನ್ನು ವಿಕಾಸಗೊಳ್ಳುವಂತೆ ಮಾಡುತ್ತಾರೆ.  ಮುಂದೆ ಇದೇ ಶಿಷ್ಯರು ಯೇಸುವನ್ನು ಇಡೀ ಜಗತ್ತಿಗೆ ಸಾರಿದ ರೀತಿ ಅದ್ಭುತ. ಈ ಅದ್ಭುತವು ನಮ್ಮಲ್ಲೂ ನೆರವೇರುವಂತೆ ನಮ್ಮ ಬುದ್ದಿಯನ್ನು ವಿಕಾಸಗೊಳಿಸುವಂತ ವರಕ್ಕಾಗಿ ಬೇಡಿಕೊಳ್ಳಬೇಕಾಗಿದೆ.

ಪ್ರಶ್ನೆ : ಸಾಕ್ಷಿಗಳಾಗಲು ನಾವು ಸಿದ್ಧರಾಗಿದ್ದೇವೆಯೇ?



24.04.2019 - "ಪ್ರಭು ಜೀವಂತರಾಗಿ ಎದ್ದಿರುವುದು ನಿಜ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 3:1-10

ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ, ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು. "ಸುಂದರದ್ವಾರ" ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟು ಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆ ಬೇಡುತ್ತಿದ್ದನು. ಪೇತ್ರ ಮತ್ತು ಯೊವಾನ್ನ ದೇವಾಲಯದೊಳಗೆ ಹೋಗುತ್ತಿದ್ದವರನ್ನು ಅವನು ಕಂಡನು. ತನಗೆ ಏನಾದರೂ ಭಿಕ್ಷೆ ಕೊಡಬೇಕೆಂದು ಬೇಡಿದನು. ಅವರು ಕುಂಟನನ್ನು ತದೇಕ ದೃಷ್ಟಿಯಿಂದ ಈಕ್ಷಿಸಿದರು. ಪೇತ್ರನು, "ಅಲ್ಲಿ, ನಮ್ಮನ್ನು ನೋಡು,"ಎಂದನು. ಕುಂಟನು ಅವರಿಂದ ಭಿಕ್ಷೆಯನ್ನು ಅಪೇಕ್ಷಿಸುತ್ತಾ ಅವರನ್ನೇ ನೋಡಿದನು. ಆದರೆ ಪೇತ್ರನು, "ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ" ಎನ್ನತ್ತಾ, ಅವನ ಬಲಗೈಯನ್ನು ಹಿಡಿದು ನಿಲ್ಲಲು ಸಹಾಯ ಮಾಡಿದನು. ಆ ಕ್ಷಣವೇ ಕುಂಟನ ಅಂಗಾಲು ಮುಂಗಾಲುಗಳು ಬಲಗೊಂಡವು.  ಅವನು ಜಿಗಿದುನಿಂತು ಅತ್ತಿತ್ತ ನಡೆದಾಡಲು ಪ್ರಾರಂಭಿಸಿದನು. ಅನಂತರ ಅವನು ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರೊಡನೆಯೇ ದೇವಾಲಯದೊಳಗೆ ಹೋದನು. ಅವನು ಹೀಗೆ ನಡೆಯುವುದನ್ನೂ ದೇವರನ್ನು ಕೊಂಡಾಡುವುದನ್ನೂ ಜನಸಮೂಹ ನೋಡಿತು. ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆ ಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.

ಕೀರ್ತನೆ: 105:1-2, 3-4, 6-7, 8-9,

ಶ್ಲೋಕ: ಹೆಮ್ಮೆಪಡಿ, ನೆನೆದಾತನ ಶ್ರೀನಾಮ ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ

ಶುಭಸಂದೇಶ: ಲೂಕ 24:13-35


ಅದೇ ದಿನ ಶಿಷ್ಯರಲ್ಲಿ ಇಬ್ಬರು ಜೆರುಸಲೇಮಿಗೆ ಹನ್ನೊಂದು ಕಿಲೋಮೀಟರಿನಷ್ಟು ದೂರದಲ್ಲಿದ್ದ ಎಮ್ಮಾವು ಎಂಬ ಗ್ರಾಮಕ್ಕೆ ಹೋಗುತ್ತಿದ್ದರು. ಇತ್ತೀಚೆಗೆ ನಡೆದ ವಿಷಯಗಳನ್ನೆಲ್ಲಾ ಕುರಿತು ಅವರು ಸಂಭಾಷಣೆ ಮಾಡುತ್ತಾ ನಡೆಯುತ್ತಿದ್ದರು. ಹೀಗೆ ಮಾತನಾಡಿಕೊಂಡು ಚರ್ಚೆಮಾಡುತ್ತಾ ಹೋಗುತ್ತಿರುವಾಗ ಯೇಸುಸ್ವಾಮಿಯೇ ಖುದ್ದಾಗಿ ಸಮೀಪಿಸಿ ಅವರ ಜೊತೆ ಸೇರಿಕೊಂಡರು. ಆದರೆ ಇವರಾರೆಂದು ಅವರು ಗುರುತು ಹಚ್ಚಲಿಲ್ಲ. ಕಾರಣ, ಶಿಷ್ಯರಿಗೆ ಕಣ್ಣುಕಟ್ಟಿದಂತಾಗಿತ್ತು. "ನೀವು ತರ್ಕ ಮಾಡಿಕೊಂಡು ಹೋಗುತ್ತಿರುವಿರಲ್ಲಾ ಏನು ವಿಷಯ?" ಎಂದು ಯೇಸು ಕೇಳಿದರು. ಶಿಷ್ಯರು ಸಪ್ಪೆ ಮುಖಮಾಡಿ ನಿಂತರು. ಆಗ ಅವರಲ್ಲಿ ಒಬ್ಬನಾದ ಕ್ಲೆಯೋಫ, "ಇತ್ತೀಚೆಗೆ ಜೆರುಸಲೇಮಿನಲ್ಲಿ ಜರುಗಿದ ಘಟನೆಗಳನ್ನು ಪಟ್ಟಣಕ್ಕೆ ಪಟ್ಟಣವೇ ತಿಳಿದಿದೆ; ನಿನ್ನೊಬ್ಬನಿಗೇ ಅವು ತಿಳಿಯದೆ?" ಎಂದನು. "ಏನು ನಡೆಯಿತು?" ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, "ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು. ನಮ್ಮ ಮುಖ್ಯ ಯಾಜಕರು ಮತ್ತು ಮುಖಂಡರು ಅವರನ್ನು ಮರಣದಂಡನೆಗೆ ಗುರಿಮಾಡಿ ಶಿಲುಬೆಗೆ ಜಡಿಸಿದರು. ಇಸ್ರಯೇಲನ್ನು ಬಿಡುಗಡೆಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟು ಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರುದಿನಗಳಾಗಿವೆ. ಆದರೂ ನಮ್ಮಲ್ಲಿ ಕೆಲವು ಮಹಿಳೆಯರು ಮುಂಜಾನೆ ಸಮಾಧಿಯ ಬಳಿಗೆ ಹೋಗಿದ್ದರು. ಅಲ್ಲಿ ಯೇಸುವಿನ ಪಾರ್ಥಿವ ಶರೀರವನ್ನು ಕಾಣಲಿಲ್ಲ. ಹಿಂದಿರುಗಿ ಬಂದು, "ನಮಗೆ ದೇವದೂತರು ಪ್ರತ್ಯಕ್ಷರಾದರು; ಇವರು ಯೇಸುಸ್ವಾಮಿ ಸಜೀವದಿಂದ ಇದ್ದಾರೆಂದು ನಮಗೆ ತಿಳಿಸಿದರು,' ಎಂದು ಹೇಳಿ ನಮ್ಮನ್ನು ದಿಗ್ಬ್ರಾಂತರನ್ನಾಗಿ ಮಾಡಿದರು. ನಮ್ಮ ಸಂಗಡಿಗರಲ್ಲಿ ಕೆಲವರು ಸಮಾಧಿಯ ಒಳಿಗೆ ಹೋಗಿ ನೋಡಿದರು; ಮಹಿಳೆಯರು ಹೇಳಿದ್ದೆಲ್ಲಾ ಸರಿಯಾಗಿತ್ತು. ಆದರೆ ಯೇಸುಸ್ವಾಮಿಯನ್ನು ಮಾತ್ರ ಕಾಣಲಿಲ್ಲ," ಎಂದರು. ಆಗ ಯೇಸು, "ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು! ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಾಗಿತ್ತಲ್ಲವೇ?" ಎಂದರು. ಆನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರ ಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು. ಅಷ್ಟರಲ್ಲಿ ಶಿಷ್ಯರು ತಲುಪಬೇಕಾಗಿದ್ದ ಗ್ರಾಮವು ಸಮೀಪಿಸಿತು. ಯೇಸುಸ್ವಾಮಿ ಇನ್ನೂ ಮುಂದಕ್ಕೆ ಸಾಗುವವರಂತೆ ಕಂಡಿತು. ಆಗ ಶಿಷ್ಯರು, "ಸಂಜೆಯಾಯಿತು, ಕತ್ತಲಾಗುತ್ತ ಬಂದಿತು; ಬಂದು ನಮ್ಮೊಡನೆ ತಂಗಿರಿ," ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು. ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು. ಆಗಲೇ ಶಿಷ್ಯರ ಕಣ್ಣುಗಳು ತೆರೆದವು; ಯೇಸುವನ್ನು ಗುರುತು ಹಚ್ಚಿದರು. ಆಗ ಯೇಸು ಅವರಿಂದ ಅದೃಶ್ಯರಾದರು. ಶಿಷ್ಯರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ಪವಿತ್ರ ಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಿತ್ತಲ್ಲವೇ? ಎಂದುಕೊಂಡರು. ಒಡನೇ ಅವರು ಅಲ್ಲಿಂದ ಎದ್ದು ಜೆರುಸಲೇಮಿಗೆ ಹಿಂತಿರುಗಿ ಹೋದರು.  ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡಿಗರೂ ಒಟ್ಟುಗೂಡಿದ್ದರು. "ಪ್ರಭು ಜೀವಂತರಾಗಿ ಎದ್ದಿರುವುದು ನಿಜ! ಅವರು ಸಿಮೋನನಿಗೆ ಕಾಣಿಸಿಕೊಂಡರು," ಎಂದು ಅಲ್ಲಿದ್ದವರು ಹೇಳುವುದನ್ನು ಕೇಳಿದರು. ಆಗ ಅವರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿ ಮುರಿದು ಕೊಡುವಾಗ ಸ್ವಾಮಿಯನ್ನು ತಾವು ಗುರುತು ಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿ  ಮಾಡಿದರು.

