ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 11:1-18
ಅನ್ಯಧರ್ಮದವರೂ ಸಹ ದೈವವಾಕ್ಯವನ್ನು ಸ್ವೀಕರಿಸಿದರೆಂಬ ಸುದ್ಧಿ ಜುದೇಯದಲ್ಲಿದ್ದ ಪ್ರೇಷಿತರಿಗೂ ವಿಶ್ವಾಸಿಗಳಿಗೂ ಮುಟ್ಟಿತು. ಪೇತ್ರನು ಜೆರುಸಲೇಮಿಗೆ ಹೋದಾಗ ಅನ್ಯಧರ್ಮದವರಿಗೆ ಸುನ್ನತಿಯಾಗಬೇಕು ಎನ್ನುತ್ತಿದ್ದ ಪಂಗಡದವರು ಮುಂದೆ ಬಂದು, "ನೀನು ಸುನ್ನತಿಯಿಲ್ಲದ ಅನ್ಯಧರ್ಮದವರ ಮನೆಗೆ ಭೇಟಿಕೊಟ್ಟು ಅವರೊಡನೆ ಊಟಮಾಡಿದ್ದೇಕೆ?" ಎಂದು ಆಕ್ಷೇಪಿಸಿದರು. ಅದಕ್ಕೆ ಪೇತ್ರನು ನಡೆದ ವೃತ್ತಾಂತವನ್ನು ಅಮೂಲಾಗ್ರವಾಗಿ ಅವರಿಗೆ ವಿವರಿಸಿದನು: "ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿದುಬಿಡಲಾಗಿತ್ತು ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು. ಅದನ್ನು ಗಮನಿಸಿ ನೋಡಿದಾಗ ಅದರಲ್ಲಿ ಪ್ರಾಣಿಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಕಂಡುಬಂದವು. ಆಗ, "ಪೇತ್ರ, ಏಳು, ಕೊಯ್ದು ತಿನ್ನು" ಎಂಬ ವಾಣಿ ನನಗೆ ಕೇಳಿಸಿತು. ಅದಕ್ಕೆ ನಾನು, 'ಬೇಡವೇ ಬೇಡ ಸ್ವಾಮಿ, ಅಶುದ್ದ ಹಾಗು ಅಸ್ಫೃಶ್ಯವಾದುದು ಯಾವುದೂ ನನ್ನ ಬಾಯನ್ನು ಎಂದೂ ಹೊಕ್ಕಿಲ್ಲ,' ಎಂದೆ. ಮತ್ತೊಮ್ಮೆ ಆ ವಾಣಿ ಸ್ವರ್ಗಲೋಕದಿಂದ, "ದೇವರೇ ಶುದ್ಧೀಕರಿಸಿರುವ ಏನನ್ನೂ ನೀನು ಅಶುದ್ಧವೆನ್ನಬೇಡ," ಎಂದು ಉತ್ತರಿಸಿತು. ಹೀಗೆ ಮೂರು ಬಾರಿ ನಡೆದ ಮೇಲೆ, ಅವೆಲ್ಲವನ್ನೂ ಒಟ್ಟಿಗೆ ಸ್ವರ್ಗಕ್ಕೆ ಮರಳಿ ಎಳೆದುಕೊಳ್ಳಲಾಯಿತು. ಅದೇ ಸಮಯಕ್ಕೆ ಸರಿಯಾಗಿ, ಸೆಜರೇಯದಿಂದ ಕಳುಹಿಸಲಾದ ಮೂವರು ಮಂದಿ ನನ್ನನ್ನು ಹುಡುಕಿಕೊಂಡು, ನಾನು ತಂಗಿದ್ದ ಮನೆಗೆ ಬಂದರು. ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು. ಅವನು, "ನನ್ನ ಮನೆಯಲ್ಲೇ ದೂತನೊಬ್ಬನು ಕಾಣಿಸಿಕೊಂಡು, ಈಗಲೇ ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು. ಅವನು, ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು," ಎಂದು ತಿಳಿಸಿದನು" ಎಂದು ನಮಗೆ ಹೇಳಿದನು. ನಾನು ಉಪದೇಶಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದು ಬಂದರು. ಆಗ ನನಗೆ, "ಯೊವಾನ್ನನು ನೀರಿನಿಂದ ಸ್ನಾನದೀಕ್ಷೆಯನ್ನು ಕೊಟ್ಟನು. ನೀವಾದರೋ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನವನ್ನು ಪಡೆಯುವಿರಿ," ಎಂಬ ಪ್ರಭುವಿನ ಮಾತುಗಳು ನೆನಪಿಗೆ ಬಂದವು. ನಾವು ಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?" ಎಂದನು. ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು. ಮಾತ್ರವಲ್ಲ, 'ಅನ್ಯಧರ್ಮದವರೂ ಪಶ್ಚಾತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!' ಎಂದು ದೈವಸ್ತುತಿ ಮಾಡಿದರು.
