27.05.2019 - "ಸತ್ಯಸ್ವರೂಪಿಯಾದ ಪವಿತ್ರಾತ್ಮರು ಬಂದು ನನ್ನ ಪರವಾಗಿ ಸಾಕ್ಷಿ ನೀಡುವರು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:11-15

ನಾವುತ್ರೋವದಲ್ಲಿ ಹಡಗುಹತ್ತಿ ಸಮೊಥ್ರಕ್ಕೆ ನೇರವಾಗಿ ಪ್ರಯಾಣಮಾಡಿದೆವು. ಮಾರನೆಯ ದಿನ ನೆಯಫೋಲನ್ನು ತಲುಪಿ, ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು. ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್ ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು. ನಮ್ಮ ಬೋಧನೆಯನ್ನು ಕೇಳಿ ಆ ಮಹಿಳೆಯರಲ್ಲಿ ಲಿಡಿಯ ಎಂಬುವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು. ಪಚ್ಛೆ ಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು. ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, "ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ," ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.

ಕೀರ್ತನೆ: 149: 1-2, 3-4, 5-6, 9
ಶ್ಲೋಕ: ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು!

ಶುಭಸಂದೇಶ: ಯೊವಾನ್ನ 15:26--16:4

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿ ನೀಡುವರು. ಮೊತ್ತ ಮೊದಲಿನಿಂದಲೂ ನನ್ನ ಸಂಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿ ನೀಡುವವರಾಗಿದ್ದೀರಿ. ನಿಮ್ಮ ವಿಶ್ವಾಸ ಕುಸಿಯದಂತೆ ನೀವು ಎಚ್ಚರಿಕೆ ವಹಿಸಬೇಕೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ. ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು. ಅಂಥ ಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ."

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...