ಮನಸಿಗೊಂದಿಷ್ಟು

ಬೈಬಲಿನ ಮನತಟ್ಟುವ ಘಟನೆಯಲ್ಲಿ ಇದೂ ಒಂದು. ನಮಗಿರುವ ಸಂದೇಶ
-ನಮ್ಮ ಜೊತೆ ಯೇಸು ಹೆಜ್ಜೆಯಂತೂ ಹಾಕುವರು, ಆದರೆ ನಮ್ಮಲ್ಲಿ ತಂಗಲು ನಾವು ಆಹ್ವಾನ  ಕೊಡಲೇ ಬೇಕು
- ಕೂಡಲೇ ಮತ್ತೆ ಜೆರುಸಲೇಮಿಗೆ ಹೋಗಿ ಯೇಸುವಿನ ದರ್ಶನದ ಸುದ್ದಿಯನ್ನು ತಡ ಮಾಡದೆ ಇತರ ಶಿಷ್ಯರಿಗೆ ಹೇಳುವ ಆನಂದದ ತವಕ ಆ ಶಿಷ್ಯರದು. ಯೇಸುವಿನಿಂದ ಪಡೆದದ್ದನ್ನು ಹಂಚುವಲ್ಲಿ ನಮ್ಮಲ್ಲೂ ಅದೇ ತವಕ, ಆತುರವಿರಬೇಕು
-ತಮ್ಮನ್ನು ನಿರಾಕರಿಸಿದ ಪೇತ್ರನಿಗೆ ಮೊದಲು ದರ್ಶನ ನೀಡುತ್ತಾರೆ. ಯೇಸು ನಮ್ಮ ಬಲಹೀನತೆಗಳೊಂದಿಗೆ ನಮ್ಮನ್ನು ಪ್ರೀತಿಸುತ್ತಾರೆ.

------------------------------------------------------------------------------
ಶಿಷ್ಯರ ಜೊತೆಗೆ ಎಮ್ಮಾವಿನ ಕಡೆಗೆ
ನಡೆದರು ಯೇಸು ಕೊನೆಯವರೆಗೆ
ರಾತ್ರಿಯ ಕಳೆದು ರೊಟ್ಟಿಯ ಮುರಿದು
ಧೈರ್ಯವ ಕೊಟ್ಟರು ಪ್ರೀತಿಯ ತೋರಿ
ಬರದೇ ಹೋಗುವರೇ  ಬಾಳಿನ ಪಯಣದಲ್ಲಿ
ಉಳಿಯದೆ ಹೋಗುವರೇ ಬದುಕಿನ ಇರುಳಿನಲ್ಲಿ
ನಮ್ಮಯ ಯೇಸುಪ್ರಭು
ಜೊತೆ ಹೆಜ್ಜೆಯ ಹಾಕುವರು

ಪ್ರಶ್ನೆ : ನಮ್ಮ ಪಯಣದಲ್ಲಿ ಯೇಸುವಿಗೆ ಆಹ್ವಾನವಿದೆಯೇ?

23.04.2019 - "ನಾನು ಪ್ರಭುವನ್ನು ಕಂಡೆ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:36-41

ಪೇತ್ರನು ಜನಸಮೂಹವನ್ನು ಉದ್ದೇಶಿಸಿ ಗಟ್ಟಿಯಾದ ದ್ವನಿಯಿಂದ ಹೀಗೆಂದು ಪ್ರಭೋಧಿಸಿದನು: "ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ." ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, "ಸಹೋದರರೇ, ಈಗ ನಾವು ಮಾಡಬೇಕಾದುದು ಏನು?" ಎಂದು ಕೇಳಿದರು. ಅದಕ್ಕೆ ಪೇತ್ರನು, "ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಿರಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ. ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರವಿರುವ ಎಲ್ಲರಿಗೂ ಮತ್ತು ಸವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ," ಎಂದನು. ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. "ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ, " ಎಂದು ಎಚ್ಚರಿಸಿದನು. ಅವನ ಭೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.

ಕೀರ್ತನೆ: 33:4-5, 18-18, 20, 22
ಶ್ಲೋಕ: ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು

ಶುಭಸಂದೇಶ: ಯೊವಾನ್ನ 20:11-18

ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ ಶ್ವೇತವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ, ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತ್ತಿದ್ದರು. ಅವರು ಅಕೆಯನ್ನು, "ಏಕಮ್ಮಾ ಅಳುತ್ತಿರುವೆ?" ಎಂದು ಕೇಳಿದರು. "ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿಟ್ಟಿದ್ದಾರೋ ತಿಳಿಯದು," ಎಂದಳು. ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಅಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. ಯೇಸು, "ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?" ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, "ಅಯ್ಯಾ ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ," ಎಂದು ಹೇಳಿದಳು. ಆಗ ಯೇಸು, "ಮರಿಯಾ" ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ,  "ರಬ್ಬೂನಿ"  ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ  "ಗುರುದೇವಾ"  ಎಂದರ್ಥ). ಯೇಸು ಆಕೆಗೆ, "ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ.  ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿ ಹೋಗುತ್ತೇನೆ ಎಂದು ತಿಳಿಸು," ಎಂದು ಹೇಳಿದರು. ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು,  "ನಾನು ಪ್ರಭುವನ್ನು ಕಂಡೆ. ಅವರು ಹೀಗೆಲ್ಲಾ ಹೇಳಿದರು." ಎಂದು ತಿಳಿಸಿದಳು.

ಮನಸಿಗೊಂದಿಷ್ಟು :  "ನಾನು ಪ್ರಭುವನ್ನು ಕಂಡೆ" ಎಂಬ ಮರಿಯಳ ಆ ಮಾತು ನಮಗೆ ಸ್ಪೂರ್ತಿಯಾಗಬೇಕು.  ಯೇಸುವೇ ಮುಂದೆ ನಿಂತಿದ್ದರೂ ಗುರುತಿಸದ ಮರಿಯಳು, ’ಮರಿಯಾ’ ಎಂಬ ಯೇಸುವಿನ ಒಂದೇ ಮಾತಿಗೆ ಕ್ಷಣ ಮಾತ್ರದಲ್ಲಿ ಗುರುತಿಸಿ, ನಂಬಿ, ಯೇಸುವಿನ ಪುನರುತ್ಥಾನದ ಮೊದಲ ಸಂದೇಶಕಿ ಆಗುತ್ತಾಳೆ. ಕ್ರಿಸ್ತನನ್ನು ಅರಿಯದಂತೆ, ಗುರುತಿಸಲಾಗದಂತ ಸಂದರ್ಭಗಳು ನಮಗೆ ಬರುತ್ತಲೇ ಇರುತ್ತವೆ. ಆದರೆ ಕ್ರಿಸ್ತನ ಮೆಲುದನಿ ನಮ್ಮನ್ನು ಕರೆಯುತ್ತಲೇ ಇರುತ್ತದೆ. ಕೇಳಬೇಕಷ್ಟೇ. ಕೇಳಿದ ತಕ್ಷಣ ನಮ್ಮ ಮನ ’ರಬ್ಬೂನಿ’ ಎನ್ನಬೇಕು. ’ಪ್ರಭುವನ್ನು ಕಂಡೆ’ ಎಂದು ಹೇಳುವ ಭಾಗ್ಯ ನಮ್ಮದಾಗಲಿ.

ಪ್ರಶ್ನೆ : ಕಣ್ಣ ಕಂಬನಿ ಮರಿಯಳಿಗೆ ಯೇಸುವನ್ನು ಗುರುತಿಸಲು ತೊಡಕಾಯಿತೇನೋ? ನಮಗಿರುವ ತೊಡಕುಗಳಾವುವು?

