ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 6:8-15
ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು.ಜನರ ಮಧ್ಯೆ ಅದ್ಬುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು. ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು "ಬಿಡುಗಡೆ ಹೊಂದಿದವರು" ಎಂಬುವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು. ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ. ಆದುದರಿಂದ ಕೆಲವರಿಗೆ ಲಂಚಕೊಟ್ಟು "ಸ್ತೇಫನನು ಮೋಶೆಯನ್ನೂ ದೇವರನ್ನೂ ದೂಷಿಸುತ್ತಾನೆ; ಇದನ್ನು ನಾವು ಕೇಳಿದ್ದೇವೆ" ಎಂದು ಹೇಳಿಸಿದರು. ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂದಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು. ಕೆಲವರು ಸುಳ್ಳುಸಾಕ್ಷಿಗಳನ್ನು ನೇಮಿಸಿಕೊಂಡು ಅವರಿಂದ, "ಇವನು ಯಾವಾಗಲೂನಮ್ಮ ಪವಿತ್ರದೇವಾಲಯದ ವಿರುದ್ಧ ಹಾಗೂ ಮೊಶೆಯ ಧರ್ಮಶಾಸ್ತ್ರದ ವಿರಿದ್ಧ ಮಾತನಾಡುತ್ತಾನೆ. ನಜರೇತಿನ ಆ ಯೇಸು ಈ ಮಹಾದೇವಾಲಯವನ್ನು ನಾಶಗೊಳಿಸುವನೆಂದೂ ಮೊಶೆ ನಮಗೆ ವಿದಧಿಸಿದ ಸಂಪ್ರದಾಯಗಳನ್ನು ಬಲಗೊಳಿಸುವನೆಂದೂ ಇವನು ಹೇಳಿರುತ್ರಾನೆ. ಇದನ್ನು ನಾವು ಕೇಳಿದ್ದೇವೆ," ಎಂದು ಹೇಳಿಸಿದರು. ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.
ಕೀರ್ತನೆ: 119:23, 24, 26, 27, 29, 30
ಶ್ಲೋಕ: ಪ್ರಭುವಿನ ಶಾಸ್ತ್ರಾನುಸಾರ ನಡೆದವರು ಧನ್ಯರು
ಶುಭಸಂದೇಶ: ಯೊವಾನ್ನ 6:22-29
ನರೆದಿದ್ದ ಜನರು ಮೂರನೆಯ ದಿನವು ಸರೋವರದ ಆಚೆಕಡೆಯೇ ಉಳಿದಿದ್ದರು. ಹಿಂದಿನ ದಿನ ಅಲ್ಲಿ ಒಂದೇ ಒಂದು ದೋಣಿ ಇದ್ದುದನ್ನು ಅವರು ನೋಡಿದರು. ಯೇಸುಸ್ವಾಮಿ ಶಿಷ್ಯರೋಡನೆ ದೋಣಿಯನ್ನು ಹತ್ತಲಿಲ್ಲವಾದ್ದರಿಂದ ಶಿಷ್ಯರು ಮಾತ್ರ ಹೊರಟು ಹೋಗಿದ್ದಾರೆಂದು ಅವರಿಗೆ ತಿಳಿದಿತ್ತು. ತಿಬೇರಿಯಾದಿಂದ ಹೊರಟ್ಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು. ಯೇಸು ಆಗಲಿ, ಅವರ ಶಿಷ್ಯರಾಗಲಿ ಇಲ್ಲದ್ದನ್ನು ನೋಡಿ ಜನರು ಆ ದೋಣಿಯನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಫೆರ್ನವುಮಿಗೆ ಬಂದರು. ಜನರು ಯೇಸುಸ್ವಾಮಿಯನ್ನು ಸರೋವರದ ಆಚೆದಡದಲ್ಲಿ ಕಂಡೊಡನೆ, "ಗುರುದೇವಾ, ತಾವಿಲ್ಲಿಗೆ ಬಂದುದು ಯಾವಾಗ ?" ಎಂದು ಕೇಳಿದರು. ಯೇಸು ಅವರಿಗೆ, "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ. ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ," ಎಂದು ಉತ್ತರಕೊಟ್ಟರು. ಆಗ ಆ ಜನರು "ದೇವರು ಮೆಚ್ಚುವ ಕಾರ್ಯಗಳನ್ನು ನಾವು ಮಾಡಬೇಕಾದರೆ, ಏನು ಮಾಡಬೇಕು?" ಎಂದು ಕೇಳಿದರು. ಅದಕ್ಕೆ ಯೇಸು, "ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ," ಎಂದರು.
No comments:
Post a Comment