23.06.2019 - "ನಮ್ಮಲ್ಲಿರುವುದು ಐದು ರೊಟ್ಟಿ ಮತ್ತು ಎರಡು ಮೀನು ಮಾತ್ರ"

ಮೊದಲನೇ ವಾಚನ: ಆದಿಕಾಂಡ 14:18-20

ಸಾಲೇಮಿನ ಅರಸನೂ  ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು: "ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶ ಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!" ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.

ಕೀರ್ತನೆ: 110:1, 2, 3, 4

ಶ್ಲೋಕ: ಮೆಲ್ಕಿಸದೇಕ್ ಪರಂಪರೆಯ ಯಾಜಕ ನೀ ನಿರುತ

ಎರಡನೇ ವಾಚನ: 1ಕೊರಿಂಥಿಯರಿಗೆ  11:23-26

ಸಹೋದರರೇ, ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ; ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ ರೊಟ್ಟಿಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಅದನ್ನು ಮುರಿದು, "ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ," ಎಂದರು. ಅಂತೆಯೇ ಭೋಜನದ ಕೊನೆಯಲ್ಲಿ ಪಾನ ಪಾತ್ರೆಯನ್ನು ತೆಗೆದುಕೊಂಡು, "ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ನರಣೆಗಾಗಿ ಮಾಡಿರಿ," ಎಂದರು. ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.

ಶುಭಸಂದೇಶ: ಲೂಕ 9:11-17


ತಮ್ಮನ್ನು ಹಿಂಬಾಲಿಸುತ್ತಿದ್ದ ಜನಸಮೂಹವನ್ನು ಯೇಸು ಸ್ವಾಗತಿಸಿ, ದೇವರ ಸಾಮ್ರಾಜ್ಯದ ವಿಷಯವಾಗಿ ಹೇಳಿ, ಅಗತ್ಯವಿದ್ದವರಿಗೆ ಆರೋಗ್ಯದಾನ ಮಾಡಿದರು. ಅಷ್ಟರಲ್ಲಿ ಸಾಂಯಕಾಲವಾಗುತ್ತಾ ಬಂದಿತು. ಹನ್ನೆರಡು ಮಂದಿ ಪ್ರೇಷಿತರು ಯೇಸುವಿನ ಬಳಿಗೆ ಬಂದು, "ಇದು ನಿರ್ಜನ ಪ್ರದೇಶ, ಜನರನ್ನು ಕಳುಹಿಸಿಬಿಡಿ; ಅವರು ಸಮೀಪದ ಊರುಕೇರಿಗಳಿಗೂ ಹೋಗಿ ಊಟವಸತಿಗಳನ್ನು ಒದಗಿಸಿಕೊಳ್ಳಲಿ," ಎಂದರು. ಅದಕ್ಕೆ ಯೇಸು, "ನೀವೇ ಅವರಿಗೆ ಊಟಕ್ಕೆ ಏನಾದರು ಕೊಡಿ," ಎಂದರು. ಅವರು, "ನಮ್ಮಲ್ಲಿರುವುದು ಐದು ರೊಟ್ಟಿ ಮತ್ತು  ಎರಡು ಮೀನು ಮಾತ್ರ; ನಾವು ಹೋಗಿ ಇವರೆಲ್ಲರಿಗೆ ಬೇಕಾಗುವಷ್ಟು ಊಟ ಕೊಂಡುಕೊಂಡು ಬರಬೇಕೇ?" ಎಂದರು. ಏಕೆಂದರೆ ಅಲ್ಲಿ ಗಂಡಸರೇ ಸುಮಾರು ಐದು ಸಾವಿರ ಮಂದಿ  ಇದ್ದರು. ಆಗ ಯೇಸು ಶಿಷ್ಯರಿಗೆ, "ಇವರನ್ನು ಐವತ್ತು ಐವತ್ತರಂತೆ ಪಂಕ್ತಿಯಾಗಿ ಕೂರಿಸಿರಿ," ಎಂದು ಹೇಳಲು, ಅವರು ಹಾಗೆಯೇ ಎಲ್ಲರನ್ನು ಕುಳ್ಳಿರಿಸಿದರು. ಆನಂತರ ಯೇಸು ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ  ತೆಗೆದುಕೊಂಡು ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು.  ತರುವಾಯ ಅವುಗಳನ್ನು ಮುರಿದು ಜನಸಮೂಹಕ್ಕೆ ಬಡಿಸುವಂತೆ ಶಿಷ್ಯರಿಗೆ ಕೊಟ್ಟರು. ಎಲ್ಲರೂ ಹೊಟ್ಟೆತುಂಬ ತಂದು ಸಂತೃಪ್ತರಾದರು. ಇನ್ನೂ ಉಳಿದಿದ್ದ ತುಂಡುಗಳನ್ನು ಒಟ್ಟುಗೂಸಿದಾಗ ಅವು ಹನ್ನರಡು ಬುಟ್ಟಿ ತುಂಬ ಆದ್ದವು

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...