22.04.2019 - "ನಿಮಗೆ ಶುಭವಾಗಲಿ!"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: 2:14, 22-23


ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮುಹವನ್ನು ಉದ್ದೇಶಿಸಿ, ಗಟ್ಟಿಯಾದ ದ್ವನಿಯಿಂದ ಹೀಗೆಂದು ಪ್ರಬೋಧಿಸಿದನು: "ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ. ಇಸ್ರಯೇಲ್ ಬಾಂಧವರೆ ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಬುತ ಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ. ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್ ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ. ಆದರೆ ದೇವರು ಅವರನ್ನು  ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು. ಅವರನ್ನು ಕುರಿತು ದಾವೀದನು ಹೀಗೆಂದಿದ್ದಾನೆ: " ಪ್ರಭು ಇಹನು ಎನ್ನ ಕಣ್ಮುಂದೆ ಸತತ ನಾ ಹೆದರದಂತೆ ಆತನಿಹನು ಎನ್ನ ಹತ್ತಿರ. ಇದಕಾರಣ ಹರ್ಷಿಸಿತು ಎನ್ನ ಹೃದಯ ತುಳುಕಿತು ಸಂತಸ ಎನ್ನ ನಾಲಗೆಯಿಂದ. ನಂಬಿ ನಿರೀಕ್ಷೆಯಿಂದಿರುವುದು ಎನ್ನ ಮ್ರುತ್ಯುದೇಹ. ಏಕೆನೆ, ದೂಡಲಾರೆ ಪಾತಾಳಕ್ಕೆ ನೀನೆನ್ನ ಜೀವಾತ್ಮವನು ಕೊಳೆಯಬಿಡಲಾರೆ ನೀನೊಲಿದಾತನನು. ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ, ನಿನ್ನ ಶ್ರೀ ಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.' "ಪ್ರಿಯ ಸಹೋದರರೇ, ಪಿತಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ. ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ ವಾಗ್ದಾನವನ್ನು ಆತನು ಮರೆತಿರಲಿಲ್ಲ. ಹೀಗಿರುವಲ್ಲಿ ಕ್ರಿಸ್ತಯೇಸುವಿನ  ಪುನರುತ್ಥಾನವನ್ನುಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: "ಆತನನ್ನು ಪಾತಾಳಕ್ಕೆ ದೂಡಲಿಲ್ಲ, ದೇಹ ಕೊಳೆತುಹೋಗಲು ಬಿಡಲಿಲ್ಲ," ಈ ಯೇಸುವನ್ನೇ ದೇವರು ಪುನರುತ್ದಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ಯೇಸು, ದೇವರ ಬಲಪಾರ್ಶವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು."

ಕೀರ್ತನೆ: 16:1-2, 5, 7-8, 9-10, 11
ಶ್ಲೋಕ: ನೀಡು ದೇವಾ ರಕ್ಷಣೆಯನು ನಾ ನಿನಗೆ ಶರಣಾಗತನು.

ಶುಭಸಂದೇಶ: ಮತ್ತಾಯ 28:8-15


ಮಹಿಳೆಯರು ಭಯಮಿಶ್ರಿತ ಆನಂದದಿಂದ ಸಮಾಧಿಯನ್ನು ಬಿಟ್ಟು ಕೂಡಲೇ ಹೊರಟರು. ಶಿಷ್ಯರಿಗೆ ಈ ಸಮಾಚಾರವನ್ನು ಮುಟ್ಟಿಸಲು ಧಾವಿಸಿದರು. ತಟ್ಟನೆ, ಯೇಸುವೇ ಅವರನ್ನು ಎದುರುಗೊಂಡು, "ನಿಮಗೆ  ಶುಭವಾಗಲಿ!" ಎಂದರು. ಆ ಮಹಿಳೆಯರು ಹತ್ತಿರಕ್ಕೆ ಬಂದು, ಅವರ ಪಾದಕ್ಕೆರಗಿ ಪೂಜಿಸಿದರು. ಆಗ ಯೇಸು ಅವರಿಗೆ, "ಭಯಪಡಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ." ಎಂದು ಹೇಳಿದರು. ಇತ್ತ ಆ ಮಹಿಳೆಯರು ಹೋಗುತ್ತಿದ್ದಂತೆ, ಅತ್ತ ಕಾವಲುಗಾರರಲ್ಲಿ ಕೆಲವರು ನಗರಕ್ಕೆ ಬಂದು ನಡೆದ ಸಂಗತಿಯನ್ನೆಲ್ಲಾ ಮುಖ್ಯಯಾಜಕರಿಗೆ ವರದಿ ಮಾಡಿದರು. ಇವರು ಪ್ರಮುಖರೊಂದಿಗೆ ಸಭೆಸೇರಿ ಒಂದು ಸಂಚುಹೂಡಿದರು. ಸೈನಿಕರಿಗೆ ಭಾರಿ ಲಂಚಕೊಟ್ಟು, "ಅವನ ಶಿಷ್ಯರು ರಾತ್ರಿ ವೆಳೆಯಲ್ಲಿ ಬಂದು, ನಾವು ನಿದ್ರೆಮಾಡುತ್ತಿದ್ದಾಗ ಅವನನ್ನು ಕದ್ದುಕೊಂಡು ಹೋದರೆಂದು ಜನರಿಗೆ ಹೇಳಿರಿ; ಈ ಸುದ್ಧಿ ರಾಜ್ಯಪಾಲನ ಕಿವಿಗೆ ಬಿದ್ದರೆ, ನಾವು ಅವರನ್ನು ಸಮಾಧಾನ ಪಡಿಸುತ್ತೇವೆ; ನಿಮಗೇನು ಆಗದಂತೆ ನೋಡಿಕೊಳ್ಳುತ್ತೇವೆ," ಎಂದು ಹೇಳಿದರು. ಸೈನಿಕರು ಲಂಚವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟಂತೆಯೇ ಮಾಡಿದರು. ಈ ಕಟ್ಟುಕತೆ ಯೆಹೂದ್ಯರಲ್ಲಿ ಹಬ್ಬಿ ಇಂದಿನವರೆಗೂ ಪ್ರಚಲಿತವಾಗಿದೆ.

21.04.2019 - ಪಾಸ್ಖ ಹಬ್ಬದ ಭಾನುವಾರ - ಹರ್ಷಿಸಿ ಆನಂದಿಸೋಣ ಇಂದು

ಪಾಸ್ಖ ಹಬ್ಬದ ಭಾನುವಾರ




ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 10:34, 37-43

ಪ್ರೇತ್ರನು ಹೀಗೆಂದು ಉಪದೇಶ ಮಾಡಿದನು: ಇತ್ತೀಚೆಗೆ ಜುದೇಯ ನಾಡಿನಾದ್ಯಂತ ನಡೆದ ಘಟನೆಗಳು ನಿಮಗೆ ತಿಳಿದೇ ಇರಬೇಕು. ಇವು ನಸರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು, ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು. ಅವರು ಯೆಹೂದ್ಯರ ಹಳ್ಳಿ ಹಳ್ಳಿಗಳಲ್ಲೂ ಜೆರುಸಲೇಮಿನಲ್ಲೂ ಎಸಗಿದ ಸಕಲ ಕಾರ್ಯಗಳಿಗೆ ನಾವು ಸಾಕ್ಷಿಗಳು. ಯೆಹೂದ್ಯರು ಆ ಯೇಸುವನ್ನು ಶಿಲುಬೆ ಮರಕ್ಕೆ ನೇತುಹಾಕಿ ಕೊಂದರು. ಆದರೆ ದೇವರು ಅವರನ್ನು ಮೂರನೆಯ ದಿನ ಪುನರುತ್ದಾನಗೊಳಿಸಿ ಪ್ರತ್ಯೆಕ್ಷರಾಗುವಂತೆ ಮಾಡಿದರು. ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ, ಅವರು ಪುನರುತ್ದಾನ ಹೊಂದಿದ ನಂತರ ಅವರೊಡನೆಯೇ ಊಟ ಮಾಡಿದವರು ನಾವು. ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೆ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ಧಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ. ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆ ಮಾಡಿದ್ದಾರೆ."

ಕೀರ್ತನೆ: 118:1-2, 16-17, 22-23

ಶ್ಲೋಕ: ಪ್ರಭುವೇ, ನಿಯೋಜಿಸಿದ ದಿನವಿದು ಹರ್ಷಿಸಿ ಆನಂದಿಸೋಣ ಇಂದು

ಎರಡನೇ ವಾಚನ: ಕೊಲೊಸ್ಸೆಯರಿಗೆ 3:1-4

ಸಹೋದರರೇ, ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ದಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆ ಆಸೀನರಾಗಿದ್ದಾರೆ. ನೀವು ಕ್ರಿಸ್ತಯೇಸುವಿನೊಂದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ, ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿ. ಕ್ರಿಸ್ತಯೇಸುವೇ ನಿಮ್ಮ ನೈಜ್ಯ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವೂ ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ.

ಶುಭಸಂದೇಶ: ಯೊವಾನ್ನ 20:1-9

ಅಂದು ಭಾನುವಾರ,  ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು. ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿ ಬಂದು, "ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ," ಎಂದು ಹೇಳಿದಳು. ಇದನ್ನು ಕೇಳಿ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು. ಇಬ್ಬರೂ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು. ಅವನು ಬಗ್ಗಿ ನೋಡಿದಾಗ ಅಲ್ಲಿ ನಾರುಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ. ಅವನ ಹಿಂದೆಯೇ ಸಿಮೋನ ಪೇತ್ರನು ಬಂದು ನೆಟ್ಟಗೆ ಸಮಾಧಿಯೊಳಗೆ ನುಗ್ಗಿದನು; ಅಲ್ಲಿ ನಾರುಮಡಿಗಳು ಬಿದ್ದಿರುವುದನ್ನು ಕಂಡನು. ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ  ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು. ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ನುಗ್ಗಿ ನೋಡಿದನು; ನೋಡಿ ನಂಬಿದನು. ಯೇಸು ಸತ್ತ ಮೇಲೆ ಪವಿತ್ರಗ್ರಂಥದ ವಾಕ್ಯ ಅವರಿಗೆ ಅದುವರೆಗೆ ಅರ್ಥವಾಗಿರಲಿಲ್ಲ.

20.04.2019 - "ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು?"

