02.07.2020 - "ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ" ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?"

ಮೊದಲನೇ ವಾಚನ: ಆಮೋಸ 07:10-17

ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆಂದು ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು. ಏಕೆಂದರೆ, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಯೇಲ್ ಸ್ವಂತ ನಾಡಿನಿಂದ ಪರದೇಶಕ್ಕೆ ಒಯ್ಯಲ್ಪಡುವುದು ಖಂಡಿತ ಎಂದು ಅವನು ನುಡಿದಿದ್ದಾನೆ.” ಆ ಬಳಿಕ ಅಮಚ್ಯನು ಆಮೋಸನಿಗೆ, “ಕಣಿ ಹೇಳುವವನೇ, ತೊಲಗು, ಜುದೇಯ ನಾಡಿಗೆ ಓಡಿ ಹೋಗು; ಅಲ್ಲಿ ಪ್ರವಾದನೆ ಮಾಡಿ ಹೊಟ್ಟೆ ಹೊರೆದುಕೊ. ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು. ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು. ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆ ಮಾಡು’ ಎಂದು ಹೇಳಿ ಕಳುಹಿಸಿದರು. “ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ? ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರ ಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿ ಹೋಗುವರು’,” ಎಂದು ಹೇಳಿದನು.

ಕೀರ್ತನೆ: 19:8, 9, 10, 11

ಶ್ಲೋಕ: ಪ್ರಭುವಿನ ತೀರ್ಪು ಯಥಾರ್ಥ, ನ್ಯಾಯಯುತ

ಶುಭಸಂದೇಶ: ಮತ್ತಾಯ 9:1-8


ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು. ಆಗ ಜನರು ಒಬ್ಬ ಪಾಶ್ರ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾಶ್ರ್ವವಾಯು ರೋಗಿಗೆ, "ಮಗು ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, "ಇವನು ದೇವದೂಷಣೆ ಮಾಡುತ್ತಿದ್ದಾನೆ," ಎಂದುಕೊಂಡರು. ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, "ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ? "ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ" ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ? ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು," ಎಂದು ಹೇಳಿ, ಆ ಪಾಶ್ರ್ವವಾಯು ರೋಗಿಯನ್ನು ನೋಡಿ, "ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು" ಎಂದರು. ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು. ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು. 

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...