ಅನ್ಯಧರ್ಮದವರೂ ಸಹ ದೈವವಾಕ್ಯವನ್ನು ಸ್ವೀಕರಿಸಿದರೆಂಬ ಸುದ್ಧಿ ಜುದೇಯದಲ್ಲಿದ್ದ ಪ್ರೇಷಿತರಿಗೂ ವಿಶ್ವಾಸಿಗಳಿಗೂ ಮುಟ್ಟಿತು. ಪೇತ್ರನು ಜೆರುಸಲೇಮಿಗೆ ಹೋದಾಗ ಅನ್ಯಧರ್ಮದವರಿಗೆ ಸುನ್ನತಿಯಾಗಬೇಕು ಎನ್ನುತ್ತಿದ್ದ ಪಂಗಡದವರು ಮುಂದೆ ಬಂದು, "ನೀನು ಸುನ್ನತಿಯಿಲ್ಲದ ಅನ್ಯಧರ್ಮದವರ ಮನೆಗೆ ಭೇಟಿಕೊಟ್ಟು ಅವರೊಡನೆ ಊಟಮಾಡಿದ್ದೇಕೆ?" ಎಂದು ಆಕ್ಷೇಪಿಸಿದರು. ಅದಕ್ಕೆ ಪೇತ್ರನು ನಡೆದ ವೃತ್ತಾಂತವನ್ನು ಅಮೂಲಾಗ್ರವಾಗಿ ಅವರಿಗೆ ವಿವರಿಸಿದನು: "ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿದುಬಿಡಲಾಗಿತ್ತು ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು. ಅದನ್ನು ಗಮನಿಸಿ ನೋಡಿದಾಗ ಅದರಲ್ಲಿ ಪ್ರಾಣಿಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಕಂಡುಬಂದವು. ಆಗ, "ಪೇತ್ರ, ಏಳು, ಕೊಯ್ದು ತಿನ್ನು" ಎಂಬ ವಾಣಿ ನನಗೆ ಕೇಳಿಸಿತು. ಅದಕ್ಕೆ ನಾನು, 'ಬೇಡವೇ ಬೇಡ ಸ್ವಾಮಿ, ಅಶುದ್ದ ಹಾಗು ಅಸ್ಫೃಶ್ಯವಾದುದು ಯಾವುದೂ ನನ್ನ ಬಾಯನ್ನು ಎಂದೂ ಹೊಕ್ಕಿಲ್ಲ,' ಎಂದೆ. ಮತ್ತೊಮ್ಮೆ ಆ ವಾಣಿ ಸ್ವರ್ಗಲೋಕದಿಂದ, "ದೇವರೇ ಶುದ್ಧೀಕರಿಸಿರುವ ಏನನ್ನೂ ನೀನು ಅಶುದ್ಧವೆನ್ನಬೇಡ," ಎಂದು ಉತ್ತರಿಸಿತು. ಹೀಗೆ ಮೂರು ಬಾರಿ ನಡೆದ ಮೇಲೆ, ಅವೆಲ್ಲವನ್ನೂ ಒಟ್ಟಿಗೆ ಸ್ವರ್ಗಕ್ಕೆ ಮರಳಿ ಎಳೆದುಕೊಳ್ಳಲಾಯಿತು. ಅದೇ ಸಮಯಕ್ಕೆ ಸರಿಯಾಗಿ, ಸೆಜರೇಯದಿಂದ ಕಳುಹಿಸಲಾದ ಮೂವರು ಮಂದಿ ನನ್ನನ್ನು ಹುಡುಕಿಕೊಂಡು, ನಾನು ತಂಗಿದ್ದ ಮನೆಗೆ ಬಂದರು. ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು. ಅವನು, "ನನ್ನ ಮನೆಯಲ್ಲೇ ದೂತನೊಬ್ಬನು ಕಾಣಿಸಿಕೊಂಡು, ಈಗಲೇ ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು. ಅವನು, ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು," ಎಂದು ತಿಳಿಸಿದನು" ಎಂದು ನಮಗೆ ಹೇಳಿದನು. ನಾನು ಉಪದೇಶಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದು ಬಂದರು. ಆಗ ನನಗೆ, "ಯೊವಾನ್ನನು ನೀರಿನಿಂದ ಸ್ನಾನದೀಕ್ಷೆಯನ್ನು ಕೊಟ್ಟನು. ನೀವಾದರೋ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನವನ್ನು ಪಡೆಯುವಿರಿ," ಎಂಬ ಪ್ರಭುವಿನ ಮಾತುಗಳು ನೆನಪಿಗೆ ಬಂದವು. ನಾವು ಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?" ಎಂದನು. ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು. ಮಾತ್ರವಲ್ಲ, 'ಅನ್ಯಧರ್ಮದವರೂ ಪಶ್ಚಾತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!' ಎಂದು ದೈವಸ್ತುತಿ ಮಾಡಿದರು.
ಕೀರ್ತನೆ: 42:2-3, 43:3-4
ಶ್ಲೋಕ: ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ
"ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿ ಬರುವವನು ಕಳ್ಳ ಹಾಗೂ ಕೊಳ್ಳೆಗಾರ. ಬಾಗಿಲ ಮೂಲಕ ಬರುವವನು ಕುರಿಗಾಹಿ. ಕಾವಲುಗಾರನು ಅವನಿಗೆ ಬಾಗಿಲು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಕುರಿಗಳನ್ನು ಹೆಸರಿಟ್ಟು ಕರೆದು ಹೊರೆಗೆ ಬಿಡುತ್ತಾನೆ. ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ನಂತರ ಅವನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಹಿಂದೆ ಹೋಗುತ್ತವೆ. ಏಕೆಂದರೆ ಅವುಗಳಿಗೆ ಅವನ ಸ್ವರ ಗೊತ್ತು. ಅಪರಿಚಿತನನ್ನು ಅವು ಹಿಂಬಾಲಿಸುವುದಿಲ್ಲ; ಅವನಿಂದ ದೂರ ಓಡಿಹೋಗುತ್ತವೆ. ಅಪರಿಚಿತರ ಸ್ವರವನ್ನು ಅವು ಗುರುತಿಸುವುದಿಲ್ಲ." ಯೇಸುಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥಮಾಡಿಕೊಳ್ಳಲಿಲ್ಲ. ಆದುದರಿಂದ ಯೇಸುಸ್ವಾಮಿ, "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು. ನನಗಿಂತ ಮೊದಲು ಬಂದವರೆಲ್ಲರೂ ಕಳ್ಳರು ಹಾಗೂ ಕೊಳ್ಳೆಗಾರರು, ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ಹೌದು, ನಾನೇ ಬಾಗಿಲು ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ. ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು" ಎಂದರು.
No comments:
Post a Comment