ಮೊದಲನೇ ವಾಚನ: ರೋಮನರಿಗೆ 6:3-11


ಕ್ತಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ? ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ದಾನ ಹೊಂದಿದಂತೆಯೇ ನಾವು ಸಹ ಹೊಸ ಜೀವನವನ್ನು ಹೊಂದಿ ಬಾಳುತ್ತೇವೆ. ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ದಾನ ಆದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ದಾನ ಹೊಂದುತ್ತೇವೆ. ನಮಗೆ ತಿಳಿದಿರುವಂತೆ ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ತಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ. ಹೀಗೆ ಸತ್ತವನು ಪಾಪಬಂಧದಿಂದ ಬಿಡುಗಡೆ ಹೊಂದಿದವನು. ಕ್ತಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ. ಯೇಸುಕ್ತಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ. ಏಕೆಂದರೆ, ಅವರು ಪಾಪದ ಪಾಲಿಗೆ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ಸತ್ತವರು. ಅವರು ಈಗ ಜೀವಿಸುವುದು ದೇವರಿಗಾಗಿಯೇ. ಅಂತೆಯೇ ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ದೇವರಿಗಾಗಿ ಮಾತ್ರ ಯೇಸುಕ್ರಿಸ್ತರಲ್ಲಿ ಜೀವಿಸುವವರೆಂದು ಪರಿಗಣಿಸಿರಿ.

ಕೀರ್ತನೆ: 104:1-2, 5-6, 10, 12-14, 24, 25

ಶ್ಲೋಕ: ನೀ ಉಸಿರನ್ನೂದಲು ಹೊಸದಾಗುವುದು ಪುನಶ್ಚೇತನಗೊಳ್ಳುವುದು ಜಗವೆಲ್ಲವು

 ಶುಭಸಂದೇಶ: ಲೂಕ 24:1-12

ಭಾನುವಾರ ಮುಂಜಾನೆ ಆ ಮಹಿಳೆಯರು ತಾವು ಸಿದ್ಧಮಾಡಿದ ಸುಗಂಧ ದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಯ ಬಳಿಗೆ ಬಂದರು. ಸಮಾಧಿಯ ದ್ವಾರಕ್ಕೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿ ಬಿದ್ದಿತ್ತು. ಒಳಕ್ಕೆ ಪ್ರವೇಶಿಸಿ ನೋಡಿದಾಗ ಪ್ರಭು ಯೇಸುವಿನ ಪಾರ್ಥಿವ ಶರೀರ ಕಾಣಲಿಲ್ಲ ಅವರು ತಬ್ಬಿಬ್ಬಾಗಿ ಅಲ್ಲೇ ನಿಂತರು. ಆಗ ತೇಜೋಮಯವಾದ ಉಡುಪನ್ನು ಧರಿಸಿದ್ದ ಇಬ್ಬರು ವ್ಯಕ್ತಿಗಳು ಫಕ್ಕನೆ ಅಲ್ಲೇ ಕಾಣಿಸಿಕೊಂಡರು. ಮಹಿಳೆಯರು ಭಯಭ್ರಾಂತರಾದರು. ಅವರ ದೃಷ್ಟಿ ನೆಲನಾಟಿತು. ಆಗ ಆ ವ್ಯಕ್ತಿಗಳು, "ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು? ಅವರು ಇಲ್ಲಿಲ್ಲ; ಪುನರುತ್ದಾನ ಹೊಂದಿದ್ದಾರೆ. ಗಲಿಲೇಯದಲ್ಲಿದ್ದಾಗಲೇ ಅವರು ನಿಮಗೆ, 'ನರಪುತ್ರನು ಪಾಪಿ ಮಾನವರ ಕೈವಶವಾಗಿ, ಶಿಲುಬೆಯ ಮರಣಕ್ಕೀಡಾಗಿ, ಮೂರನೆಯ ದಿನ ಪುನರುತ್ದಾನ ಹೊಂದಬೇಕಾಗಿದೆ," ಎಂದು ತಿಳಿಸಿದ್ದನ್ನು ಮರೆತು ಬಿಟ್ಟಿರೋ?" ಎಂದರು. ಆಗ ಆ ಮಹಿಳೆಯರಿಗೆ ಯೇಸುಸ್ವಾಮಿಯ ಆ ಮಾತುಗಳು ಜ್ಞಾಪಕಕ್ಕೆ ಬಂದವು. ಅವರು ಸಮಾಧಿಯಿಃದ ಹಿಂದಿರುಗಿ ಹೋಗಿ ನಡೆದುದೆಲ್ಲವನ್ನು ಹನ್ನೊಂದು ಮಂದಿ ಶಿಷ್ಯರಿಗೂ ಮತ್ತಿತರರಿಗೂ ತಿಳಿಸಿದರು. ಆ ಮಹಿಳೆಯರ ಹೆಸರುಗಳು: ಮಗ್ದಲದ ಮರಿಯಳು, ಯೊವಾನ್ನಳು ಮತ್ತು ಯಕೋಬನ ತಾಯಿಯಾದ ಮರಿಯಳು. ಇವರಲ್ಲದೆ ಇವರ ಸಂಗಡ ಇದ್ದ ಇತರ ಮಹಿಳೆಯರೂ ಪ್ರೇಷಿತರಿಗೆ ಈ ಸುದ್ಧಿಯನ್ನು ತಿಳಿಸಿದರು. ಪ್ರೇಷಿತರಾದರೋ ಇದೆಲ್ಲ ಕಟ್ಟುಕತೆಯೆಂದು ಭಾವಿಸಿ ನಂಬದೆ ಹೋದರು. ಆದರೆ ಪೇತ್ರನು ಎದ್ದು ಸಮಾಧಿಯ ಬಳಿಗೆ ಧಾವಿಸಿದನು. ಸಮಾಧಿಯೊಳಕ್ಕೆ ಬಗ್ಗಿ ನೋಡಿದಾಗ, ಶವಕ್ಕೆ ಸುತ್ತಿದ್ದ ನಾರುಮಡಿ ವಸ್ತ್ರಗಳು ಮಾತ್ರ ಅಲ್ಲಿ ಬಿದ್ದಿರುವುದನ್ನು ಕಂಡನು. ಇವೆಲ್ಲಾ ಎಷ್ಟೋ ಆಶ್ಚರ್ಯಕರವಾಗಿದೆ ಎಂದುಕೊಂಡು ಹಿಂದಿರುಗಿದನು.

   

19.04.2019 - ಯಾತನೆಯ ಧ್ಯಾನ

ಯೇಸುವನ್ನು  ಮೂರು ಬಾರಿ ನಿರಾಕರಿಸುವ ಪೇತ್ರ 





ಪಿಲಾತನ ಮುಂದೆ ಯೇಸು 





ಆ ಘೋರ ಯಾತನೆ ಹಾಗು ಮರಣ 



19.04.2019 - “ಎಲ್ಲಾ ನೆರವೇರಿತು,”

                                             ಪವಿತ್ರ   ಶುಕ್ರವಾರ



ಮೊದಲನೇ ವಾಚನ: ಯೆಶಾಯ 52:13-53:12

ನನ್ನ ದಾಸನಿದೋ, ಕೃತಾರ್ಥ; ಆಗುವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕಿಂತ, ಆತನ ರೂಪ ನರಪುತ್ರರ ರೂಪಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ. ಅಂತೆಯೆ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನ್ನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನ್ನು ನಂಬುವರಾರು ನಾವು ಕೇಳದ ಸಂಗತಿಯನ್ನು? ಗುರಿತಿಸುವರಾರು ಸರ್ವೇಶ್ವರನ ಶಕ್ತಿಯನ್ನು? ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ, ಒಣನೆಲದೊಳು ಇಳಿಯುವಬೇರಿನಂತೆ ಆತನಲಿ ಅಂದಚೆಂದಗಳಾವುವು ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ. ಧಿಕ್ಕರಿಸಲ್ಪಟ್ಟನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು. ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು  ಭಾವಿಸಿದ್ಧಾದರು ಏನು? ಆತ ದೇವರಿಂದ ಬಾಧಿತನೆಂದು, ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು! ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ, ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ, ಪೆಟ್ಟುತಿಂದ ನಮ್ಮ ಸ್ವಸ್ಥೆಗಾಗಿ. ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು  ಸರ್ವೇಶ್ವರ ಹಾಕಿದ್ದ ಆತನ ಮೇಲೆ. ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ. ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು  ಮರುಗಲಿಲ್ಲ ಕನಿಕರದಿಂದ. ಮಾಡಲಿಲ್ಲ ಆತ ಯಾವ ಪಾಪಕೃತ್ಯ, ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತ ಮೇಲೆ, ದುರುಳರ ಹಾಗೂ ದುಷ್ಕರ್ಮಿಗಳ ನಡುವೆ. ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಿದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನ್ನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು, ಪಡೆಯುವನು ಚಿರಜೀವನವನು ತಾನೇ ನೆರವೇರಿಸುವನು ಸರ್ವೇಶ್ವರನ ಸಂಕಲ್ಪವನು ತೃಪ್ತನಾಗುವನಾತ ಕಂಡು ತನ್ನಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹು ಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು. ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ, ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪಗಳನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.

