ಮೊದಲನೇ ವಾಚನ: ಆದಿಕಾಂಡ 2:7-9; 3:1-7
ಕೀರ್ತನೆ 51:3-4, 5-6, 12-13, 17
ಶ್ಲೋಕ: ಕೃಪಾಳು ದೇವಾ, ಕರುಣಿಸೆಮ್ಮನು ಏಕೆಂದರೆ ನಿಮ್ಮ ವಿರುದ್ಧ ಪಾಪವನ್ನು ಮಾಡಿದ್ದೇವೆ
ಎರಡನೇ ವಾಚನ: ರೋಮನರಿಗೆ 5:12-19
ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪ ಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು. ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ. ಆದರೂ, ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣವು ದಬ್ಬಾಳಿಕೆ ನಡೆಸುತ್ತಿತ್ತು. ದೇವರ ಆಜ್ಞಾವಿಧಿಗಳನ್ನು ವಿೂರಿ ಆದಾಮನು ಮಾಡಿದ ಪಾಪಕ್ಕೆ ಸಮನಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ, ಮರಣದ ಆಳ್ವಿಕೆ ನಡೆಯುತ್ತಿತ್ತು. ಆದಾಮನು ಮುಂಬರಲಿದ್ದ ಮಹಾತ್ಮನ ಮುನ್ಸೂಚನೆಯಾಗಿದ್ದಾನೆ. ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥ ವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ. ದೇವರ ಉಚಿತಾರ್ಥ ವರಕ್ಕೂ ಒಬ್ಬ ಮನುಷ್ಯನ ಪಾಪದ ಪರಿಣಾಮಕ್ಕೂ ಎಷ್ಟೋ ವ್ಯತ್ಯಾಸವಿದೆ. ಆ ಒಂದು ಪಾಪದ ಪರಿಣಾಮವಾಗಿ ಮನುಷ್ಯನು ಅಪರಾಧಿಯೆಂದು ನಿರ್ಣಯಿಸಲ್ಪಟ್ಟನು. ಆದರೆ ಅನೇಕರು ಅಪರಾಧಿಗಳಾದ ಮೇಲೂ ಕೊಡಲಾಗುವ ಉಚಿತಾರ್ಥ ವರವು ದೇವರೊಡನೆ ಸತ್ಸಂಬಂಧವನ್ನು ಉಂಟುಮಾಡುತ್ತದೆ. ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ. ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ. ಹೇಗೆ ಒಬ್ಬ ಮನುಷ್ಯನ ಅವಿಧೇಯತೆಯಿಂದ ಎಲ್ಲರೂ ಪಾಪಿಗಳಾದರೋ, ಹಾಗೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು ಹೊಂದುತ್ತಾರೆ.
ಶುಭಸಂದೇಶ: ಮತ್ತಾಯ 4:1-11
ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು. ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು. ಆಗ ಶೋಧಕನು ಬಂದು, "ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು," ಎಂದನು. ಅದಕ್ಕೆ ಯೇಸುಸ್ವಾಮಿ, "ಪವಿತ್ರ ಗ್ರಂಥದಲ್ಲಿ ಹೇಳಿರುವ ಪ್ರಕಾರ, "ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ", ಎಂದರು. ಬಳಿಕ ಪಿಶಾಚಿ ಅವರನ್ನು ಪವಿತ್ರ ನಗರಕ್ಕೆ ಅಂದರೆ ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುದಿಯ ಮೇಲೆ ನಿಲ್ಲಿಸಿ, "ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕಳಕ್ಕೆ ಧುಮುಕು. ಏಕೆಂದರೆ, ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆ ಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಗೊಳ್ಳುವರು,’ ಎಂದಿತು. ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು’, ಎಂದೂ ಸಹ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು. ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು. "ನೀನು ನನಗೆ ಅಡ್ಡಬಿದ್ದು ಆರಾಧಿಸುವೆಯಾದರೆ ಇವೆಲ್ಲವನ್ನು ನಿನಗೆ ಕೊಡಬಲ್ಲೆ," ಎಂದಿತು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ಸೈತಾನನೇ, ತೊಲಗು, ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ," ಎಂದರು. ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.
