ಮೊದಲನೇ ವಾಚನ: 2 ಅರಸುಗಳು 4:8-11, 14-16

ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಶ್ರೀಮಂತ ಮಹಿಳೆ ಇದ್ದಳು. ಆಕೆ ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು. ಆ ಮಹಿಳೆ ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ವ್ಯಕ್ತಿ ಒಬ್ಬ ಸಂತನು ಹಾಗು ದೈವಪುರುಷನು ಆಗಿರುತ್ತಾನೆಂದು ನನಗೆ ಗೊತ್ತಾಯಿತು. ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸೋಣ. ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ; ಅವನು ಇಲ್ಲಿಗೆ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ,” ಎಂದು ಹೇಳಿದಳು. ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು. ಆಮೇಲೆ ಎಲೀಷನು ಗೇಹಜಿಯನ್ನು, “ನಾವು ಆಕೆಗೆ ಯಾವ ಉಪಕಾರ ಮಾಡಬಹುದು?” ಎಂದು ಕೇಳಿದನು. ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ,” ಎಂದನು. ಇದನ್ನು ಕೇಳಿ ಎಲೀಷನು ಆ ಮಹಿಳೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಅವನು ಹೋಗಿ ಕರೆದನು. ಆಕೆ ಬಂದು ಬಾಗಿಲಿನ ಹತ್ತಿರ ನಿಂತಳು. ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು.
ಕೀರ್ತನೆ: 89:2-3, 16-17, 18-19
ಶ್ಲೋಕ: ಪ್ರಭೂ, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು
ಎರಡನೇ ವಾಚನ: ರೋಮನರಿಗೆ 6:3-4, 8-11
ಕ್ರಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ? ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ. ಕ್ರಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ. ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ. ಏಕೆಂದರೆ, ಅವರು ಪಾಪದ ಪಾಲಿಗೆ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ಸತ್ತವರು. ಅವರು ಈಗ ಜೀವಿಸುವುದು ದೇವರಿಗಾಗಿಯೇ. ಅಂತೆಯೇ ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ದೇವರಿಗಾಗಿ ಮಾತ್ರ ಯೇಸುಕ್ರಿಸ್ತರಲ್ಲಿ ಜೀವಿಸುವವರೆಂದೂ ಪರಿಗಣಿಸಿರಿ.
ಶುಭಸಂದೇಶ: ಮತ್ತಾಯ 10:37-42
No comments:
Post a Comment