ಕೀರ್ತನೆ: 31:2, 6, 12-13, 15-16, 17, 25
ಶ್ಲೋಕ: ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ

ಎರಡನೇ ವಾಚನ: ಹಿಬ್ರಿಯರಿಗೆ 4:14-16, 5:7-9

ಸ್ವರ್ಗಲೋಕಕ್ಕೆ ಏರಿಹೋದ  ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಟ ಹಾಗೂ ಪ್ರದಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ. ಈ ಪ್ರದಾನ ಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ - ಸಂಕಷ್ಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ. ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ದೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ. ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ,  ತಮ್ಮನ್ನು ಮರಣದಿಂದ ಕಾಪಾಡಲು ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ  ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು. ಯೇಸು, ದೇವರ ಪುತ್ರರಾಗಿದ್ದರೂ ಹಿಂಸೆಬಾಧೆಗಳನ್ನು  ತಪ್ಪಿಸಿಕೊಳ್ಳದೆ ವಿಧೇಯತೆಯನ್ನು ಅನುಭವದಿಂದ ಅರಿತುಕೊಂಡರು. ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.

ಶುಭಸಂದೇಶ: ಯೊವಾನ್ನ 18:1-19:42

ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಹೊರಟು, ಕಿದ್ರೋನ್ ಹಳ್ಳವನ್ನು ದಾಟಿ ಅಲ್ಲೇ ಇದ್ದ ತೋಟವನ್ನು ಹೊಕ್ಕರು. ಅವರುತಮ್ಮ ಶಿಷ್ಯರೊಡನೆ ಆಗಾಗ ಅಲ್ಲಿಗೆ ಬರುವುದು ವಾಡಿಕೆ. ಅವರನ್ನು ಹಿಡಿದುಕೊಡಲಿದ್ದ ಯೂದನಿಗೆ ಆ ಸ್ಥಳ ಚೆನ್ನಾಗಿ ಗೊತ್ತಿತ್ತು. ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯ ಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನೂ ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು. ಯೇಸುಸ್ವಾಮಿಗೆ ತಮಗೆ ಸಂಭವಿಸಲಿರುವುದೆಲ್ಲವೂ ತಿಳಿದಿತ್ತು, ಎಂದೇ ಮುಂದೆ ಬಂದು, "ನೀವು ಯಾರನ್ನು ಹುಡುಕುತ್ತಿದ್ದೀರಿ?" ಎಂದು ಕೇಳಿದರು. ಅವರು, "ನಜರೇತಿನ ಯೇಸುವನ್ನು," ಎಂದರು. ಯೇಸು, ನಾನೇ ಆತ," ಎಂದು ಉತ್ತರಕೊಟ್ಟರು. ಅವರನ್ನು ಹಿಡಿದುಕೊಡಲಿದ್ದ ಗುರುದ್ರೋಹಿ ಯೂದನು ಅವರ ಸಂಗಡವೇ ನಿಂತುಕೊಂಡಿದ್ದನು. ನಾನೇ ಆತನು," ಎಂದು ಯೇಸು ನುಡಿಯುತ್ತಲೇ, ಅವರೆಲ್ಲರೂ ಹಿಂದೆ ಸರಿದು ನೆಲದ ಮೇಲೆ ಬಿದ್ದರು. ಯೇಸು ಮತ್ತೊಮ್ಮೆ, "ನೀವು ಯಾರನ್ನು ಹುಡುಕುತ್ತಿದ್ದೀರಿ?" ಎಂದು ಕೇಳಲು, "ನಜರೇತಿನ ಯೇಸುವನ್ನು" ಎಂದು ಉತ್ತರ ಬಂದಿತು.  ಅದಕ್ಕೆ ಯೇಸು, "ನಾನೇ ಆತನೆಂದು ನಿಮಗೆ ಆಗಲೇ ಹೇಳಿದೆ. ನೀವು ಹುಡುಕುತ್ತಾ ಇರುವುದು ನನ್ನನ್ನಾದರೆ, ಮಿಕ್ಕ ಇವರನ್ನು ಹೋಗಬಿಡಿ," ಎಂದು ನುಡಿದರು. (ನೀವು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ಕಳೆದುಕೊಳ್ಳಲಿಲ್ಲ" ಎಂದು ತಾವೇ ನುಡಿದ ಮಾತು ನೆರವೇರುವಂತೆ ಯೇಸು ಹೀಗೆಂದರು). ಅಷ್ಟರೊಳಗೆ ಸಿಮೋನ ಪೇತ್ರನು ತನ್ನಲ್ಲಿದ್ದಖಡ್ಗವನ್ನು ಹಿರಿದು, ಪ್ರದಾನ ಯಾಜಕನ ಸೇವಕನಾದ ಮಾಲ್ಕನ ಬಲಗಿವಿಯನ್ನು ಕತ್ತರಿಸಿಬಿಟ್ಟನು.ಆಗ ಯೇಸು ಪೇತ್ರನಿಗೆ, "ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು. ನನ್ನ ಪಿತನೇ ಕೊಟ್ಟಿರುವ ಕಷ್ಟದ ಕೊಡವಿದು; ಇದರಲ್ಲಿರುವುದನ್ನು ನಾನು ಕುಡಿಯದೆ ಹೋದರೆ ಹೇಗೆ?" ಎಂದು ನುಡಿದರು. ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಆನ್ನನ ಬಳಿಗೆ ಕೊಂಡೊಯ್ದರು.  ಅನ್ನನು ಅ ವರ್ಷ ಪ್ರದಾನ ಯಾಜಕನಾಗಿದ್ದ ಕಾಯಫನ ಮಾವ. ಸಮಸ್ತ ಜನತೆಗಾಗಿ ಒಬ್ಬನು ಸತ್ತರೆ ವಿಹಿತವೆಂದು ಸಲಹೆಕೊಟ್ಟವನು ಈ ಕಾಯಫನೇ. ಸಿಮೋನ್ ಪೇತ್ರನು ಮತ್ತು ಪ್ರಧಾನ ಯಾಜಕನಿಗೆ ಪರಿಚಿತನಾಗಿದ್ದ ಇನ್ನೊಬ್ಬ ಶಿಷ್ಯನು ಯೇಸುಸ್ವಾಮಿಯನ್ನು ಹಿಂಬಾಲಿಸುತ್ತಾ ಹೋದರು. ಪರಿಚಿತನಾಗಿದ್ದ ಶಿಷ್ಯನು ಯೇಸುವಿನೊಡನೆ ಪ್ರಧಾನ ಯಾಜಕನ ಮನೆಯ ಅಂಗಳವನ್ನು ಹೊಕ್ಕನು. ಪೇತ್ರನು ಹೊರಗಡೆ ಬಾಗಿಲ ಬಳಿಯಲ್ಲೇ ನಿಂತನು. ಪರಿಚಿತನಾಗಿದ್ದವನು ಆನಂತರ ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಕ್ಕೆ ಕರೆದುಕೊಂಡು ಹೋದನು. ಆ ದ್ವರಪಾಲಕಿಯು ಪೇತ್ರನನ್ನು ನೋಡಿ, "ನೀನೂ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೆ?" ಎಂದು ಕೇಳಿದಳು. ಅದಕ್ಕೆ ಪೇತ್ರನು, "ಇಲ್ಲ, ನಾನಲ್ಲ,"ಎಂದುಬಿಟ್ಟನು, ಆಗ ಚಳಿಯಿದ್ದುದರಿಂದ ಸೇವಕರೂ ಕಾವಲಾಳುಗಳೂ ಇದ್ದಲಿನ ಬೆಂಕಿ ಮಾಡಿ, ಸುತ್ತಲೂ ನಿಂತು ಚಳಿಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳತೊಡಗಿದನು. ಅಷ್ಟರಲ್ಲಿ ಪ್ರಧಾನಯಾಜಕನು ಯೇಸುಸ್ವಾಮಿಯನ್ನು ಅವರ ಶಿಷ್ಯರ ವಿಷಯವಾಗಿ ಹಾಗು ಭೋಧನೆಯ ವಿಷಯವಾಗಿ ವಿಚಾರಿಸಿದನು. ಆಗ ಯೇಸುಸ್ವಾಮಿ, "ನಾನು  ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಭೋಧನೆ ಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ. ನನ್ನನ್ನು ವಿಚಾರಿಸುವುದೇಕೆ ನಾನು ಹೇಳಿದ್ದನ್ನು ಯಾರು ಕೇಳಿದ್ದಾರೋ ಅವರನ್ನೇ ವಿಚಾರಿಸಿರಿ. ನಾನು ಬೋಧನೆ ಮಾಡಿದ್ದು ಏನೆಂದು ಅವರು ಬಲ್ಲರು," ಎಂದು ಉತ್ತರಕೊಟ್ಟರು. ಯೇಸು ಹೀಗೆ ಹೇಳಲು ಬಳಿಯಲ್ಲೇ ನಿಂತಿದ್ದ ಕಾವಲಾಳೊಬ್ಬನು, "ಪ್ರಧಾನ ಯಾಜಕರಿಗೆ ಉತ್ತರಕೊಡುವುದು ಹೀಗೆಯೇ?" ಎಂದು ಕೆನ್ನೆಗೆ ಹೊಡೆದನು. ಆಗ ಯೇಸು, "ನಾನು ಆಡಿದ್ದು ತಪ್ಪಾಗಿದ್ದರೆ, ತಪ್ಪನ್ನು ತೋರಿಸಿಕೊಡು; ಆಗ ಅನ್ನನ್ನು ಯೇಸುವನ್ನು ಬಂಧಿಸಿ ಕಾಯಫನ ಬಳಿಗೆ ಕಳುಹಿಸಿದನು. ಇತ್ತ ಪೇತ್ರನು ನಿಂತು ಚಳಿಕಾಯಿಸಿಕೊಳ್ಳುತ್ತಾ ಇದ್ದನು. ಅಲ್ಲಿದ್ದವರು ನೀನು ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?" ಎಂದು ಕೇಳಿದರು. ಪೇತ್ರನು, "ಇಲ್ಲ, ನಾನು ಶಿಷ್ಯನಲ್ಲ," ಎಂದು ನಿರಾಕರಿಸಿದನು. ಪ್ರಧಾನಯಾಜಕನ ಸೇವಕರಲ್ಲಿ ಒಬ್ಬನು, (ಇವನು ಪೇತ್ರನು ಕಿವಿ ಕತ್ತರಿಸಿದವನ ನಂಟ) "ನಿನ್ನನ್ನು ಆತನೊಡನೆ ತೋಟದಲ್ಲಿ ನಾನು ನೋಡಲಿಲ್ಲವೇ?" ಎಂದು ಕೇಳಿದನು. ಪೇತ್ರನು ಪನಃ ಅಲ್ಲಗಳೆದನು ಕೂಡಲೇ ಕೋಳಿ ಕೂಗಿತು. ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು. ಆದುದರಿಂದ ಪಿಲಾತನೇ ಅವರ ಬಳಿಗೆ ಬಂದು, "ಈತನ ಮೇಲೆ ನಿಮ್ಮ ದೂರು ಏನು?" ಎಂದು ಕೇಳಿದನು. ಅವರು, "ಇವನು ಅಪರಾಧಿಯಲ್ಲದಿದ್ದರೆ, ಇವನನ್ನು ನಿಮಗೆ ತಂದೊಪ್ಪಿಸುತ್ತಿರಲಿಲ್ಲ,"ಎಂದರು. ಅದಕ್ಕೆ ಪಿಲಾತನು, "ಹಾಗಾದರೆ ನೀವೇ ಕರೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಈತನಿಗೆ ತೀರ್ಪುಕೊಡಿ," ಎಂದನು. ಯೆಹೂದ್ಯರು, "ಮರಣದಂಡನೆ ವಿಧಿಸುವ ಅಧಿಕಾರ ನಮಗಿಲ್ಲವಲ್ಲಾ," ಎಂದು ಉತ್ತರಿಸಿದರು. ಯೇಸು ತಮಗೆ ಯಾವ ಬಗೆಯ ಮರಣ ಕಾದಿರುವುದೆಂದು ಸೂಚಿಸಿ ಹೇಳಿದ ಮಾತು ಹೀಗೆ ನೆರವೇರುವಂತಾಯಿತು. ಆಗ ಪಿಲಾತನು ಅರಮನೆಯೊಳಗೆ ಹೋಗಿ ಯೇಸುಸ್ವಾಮಿಯನ್ನು ಕರೆಯಿಸಿ, "ನೀನು ಯೆಹೂದ್ಯರ ಅರಸನೋ?" ಎಂದು ಕೇಳಿದನು. ಅದಕ್ಕೆ ಯೇಸು, "ನೀವಾಗಿಯೇ ಇದನ್ನು ಹೇಳುತ್ತಿರುವಿರೋ ಅಥವಾ ಬೇರೆ ಯಾರಾದರೂ ನನ್ನನ್ನು ಕುರಿತು ಹೀಗೆ ಹೇಳಿದರೋ?" ಎನ್ನಲು ಪಿಲಾತನು, "ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನರು ಮತ್ತು ಮುಖ್ಯ ಯಾಜಕರು ನಿನ್ನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?" ಎಂದು ಕೇಳಿದನು ಅದಕ್ಕೆ ಯೇಸು, "ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ," ಎಂದರು. ಪಿಲಾತನು, "ಹಾಗಾದರೆ ನೀನೊಬ್ಬ ಅರಸನೋ?" ಎಂದು ಕೇಳಲು ಯೇಸು, 'ಅರಸ' ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ," ಎಂದು ಹೇಳಿದರು. ಆಗ ಪಿಲಾತನು, ಸತ್ಯ, ಸತ್ಯ ಎಂದರೆ ಏನು?" ಎಂದು ಪ್ರಶ್ನಿಸಿ ಅಲ್ಲಿ ನಿಲ್ಲದೆ ಹೊರಗೆಬಂದನು. ಹೀಗೆ ಪಿಲಾತನು ಹೊರಗೆ ಯೆಹೂದ್ಯರ ಬಳಿಗೆ ಬಂದು, "ನನಗೇ ಈತನಲ್ಲಿ ಯಾವ ಅಪರಾಧವೂ ಕಾಣುವುದಿಲ್ಲ. ಪಾಸ್ಕಹಬ್ಬದ ಸಂದರ್ಭದಲ್ಲಿ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ಪದ್ದತಿಯಿದೆಯಷ್ಟೆ? ಆದ್ದರಿಂದ ನೀವು ಬಯಸಿದರೆ ಯೆಹೂದ್ಯರ ಅರಸನನ್ನು ನಾನು ಬಿಡುಗಡೆ ಮಾಡುತ್ತೇನೆ," ಎಂದು ಹೇಳಿದನು. ಅದಕ್ಕೆ ಅವರು,  ಅವರು, "ಬೇಡ, ಇವನು ಬೇಡ. ನಮಗೆ ಬರಬ್ಬನನ್ನು ಬಿಟ್ಟುಕೊಡಿ," ಎಂದು ಬೊಬ್ಬೆ ಹಾಕಿದರು. ಬರಬ್ಬನೋ ಒಬ್ಬ ದರೋಡೆಕೋರನಾಗಿದ್ದನು. ಆಮೇಲೆ ಪಿಲಾತನು ಯೇಸುಸ್ವಾಮಿಯನ್ನು ಅಲ್ಲಿಂದ ಕರೆದೊಯ್ದು ಕೊರಡೆಯಿಂದ ಹೊಡೆಸಿದನು. ಸೈನಿಕರೋ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಗೆ ಮುಡಿಸಿ, ಕೆನ್ನೇರಳೆ ಬಣ್ಣದ ಅಂಗಿಯನ್ನು ಅವರಿಗೆ ಉಡಿಸಿ, ಹತ್ತಿರ ಬಂದು, “ಯೆಹೂದ್ಯರ ಅರಸನೇ, ನಿನಗೆ ಶುಭವಾಗಲಿ,” ಎಂದು ಜರೆಯುತ್ತಾ ಅವರ ಕೆನ್ನೆಗೆ ಹೊಡೆಯತೊಡಗಿದರು. ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು. ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆನ್ನೇರಳೆ ಬಣ್ಣದ ಅಂಗಿಯನ್ನೂ ಧರಿಸಿದವರಾಗಿ ಹೊರಕ್ಕೆ ಬಂದರು. ಪಿಲಾತನು, “ಇಗೋ, ಈ ಮನುಷ್ಯ!” ಎಂದನು. ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ಕಂಡೊಡನೆ, “ಇವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಬೊಬ್ಬೆಹಾಕಿದರು. ಆಗ ಪಿಲಾತನು, “ಬೇಕಾದರೆ ನೀವೇ ಇವನನ್ನು ಕರೆದುಕೊಂಡು ಹೋಗಿ ಶಿಲುಬೆಗೇರಿಸಿ. ನನಗಾದರೋ ಇವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ,” ಎಂದನು. ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು. ಇದನ್ನು ಕೇಳಿದ್ದೇ, ಪಿಲಾತನಿಗೆ ಮತ್ತಷ್ಟು ಭಯವಾಯಿತು. ಅವನು ಮತ್ತೆ ಅರಮನೆಯ ಒಳಕ್ಕೆ ಬಂದು, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಉತ್ತರಕೊಡಲಿಲ್ಲ. ಆಗ ಪಿಲಾತನು, “ನನ್ನೊಡನೆ ನೀನು ಮಾತನಾಡುವುದಿಲ್ಲವೇ? ನಿನ್ನನ್ನು ಬಿಡುಗಡೆ ಮಾಡುವುದಕ್ಕೂ ನಿನ್ನನ್ನು ಶಿಲುಬೆಗೇರಿಸುವುದಕ್ಕೂ ನನಗೆ ಅಧಿಕಾರವಿದೆ ಎಂಬುದು ನಿನಗೆ ತಿಳಿಯದೋ?” ಎಂದನು. ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು. ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು. ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು. ಅಂದು ಹಬ್ಬದ ಹಿಂದಿನ ದಿನ, ಮಧ್ಯಾಹ್ನ ಹನ್ನೆರಡು ಗಂಟೆ ಇರಬಹುದು. ಪಿಲಾತನು ಯೆಹೂದ್ಯರನ್ನು ನೋಡಿ, “ಇಗೋ, ನಿಮ್ಮ ಅರಸನು,” ಎಂದು ಹೇಳಿದನು. ಅವರಾದರೋ “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು. ಕಡೆಗೆ ಪಿಲಾತನು ಯೇಸುವನ್ನು ಶಿಲುಬೆಗೇರಿಸುವುದಕ್ಕಾಗಿ ಅವರಿಗೆ ಒಪ್ಪಿಸಿಬಿಟ್ಟನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಯೇಸುಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು. ಅಲ್ಲಿ ಯೇಸುವನ್ನು ಶಿಲುಬೆಗೇರಿಸಿದರು. ಅವರ ಅಕ್ಕಪಕ್ಕದಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಪಿಲಾತನು ಒಂದು ಫಲಕದ ಮೇಲೆ, ‘ನಜರೇತಿನ ಯೇಸು, ಯೆಹೂದ್ಯರ ಅರಸ’ ಎಂದು ಬರೆಸಿ ಶಿಲುಬೆಯ ಮೇಲ್ಗಡೆ ಇರಿಸಿದರು. ಯೇಸುವನ್ನು ಶಿಲುಬೆಗೇರಿಸಿದ ಸ್ಥಳ ನಗರಕ್ಕೆ ಸಮೀಪದಲ್ಲೇ ಇದ್ದುದರಿಂದ, ಹಲವು ಮಂದಿ ಯೆಹೂದ್ಯರು ಆ ಫಲಕವನ್ನು ಓದಿದರು. ಅದನ್ನು ಹಿಬ್ರಿಯ, ಲತೀನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.
ಆದುದರಿಂದ ಯೆಹೂದ್ಯರ ಮುಖ್ಯ ಯಾಜಕರು ಪಿಲಾತನಿಗೆ: “ಯೆಹೂದ್ಯರ ಅರಸ ಎಂದು ಬರೆಯುವುದು ಬೇಡ, ತಾನು ‘ಯೆಹೂದ್ಯರ ಅರಸನೆಂದು ಹೇಳಿಕೊಂಡವನು’ ಎಂದು ಬರೆಯಿರಿ,” ಎಂದರು. ಅದಕ್ಕೆ ಪಿಲಾತನು, “ನಾನು ಬರೆದುದು ಬರೆದಾಯಿತು,” ಎಂದನು. ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಸೈನಿಕರು ಯೇಸುವಿನ ಬಟ್ಟೆಗಳನ್ನು ತೆಗೆದುಕೊಂಡು ಒಬ್ಬೊಬ್ಬರಿಗೆ ಒಂದೊಂದು ಪಾಲಿನಂತೆ ನಾಲ್ಕು ಪಾಲುಮಾಡಿ ಹಂಚಿಕೊಂಡರು. ಅವರ ಒಳ ಅಂಗಿಯಾದರೋ ಹೊಲಿಗೆಯಿಲ್ಲದೆ ಮೇಲಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು. ಅದನ್ನು ತೆಗೆದುಕೊಂಡು ಅವರು ತಮ್ಮತಮ್ಮೊಳಗೆ, “ಇದನ್ನು ಹರಿಯುವುದು ಬೇಡ, ಚೀಟಿ ಹಾಕಿ ಯಾರ ಪಾಲಿಗೆ ಬರುವುದೋ ನೋಡೋಣ,” ಎಂದು ಮಾತಾಡಿಕೊಂಡು ಹಾಗೆಯೆ ಮಾಡಿದರು. “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿ ಕೊಂಡರು; ನನ್ನ ಅಂಗಿಗಾಗಿ ಚೀಟು ಹಾಕಿದರು,” ಎಂಬ ಪವಿತ್ರ ಗ್ರಂಥದ ವಾಕ್ಯ ಹೀಗೆ ನೆರವೇರಿತು. ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು. ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ತಮ್ಮ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು. ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು. ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು. ಇದಾದ ಮೇಲೆ ಯೇಸುಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು. ಬಳಿಯಲ್ಲೇ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಅವರು ಸ್ಪಂಜನ್ನು ಆ ಹುಳಿರಸದಲ್ಲಿ ತೋಯಿಸಿ ಹಿಸೋಪ್‍ಗಿಡದ ಕೋಲಿಗೆ ಸಿಕ್ಕಿಸಿ, ಯೇಸುವಿನ ಬಾಯಿಗೆ ಮುಟ್ಟಿಸಿದರು. ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು.
      ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು. ಅಂತೆಯೇ ಸೈನಿಕರು ಬಂದು ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಮತ್ತು ಎರಡನೆಯವನ ಕಾಲುಗಳನ್ನು ಮುರಿದರು. ತರುವಾಯ ಯೇಸುವಿನ ಬಳಿಗೆ ಬಂದರು. ಯೇಸು ಆಗಲೇ ಸತ್ತುಹೋಗಿರುವುದನ್ನು ಕಂಡು, ಅವರ ಕಾಲುಗಳನ್ನು ಮುರಿಯಲಿಲ್ಲ. ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದು ಬಂದವು. ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ. ‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು. ‘ತಾವು ಇರಿದವನನ್ನೇ ಅವರು ನಿರೀಕ್ಷಿಸುವರು’ ಎನ್ನುತ್ತದೆ ಇನ್ನೊಂದು ವಾಕ್ಯ. ಅರಿಮತಾಯ ಊರಿನ ಜೋಸೆಫ್ ಎಂಬುವನೂ ಕೂಡ ಯೇಸುವಿನ ಶಿಷ್ಯರಲ್ಲಿ ಒಬ್ಬನು. ಈತನು ಯೆಹೂದ್ಯರಿಗೆ ಹೆದರಿ ತಾನು ಶಿಷ್ಯನೆಂದು ತೋರಿಸಿಕೊಳ್ಳುತ್ತಿರಲಿಲ್ಲ. ಮೇಲೆ ಹೇಳಿದ್ದೆಲ್ಲ ನಡೆದಾದ ಮೇಲೆ ಈತನು ಯೇಸುವಿನ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ಪಿಲಾತನಿಂದ ಅಪ್ಪಣೆ ಕೇಳಿದನು. ಪಿಲಾತನು ಒಪ್ಪಿಗೆ ಕೊಡಲು ಈತನು ಬಂದು ಪಾರ್ಥಿವ ಶರೀರವನ್ನು ಕೊಂಡೊಯ್ದನು. ಈತನು ಮಾತ್ರವಲ್ಲ, ಹಿಂದೊಮ್ಮೆ ಯೇಸುವನ್ನು ರಾತ್ರಿಯಲ್ಲಿ ನೋಡಲು ಬಂದಿದ್ದ ನಿಕೋದೇಮನು ಕೂಡ ಅಲ್ಲಿಗೆ ಬಂದನು. ಇವನು ರಕ್ತಬೋಳ ಹಾಗೂ ಅಗರು ಕಲಸಿದ ಮೂವತ್ತು ಕಿಲೋಗ್ರಾಮಿನಷ್ಟು ಚೂರ್ಣವನ್ನು ತಂದಿದ್ದನು. ಇವರು ಯೇಸುವಿನ ಪಾರ್ಥಿವ ಶರೀರವನ್ನು ತೆಗೆದು ಯೆಹೂದ್ಯರ ಶವಸಂಸ್ಕಾರದ ಪದ್ದತಿಯಂತೆ ಸುಗಂಧ ದ್ರವ್ಯಗಳನ್ನು ಹಾಕಿ ನಾರುಮಡಿಯಲ್ಲಿ ಸುತ್ತಿದರು. ಯೇಸುವನ್ನು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಅದುವರೆಗೆ ಯಾರ ಶವವನ್ನೂ ಇಡದ ಹೊಸ ಸಮಾಧಿ ಇತ್ತು. ಸಮಾಧಿಯು ಹತ್ತಿರದಲ್ಲೇ ಇದ್ದುದರಿಂದ ಹಾಗೂ ಮರುದಿನ ಪಾಸ್ಕಹಬ್ಬವಾದುದರಿಂದ ಯೇಸುವಿನ ಪಾರ್ಥಿವ ಶರೀರವನ್ನು ಅಲ್ಲೇ ಸಮಾಧಿಮಾಡಿದರು.