ಮನಸ್ಸಿಗೊಂದಿಷ್ಟು : ಶೋಧನೆಗಳು ನಮ್ಮ ಪಾಪಗಳಿಗೆ ದಾರಿಯಲ್ಲ, ಬದಲಾಗಿ ಪಾಪಗಳನ್ನು ಜಯಿಸುವ ಸಾಧನವಾಗಬಲ್ಲದು. ನಮ್ಮನ್ನು ದುರ್ಬಲಗಳಿಸುವುದಕ್ಕಿಂತ ನಮ್ಮನ್ನು ಇನ್ನಷ್ಟು ಶಕ್ತರನ್ನಾಗಿಸಬಲ್ಲದು. ದೇವರ ಚಿತ್ತ ಕಾರ್ಯಗಳನ್ನು ನೆರವೇರಿಸುವವರು ಈ ಶೋಧನೆಗಳನ್ನು ವಿಜಯದ ಮೆಟ್ಟಿಲುಗಳನ್ನಾಗಿ ಬಳಸಿಕೊಂಡು ದೇವರತ್ತ ಏರಬಲ್ಲರು ಎಂಬ ಸಂದೇಶ ಇಂದಿನ ಶುಭಸಂದೇಶದಲ್ಲಿದೆ
ಪ್ರಶ್ನೆ : ನಾವು ಎದುರಿಸುತ್ತಿರುವ ಶೋಧನೆಗಳನ್ನು ನಮ್ಮನ್ನು ದೇವರತ್ತ ಏರಿಸುತ್ತಿದೆಯೇ ಅಥವಾ ವಿಮುಖವಾಗಿಸುತ್ತಿದೆಯೇ?
ಪ್ರಭುವೇ,
ನಮಗೆ ಬಂದೊದಗುವ ಶೋಧನೆ
ತರುವ ಯಾವುದೇ ವೇದನೆ
ಮೀರಿ ಏರುವ ಸಾಧನೆ
ನಮ್ಮದಾಗಲು ಬೇಕಿದೆ
ನಿಮ್ಮ ಭರವಸೆಯ ಅನುಮೋದನೆ
-ಚಿತ್ತ
ಮನಸ್ಸಿಗೊಂದಿಷ್ಟು : ಶೋಧನೆಗಳು ನಮ್ಮ ಪಾಪಗಳಿಗೆ ದಾರಿಯಲ್ಲ, ಬದಲಾಗಿ ಪಾಪಗಳನ್ನು ಜಯಿಸುವ ಸಾಧನವಾಗಬಲ್ಲದು. ನಮ್ಮನ್ನು ದುರ್ಬಲಗಳಿಸುವುದಕ್ಕಿಂತ ನಮ್ಮನ್ನು ಇನ್ನಷ್ಟು ಶಕ್ತರನ್ನಾಗಿಸಬಲ್ಲದು. ದೇವರ ಚಿತ್ತ ಕಾರ್ಯಗಳನ್ನು ನೆರವೇರಿಸುವವರು ಈ ಶೋಧನೆಗಳನ್ನು ವಿಜಯದ ಮೆಟ್ಟಿಲುಗಳನ್ನಾಗಿ ಬಳಸಿಕೊಂಡು ದೇವರತ್ತ ಏರಬಲ್ಲರು ಎಂಬ ಸಂದೇಶ ಇಂದಿನ ಶುಭಸಂದೇಶದಲ್ಲಿದೆ
ಪ್ರಶ್ನೆ : ನಾವು ಎದುರಿಸುತ್ತಿರುವ ಶೋಧನೆಗಳನ್ನು ನಮ್ಮನ್ನು ದೇವರತ್ತ ಏರಿಸುತ್ತಿದೆಯೇ ಅಥವಾ ವಿಮುಖವಾಗಿಸುತ್ತಿದೆಯೇ?
ಪ್ರಭುವೇ,
ನಮಗೆ ಬಂದೊದಗುವ ಶೋಧನೆ
ತರುವ ಯಾವುದೇ ವೇದನೆ
ಮೀರಿ ಏರುವ ಸಾಧನೆ
ನಮ್ಮದಾಗಲು ಬೇಕಿದೆ
ನಿಮ್ಮ ಭರವಸೆಯ ಅನುಮೋದನೆ
-ಚಿತ್ತ
No comments:
Post a Comment