06.09.0219 - "ಹಳೇ ಮದ್ಯ ಕುಡಿದವನಿಗೆ ಹೊಸದು ರುಚಿಸುವುದಿಲ್ಲ"

ಮೊದಲನೇ ವಾಚನ: ಕೊಲೊಸ್ಸೆಯರಿಗೆ1:15-20 



ಸಹೋದರರೇ, ಅದೃಶ್ಯದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ. ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಅಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲ್ಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ. ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ, ತನ್ನ ಸರ್ವ ಸಂಪೂರ್ಣತೆಯನು, ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ ನಡೆದಿದೆ ದೇವನೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.

ಕೀರ್ತನೆ: 100:1-2, 3, 4-5
ಶ್ಲೋಕ: ಹಾಡುತ, ಪಾಡುತ, ಬನ್ನಿ ಪ್ರಭುವಿನ ಸನ್ನಿಧಿಗೆ

ಶುಭಸಂದೇಶ: ಲೂಕ 5:33-39


ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, "ಯೊವಾನ್ನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ," ಎಂದು ಅವರನ್ನು ಮೋದಲಿಸಿದರು. ಅದಕ್ಕೆ ಯೇಸು, "ಮದುವಣಿಗನು ಜೊತೆಯಲ್ಲಿರುವಾಗ ಮದುವೆಯ ಅತಿಥಿಗಳನ್ನು ಉಪವಾಸವಿರಿಸಲಾದೀತೆ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ ಅವರು ಉಪವಾಸಮಾಡುವರು," ಎಂದು ಉತ್ತರಕೊಟ್ಟರು. ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: "ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ, ಹಾಗೆ ಮಾಡಿದ್ದೇ ಆದರೆ ಹೊಸದೂ ಹರಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ, ಅಂತೆಯೇ, ಹಳೆಯ ಬುದ್ದಲಿಗಳೂ ಹಾಳಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು. ಹಳೇ ಮದ್ಯ ಕುಡಿದವನಿಗೆ ಹೊಸದು ರುಚಿಸುವುದಿಲ್ಲ. ಅವನು ಹಳೆಯದೇ ಶ್ರೇಷ್ಠವೆನ್ನುತ್ತಾನೆ," ಎಂದರು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...