18.04.2019 - ನಾನು ನಿಮಗೆ ಮಾಡಿದಂತೆಯೇ ನೀವೂ ಇತರರಿಗೆ ಮಾಡಿರಿ.

ಪವಿತ್ರ ಗುರುವಾರ


ಮೊದಲನೇ ವಾಚನ: ವಿಮೋಚನಾಕಾಂಡ 12:1-8, 11-14

ಸರ್ವೇಶ್ವರಸ್ವಾಮಿ ಮೋಶೆ ಮತ್ತು ಆರೋನರ ಸಂಗಡ ಮತನಾಡಿ ಹೀಗೆಂದರು: "ಎಲ್ಲ ಮಾಸಗಳಲ್ಲಿ ಇದೇ ನಿಮಗೆ ಆದಿ ಮಾಸವಾಗಿರಬೇಕು. ಇದೇ ನಿಮಗೆ ಪ್ರತಿವರ್ಷದ ಮೊದಲನೆಯ ತಿಂಗಳಾಗಿರಬೇಕು. ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆ ಇಡಬೇಕು: ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ಆರಿಸಿಕೊಳ್ಳಬೇಕು. ಕುಟುಂಬವು ಚಿಕ್ಕದಾಗಿದ್ದು ಒಂದು ಮರಿಯನ್ನು ಪೂರ್ತಿಯಾಗಿ ತಿನ್ನಲಾಗದಿದ್ದರೆ ಹತ್ತಿರದ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಲೆಕ್ಕ ಹಾಕಿ ಜನಗಳ ಸಂಖ್ಯಾನುಸಾರ ಮರಿಗಳನ್ನು ಆರಿಸಿಕೊಳ್ಳಲಿ. ಆ ಮರಿಯು ಯಾವ ದೋಷವೂ ಇರದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು. ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನ ಸಂಜೆ ವೇಳೆಯಲ್ಲಿ ಇಸ್ರಯೇಲ್ ಸಮಾಜದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು. ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನ ಮಾಡುವ ಮನೆಯ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು. ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು, ಬೇಗ ಬೇಗನೆ ಊಟ ಮಾಡಬೇಕು: ಏಕೆಂದರೆ ಅದು ಸರ್ವೇಶ್ವರಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ. ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದು ಹೋಗುವೆನು; ಮನುಷ್ಯರಾಗಿರಲಿ, ಪ್ರಾಣಿಗಳಾಗಿರಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ! ನೀವು ಬಾಗಿಲಿಗೆ ಹಚ್ಚಿದ ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವುದು. ಅದನ್ನು ಕಂಡು ನಿಮಗೆ ಯಾವ ಹಾನಿಯನ್ನು ಮಾಡದೆ ಮುಂದಕ್ಕೆ ದಾಟಿ ಹೋಗುವೆನು. ನಾನು ಈಜಿಪ್ಟಿನವರನ್ನು ಸಂಹರಿಸುವಾಗ ನಿಮಗೆ ಯಾವ ಕೇಡೂ ಆಗದು.  ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು".

