ಮೊದಲನೇ ವಾಚನ: 1 ತಿಮೊಥೇಯನಿಗೆ 1:1-2, 12-14
ಕ್ರೈಸ್ತ ವಿಶ್ವಾಸದಲ್ಲಿ ಸತ್ ಪುತ್ರನಾದ ತಿಮೊಥೇಯನಿಗೆ - ಪೌಲನು ಬರೆಯುವ ಪತ್ರ. ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತ ಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತ ಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತ ಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ! ಶುಭ ಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಹಿಂದೆ ನಾನು ಅವರನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆ ತೋರಿದರು. ಕ್ರಿಸ್ತ ಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.
ಕೀರ್ತನೆ: 16:1-2, 5, 6-7, 8-9
ಶ್ಲೋಕ: ನನ್ನ ಸ್ವತ್ತೂ ಸ್ವಾಸ್ಥ್ಯವೂ ನೀನೇ ಪ್ರಭು
ಶುಭಸಂದೇಶ: ಲೂಕ 6:39-42
ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: "ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೇ? ಗುರುವಿಗಿಂತ ಶಿಷ್ಯನು ಶ್ರೇಷ್ಟನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು. ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, "ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ," ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದು ಹಾಕು, ಆನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು,"
No comments:
Post a Comment