ಮೊದಲನೇ ವಾಚನ ವಿಮೋಚನಕಾಂಡ 34:4-6, 8-9
ಮೋಶೆ ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೊಂಡು, ಸರ್ವೇಶ್ವರನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟವನ್ನು ಹತ್ತಿದನು. ಆಗ ಸರ್ವೇಶ್ವರ ಸ್ವಾಮಿ ಮೇಘಾವೃತರಾಗಿ ಇಳಿದುಬಂದು ಅಲ್ಲಿ ಅವನ ಹತ್ತಿರ ನಿಂತು, ‘ಸರ್ವೇಶ್ವರ’ ಎಂಬ ತಮ್ಮ ನಾಮವನ್ನು ಪ್ರಕಟಿಸಿದರು. ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು, ಕೂಡಲೇ ಮೋಶೆ ನೆಲದಮೇಲೆ ಅಡ್ಡಬಿದ್ದು ನಮಸ್ಕರಿಸಿ, ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.
ಕೀರ್ತನೆ: 1:29-34
ಶ್ಲೋಕ: ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು
ಎರಡನೇ ವಾಚನ: 2 ಕೊರಿಂಥಿಯರಿಗೆ 13:11-13
ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನು ಒಬ್ಬರು ವಂದಿಸಿರಿ. ದೇವಜನರೆಲ್ಲರೂ ನಿಮಗೆ ಶುಭಾಶಯಗಳನ್ನು ಕೋರಿದ್ದಾರೆ. ನಮ್ಮ ಪ್ರಭು ಯೇಸುಕ್ರಿಸ್ತರ ವರಪ್ರಸಾದವೂ ದೇವರ ಪ್ರೀತಿಯೂ ಪವಿತ್ರಾತ್ಮರ ಅನ್ಯೋನ್ಯತೆಯೂ ನಿಮ್ಮೆಲ್ಲರೊಡನೆ ಇರಲಿ!
ಶುಭಸಂದೇಶ: ಯೊವಾನ್ನ 3:16-18
No comments:
Post a Comment