18.9.20 - ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರ ಮಾಡಿದರು.

 ಮೊದಲನೇ ವಾಚನ: 1 ಕೊರಿಂಥಿಯರಿಗೆ 15:12-20


ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ? ಸತ್ತವರಿಗೆ ಪುನರುತ್ಥಾನ ಇಲ್ಲವೆಂಬುದು ನಿಜವಾದರೆ ಕ್ರಿಸ್ತಯೇಸು ಪುನರುತ್ಥಾನ ಹೊಂದಲಿಲ್ಲ ಎಂದ ಹಾಗಾಯಿತು.  ಕ್ರಿಸ್ತಯೇಸು ಪುನರುತ್ಥಾನರಾಗಲಿಲ್ಲ ಎಂದರೆ ನಮ್ಮ ಬೋಧನೆ ಬರಿದು; ನಿಮ್ಮ ವಿಶ್ವಾಸವೂ ಬರಿದು.  ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂಬುದು ನಿಜವಾದರೆ ದೇವರು ಕ್ರಿಸ್ತಯೇಸುವನ್ನು ಪುನರುತ್ಥಾನಗೊಳಿಸಿಲ್ಲ ಎಂದಂತಾಯಿತು. ದೇವರು ಕ್ರಿಸ್ತಯೇಸುವನ್ನು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆ ಎಂದು ಸಾಕ್ಷಿ ಹೇಳಿದ ನಾವು ಆಗ ದೇವರ ಬಗ್ಗೆಯೇ ಸುಳ್ಳುಸಾಕ್ಷಿ ಹೇಳಿದಂತಾಯಿತು. ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದರೆ ಕ್ರಿಸ್ತಯೇಸುವು ಪುನರುತ್ಥಾನ ಹೊಂದಲಿಲ್ಲ ಎಂದಂತಾಯಿತು.  ಕ್ರಿಸ್ತಯೇಸುವೇ ಪುನರುತ್ಥಾನ ಹೊಂದಿಲ್ಲ ಎಂದಮೇಲೆ ನಿಮ್ಮ ವಿಶ್ವಾಸವೇ ನಿರರ್ಥಕ; ಮತ್ತು ನೀವಿನ್ನೂ ನಿಮ್ಮ ಪಾಪಗಳಲ್ಲಿಯೇ ಮುಳುಗಿದ್ದೀರಿ; ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು. ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ. ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ. 

ಕೀರ್ತನೆ: 17:1, 6-7, 8, 15

ಶ್ಲೋಕ: ಪ್ರಭೂ, ನಿನ್ನ ಮಖದರ್ಶನದಿಂದ ನಾನು ಎಚ್ಚತ್ತು ತೃಪ್ತನಾಗುವೇನು. 

ಶುಭಸಂದೇಶ: ಲೂಕ 8:1-3


ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.  ದೆವ್ವಗಳ ಕಾಟದಿಂದಲೂ ರೋಗರುಜಿನಗಳಿಂದಲೂ ಬಿಡುಗಡೆ ಹೊಂದಿದ್ದ ಕೆಲವು ಮಹಿಳೆಯರು ಅವರ ಜೊತೆಯಲ್ಲಿದ್ದರು. ಅವರಾರೆಂದರೆ: ಏಳು ದೆವ್ವಗಳಿಂದ ವಿಮುಕ್ತಳಾಗಿದ್ದ ಮಗ್ದಲದ ಮರಿಯಳು,  ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...