ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

12.11.2019 - "ನಾವು ಕೇವಲ ಆಳುಗಳು ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ"

ಮೊದಲನೇ ವಾಚನ: ಜ್ಞಾನಗ್ರಂಥ 2:23-3:9

ದೇವರು ಮಾನವನನ್ನು ಸೃಷ್ಟಿಸಿದ್ದು ಅಮರತ್ವಕ್ಕಾಗಿ ಅವನನ್ನು ರಚಿಸಿದ್ದು ತಮ್ಮ ಸ್ವರೂಪಕ್ಕನುಗುಣವಾಗಿ. ಸೈತಾನನ ಮತ್ಸರದಿಂದಲೇ ಮರಣ ಪ್ರವೇಶಿಸಿತು ಲೋಕವನ್ನು ಅವನ ಪಕ್ಷಕೆ ಸೇರಿದವರೆಲ್ಲರು ಅನುಭವಿಸುವರು ಅದನು. ಸಜ್ಜನರ ಆತ್ಮಗಳಿರುವುವು ದೇವರ ಕೈಯೊಳು, ಅವರನ್ನು ಮುಟ್ಟದು ಮಹಾಯಾತನೆ ಯಾವುದು. ಮಂದಮತಿಯ ಕಣ್ಣಿಗೆ ಸತ್ತವರಂತೆ ಅವರು ಕಾಣಿಸಿಕೊಂಡರು ಅವರು ಗತಿಸಿ ಹೋದುದು ಅವನಿಂದ ತೊಲಗಿದ ಕೆಡಂತಿತ್ತು ಸಜ್ಜನಿರಿಗಾದ ಸಾವು ಮಹಾ ವಿಪತ್ತು ಎಂದವನಿಗೆ ತೋರಿತು ಅವರಾದರೋ ಶಾಂತಿಸಮಾಧಾನದಿಂದ ನೆಮ್ಮದಿಯಾಗಿರುವರು. ಮಾನವನ ದೃಷ್ಟಿಯಲ್ಲಿ ಅವರು ಕಂಡುಬಂದರು ಶಿಕ್ಷಿಸಲ್ಪಟ್ಟವರಂತೆ ಅವರಲ್ಲಾದರೋ ತುಂಬಿತ್ತು ಅಮರತ್ವದ ನಂಬಿಕೆ ನಿರೀಕ್ಷೆ. ಅವರು ಅನುಭವಿಸಿದ ಶಿಕ್ಷೆ ಅಲ್ಪ, ಹೊಂದುವ ಸೌಭಾಗ್ಯ ಅಪಾರ ಶೋಧಿಸಿದ ತರುವಾಯ ದೇವರಿಗೆ ಅವರು ಕಂಡುಬಂದರು ಯೋಗ್ಯಾರ್ಹ. ಶೋಧಿಸಿದರವರನು ಪುಟಕ್ಕಿಟ್ಟ ಚಿನ್ನದಂತೆ. ಅಂಗೀಕೃತರಾದರು ಪೂರ್ಣ ದಹನಬಲಿಯಂತೆ. ಪ್ರಕಾಶಿಸುವರು ದೇವರನು ಸಂದರ್ಶಿಸುವ ಕಾಲದಲಿ ಹೊಳೆಯುವರು ಒಣಹುಲ್ಲಿನೊಳಗಿನ ಕಿಡಿಗಳೋಪಾದಿ, ನ್ನಾಯತೀರಿಸುವರವರು ಜನಾಂಗಗಳಿಗೆ, ದೊರೆತನ ಮಾಡುವರವರು ಜನಗಳ ಮೇಲೆ ದೇವರ ಪ್ರಜೆಗಳಾಗಿರುವರು ಸದಾಕಾಲಕೆ. ಸತ್ಯವನು ಅರಿವರು ದೇವರಲಿ ಭರವಸೆಯಿಡುವರು.

ಕೀರ್ತನೆ: 34:2-3, 16-17, 18-19

ಶ್ಲೋಕ: ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು

ಶುಭಸಂದೇಶ: ಲೂಕ  17:7-10


ಯೇಸುಸ್ವಾಮಿ ತಮ್ಮ ಶಿಷ್ಯರನ್ನುದ್ದೇಶಿಸಿ: "ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, "ಬಾ, ನನ್ನೊಂದಿಗೆ ಊಟಮಾಡು," ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ. ಅದಕ್ಕೆ ಬದಲಾಗಿ "ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರ ಮಾಡು. ಆನಂತರ ನೀನು ಊಟ ಮಾಡುವೆಯಂತೆ," ಎಂದು ಹೇಳುತ್ತಾರಲ್ಲವೇ ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ. ಹಾಗೆಯೇ ನೀವು ಸಹ ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, "ನಾವು ಕೇವಲ ಆಳುಗಳು ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ," ಎಂದುಕೊಳ್ಳಿರಿ," ಎಂದರು.

No comments:

Post a Comment