20.06.19 - ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸರು

ಮೊದಲನೇ ವಾಚನ: 2 ಕೊರಿಂಥಿಯರಿಗೆ 11:1--11

ತನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಹೆ ನನಗೂ ಇದೆನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತ ಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯಯನ್ನು ಕಳೆದುಕೊಂಡು ಕೆಟ್ಟುಹೋದಿರಿ ಎಂಬ ಭಯ ನನಗುಂಟುಏಕೆಂದರೆಯಾರಾದರೂ ಬಂದುನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆನೀವು ಸ್ವಾಗತಿಸುತ್ತೀರಿನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿಇದು ನಿಜಕ್ಕೂ ಆಶ್ಚರ್ಯವೇ ಸರಿ.ಮಹಾ ಪ್ರೇಷಿತರುಎನ್ನಿಸಿಕೊಳ್ಳುವ  ಜನರಿಗಿಂತ ನಾನು ಯಾವುದರಲ್ಲೂ ಕಡಿಮೆಯಿಲ್ಲಮಾತಿನಲ್ಲಿ ಚತುರನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲಇದನ್ನು ನಿಮಗೆ ಎಲ್ಲಾ ಸಮಯ ಸಂಧರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆನಿಮಗೆ ದೇವರ ಶುಭಸಂದೇಶವನ್ನು ಉಚಿತವಾಗಿಯೇ ಬೋಧಿಸಿದೆನುನಿಮ್ಮನ್ನು ಮೇಲಕ್ಕೇರಿಸಲು ನನ್ನನ್ನೇ ತಗ್ಗಿಸಿಕೊಂಡೆನುಹೀಗೆ ಮಾಡಿದ್ದು ತಪ್ಪಾಯಿತೇನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆನಿಮಗೋಸ್ಕರ ಇತರ ಸಭೆಗಳಿಂದ ಹಣ  ವಸೂಲಿಮಾಡುತ್ತಿದ್ದೆನಾನು ನಿಮ್ಮೊಂದಿಗಿದ್ದಾಗ ನನಗೆ  ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲಮಕೆದೋನಿಯಾದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ  ನೀಗಿಸಿದರುನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆಇನ್ನೂ ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೆನೆ ನನ್ನ ಹೊಗಳಿಕೆಯನ್ನು ಅಖಾಯ ಪ್ರಾಂತ್ಯದ ಯಾರೂ ಅಡಗಿಸುವಂತಿಲ್ಲವೆಂದು ಕ್ರಿಸ್ತಯೇಸುವಿನ ಮುಂದೆ ಸತ್ಯವಾಗಿ ನುಡಿಯುತ್ತೇನೆನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆನಿಮ್ಮ ಮೇಲೆ ಪ್ರೀತಿ ಇಲ್ಲದ್ದಿರಿಂದಲೋಇಲ್ಲನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲರು.

ಕೀರ್ತನೆ: 111:1--2, 3--4, 7--8

ಶ್ಲೋಕನೀತಿ ಸತ್ಯತೆಯುಳ್ಳವು ಪ್ರಭುವಿನ ಸತ್ಕಾರ್ಯಗಳು.

ಶುಭಸಂದೇಶಮತ್ತಾಯ 6:7--15

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು:ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ  ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು  ಅವರು ಭಾವಿಸುತ್ತಾರೆ. ನೀವು ಅವರಂತೆ ಆಗಬೇಡಿ. ನಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ. ಆದುದರಿಂದ ಹೀಗೆಂದು   ಪ್ರಾರ್ಥನೆ ಮಾಡಿಸ್ವರ್ಗದಲ್ಲಿರುವ  ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ. ನಮ್ಮ ನುದಿನದ ಆಹಾರವನ್ನು ನಮಗಿಂದುಕೊಡಿ. ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ, ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ," ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು. ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸರು."


No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...