ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 49:1-6
ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ. ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ. ಆತನೆನಗೆ ಇಂತೆಂದ : “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.” ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ. ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ. ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವ ಜನಾಂಗಗಳಿಗೆ.
ಕೀರ್ತನೆ: 139:1-3, 13-15
ಶ್ಲೋಕ: ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ
ಎರಡನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13:22-26
ಪೌಲನು ಉಪದೇಶ ಮಾಡುತ್ತಾ ಹೀಗೆಂದನು: "ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು. ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ. ಇವರ ಆಗಮನಕ್ಕೆ ಸಿದ್ಧತೆಯಾಗಿ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದರು. ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದ್ದಂತೆ ಜನರಿಗೆ, ‘ನಾನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು. “ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ."
ಶುಭಸಂದೇಶ: ಲೂಕ 1:57-66, 80
No comments:
Post a Comment