ಕೀರ್ತನೆ: 116:12-13, 15-16, 17-18

ಶ್ಲೋಕ: ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತೇಸುವಿನ ರಕ್ತದಲ್ಲಿ ಪಾಲ್ಗೊಳ್ಳುತ್ತೇವೆ.

ಎರಡನೇ ವಾಚನ: 1 ಕೊರಿಂಥಿಯರಿಗೆ 11:23-26

ಸಹೋದರರೇ, ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ; ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ ರೊಟ್ಟಿಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಅದನ್ನು ಮುರಿದು, "ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ," ಎಂದರು. ಅಂತೆಯೇ ಭೋ ಬೋಜನದ ಕೊನೆಯಲ್ಲಿ ಪಾನ ಪಾತ್ರೆಯನ್ನು ತೆಗೆದುಕೊಂಡು, "ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ," ಎಂದರು. ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.

ಶುಭಸಂದೇಶ: ಯೊವಾನ್ನ 13:1-15


ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದೆಂದು ಯೇಸುಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು. (ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು) ಊಟಕ್ಕೆ ಎಲ್ಲರೂ ಕುಳಿತಿದ್ದರು ಪಿತನು ಎಲ್ಲವನ್ನು ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೇನೆಂದೂ ಯೇಸುವಿಗೆ ತಿಳಿದಿತ್ತು. ಅವರು ಊಟದಿಂದ ಎದ್ದು, ತಮ್ಮ ಮೇಲುಹೊದಿಕೆಯನ್ನು ತೆಗೆದಿಟ್ಟರು. ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡರು. ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ತಮ್ಮ ಶಿಷ್ಯರ ಕಾಲುಗಳನ್ನು ತೊಳೆಯುತ್ತಾ ತಾವು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಒರಸತೊಡಗಿದರು. ಹೀಗೆ, ಅವರು ಸಿಮೋನ ಪೇತ್ರನ ಹತ್ತಿರಕ್ಕೆ ಬಂದಾಗ ಆತ, "ಪ್ರಭುವೇ, ನೀವು ನನ್ನ ಕಾಲುಗಳನ್ನು ತೊಳೆಯುವುದೇ?" ಎಂದನು. ಯೇಸು, "ನಾನು ಮಾಡುತ್ತಿರುವುದು ನಿನಗೆ ಈಗ ಅರ್ಥವಾಗದು, ಮುಂದೆ ಅರ್ಥವಾಗುತ್ತದೆ," ಎಂದು ಉತ್ತರಿಸಿದರು. "ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು," ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, "ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ," ಎಂದು ನುಡಿದರು. ಆಗ ಪೇತ್ರನು, "ಹಾಗಾದರೆ ಪ್ರಭು, ನನ್ನ ಕಾಲುಗಳನ್ನು ಮಾತ್ರವಲ್ಲ, ನನ್ನ ಕೈಗಳನ್ನು ತಲೆಯನ್ನೂ ತೊಳೆಯಿರಿ," ಎಂದನು. ಯೇಸು, "ಸ್ನಾನ ಮಾಡಿಕೊಂಡವನು ಕಾಲುಗಳನ್ನು ತೊಳೆದುಕೊಂಡರೆ ಸಾಕು, ಅವನ ಮೈಯೆಲ್ಲಾ ಶುದ್ದವಾಗಿರುತ್ತದೆ, ನೀವೂ ಕೂಡ ಶುದ್ದರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ದರಲ್ಲ," ಎಂದು ಹೇಳಿದರು.

ತಮ್ಮನ್ನು ಗುರುದ್ರೋಹದಿಂದ ಹಿಡಿದುಕೊಡುವವನು ಯಾರೆಂಬುದು ಅವರಿಗೆ ಗೊತ್ತಿತ್ತು. ಅದಕ್ಕಾಗಿಯೇ ಅವರು, ನಿಮ್ಮಲ್ಲಿ ಎಲ್ಲರೂ ಶುದ್ದರಲ್ಲ; ಎಂದು ಹೇಳಿದರು. ಶಿಷ್ಯರ ಪಾದಗಳನ್ನು ತೊಳೆದ ಮೇಲೆ ಯೇಸು ತಮ್ಮ ಶಿಷ್ಯರಿಗೆ, "ನಿಮಗೆ ನಾನು ಮಾಡಿರುವುದೇನೆಂದು ಅರ್ಥವಾಯಿತೆ? ಭೋಧಕರೆ, ಪ್ರಭುವೇ, ಎಂದು ನೀವು ನನ್ನನ್ನು ಕರೆಯುತ್ತೀರಿ; ನೀವು ಹಾಗೆ ಹೇಳುವುದು ಸರಿಯೆ. ನಾನು ಭೋದಕನೂ ಹೌದು,  ಪ್ರಭುವೂ ಹೌದು ನಿಮಗೆ ಪ್ರಭುವೂ ಭೋದಕನೂ ಆಗಿರುವ ನಾನೇ ನಿಮ್ಮ ಕಾಲುಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಕಾಲುಗಳನ್ನು ಇನ್ನೊಬ್ಬರು ತೊಳೆಯುವ ಹಂಗಿನಲ್ಲಿದ್ದೀರಿ. ನಾನು ನಿಮಗೆ ಒಂದು ಆದರ್ಶವನ್ನು ಕೊಟ್ಟಿದ್ದೇನೆ. ನಾನು ನಿಮಗೆ ಮಾಡಿದಂತೆಯೇ ನೀವೂ ಇತರರಿಗೆ ಮಾಡಿರಿ.

ಮನಸಿಗೊಂದಿಷ್ಟು :
"ಭ್ರಷ್ಟ ಶಿಷ್ಯನನ್ನು ಸಂಗಡ ವಿಂಗಡಿಸದೆಯೇ
ಆಷ್ಟು ಪ್ರೇಮದಿಂದ ಅವನ ಪಾದ ತೊಳೆದರು"
ಎಂಬುದು ಪವಿತ್ರ ಗುರುವಾರದ ಗೀತೆಯೊಂದರ ಸಾಲು. ತಮ್ಮದೇ ಶಿಷ್ಯನೊಬ್ಬ ತಮಗೆ ದ್ರೋಹವೆಸಗಿ ತಮ್ಮ ಮರಣಕ್ಕೆ ಕಾರಣನಾಗುತ್ತಾನೆ ಎಂಬ ಸತ್ಯ ಯೇಸುವಿಗೆ ಗೊತಿತ್ತು. ಒಬ್ಬ ಗುರುವಿಗೆ ಇದಕ್ಕಿಂತ ದೊಡ್ಡ ನಂಬಿಕೆ ದ್ರೋಹ ಹಾಗೂ ನೋವು ಬೇರಿಲ್ಲ.  ಅದರೆ ಈ ಪರಿಸ್ಥಿತಿಯನ್ನು ಯೇಸು ನಿಭಾಯಿಸಿದ ರೀತಿ ಇತಿಹಾಸ ಪುಟಗಳಲ್ಲಿ ಅಮರವಾಗಿದೆ. ಅತ್ಯಂತ ವಿನಯ ಹಾಗೂ ಅತ್ಯಂತೆ ಪ್ರೀತಿಯಿಂದ ಆ ದ್ರೋಹವನ್ನು ಸಹಿಸಿಕೊಳ್ಳುತ್ತಾರೆ.

ಧಾರ್ಮಿಕ ಆಚರಣೆಗಳಿಂದ ಪ್ರತ್ಯೇಕವಾಗಿ ನೋಡಿದರೂ ಇತಿಹಾಸ ಪುಟಗಳಲ್ಲಿ ಅತ್ಯಂತ ಹೃದಯಸ್ಪರ್ಶಿ ಘಟನೆಯೆಂದರೆ ಯೇಸು ತಮ್ಮ ಶಿಷ್ಯರ ಪಾದ ತೊಳೆದದ್ದು. ಈ ಘಟನೆಗೆ  ಹೆಚ್ಚಿನ ವಿವರಣೆ ಬೇಕಿಲ್ಲ. ಇದನ್ನು ನಾವು ನೆನೆದಾಗಲೆಲ್ಲಾ ಯೇಸು ನಮ್ಮದೇ ಪಾದ ತೊಳೆದಂತಾಗಬೇಕು, ನಮ್ಮಲ್ಲಿ ಆ ವಿನಯ, ಆ ಪ್ರೀತಿ, ಆ ಸಹನೆ ಮನೆ ಮಾಡಬೇಕು.

"ಅಯ್ಯೋ ಜನರೇ, ನಿಮ್ಮ ಹೃದಯವಿನ್ನು ದು;ಖಿಸದೇ
ದಿವ್ಯ ಕರ್ತರನ್ನು ಭಾದೆಪಡಿಸಲಿರುವಿರೋ" 

ಪ್ರಶ್ನೆ : ಯೇಸುವಿನ ಈ ಉದಾತ್ತ ಕ್ರಿಯೆಗೆ ನಮ್ಮ ಪ್ರತಿಕ್ರಿಯೆ ಏನು?