23.09.20 - "ನಿಮ್ಮನ್ನು ಸ್ವಾಗತಿಸದೆ ಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿ ಬಿಡಿ"

ಮೊದಲನೇ ವಾಚನ: ಜ್ಞಾನೋಕ್ತಿಗಳು 30:5-9

ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ; ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಇಲ್ಲವಾದರೆ ಆತ ನಿನ್ನನ್ನು ಖಂಡಿಸಿಯಾನು, ನೀನು ಸುಳ್ಳುಗಾರನಾಗಿ ತೋರಿ ಬಂದೀಯೆ! ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ: ನಿರಾಕರಿಸಬೇಡ, ನಾನು ಸಾಯುವುದರೊಳಗೆ ಅವುಗಳನ್ನು ಅನುಗ್ರಹಿಸು: ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು. ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನ ಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.

ಕೀರ್ತನೆ: 119:29, 72, 89, 101, 104, 163

ಶ್ಲೋಕ: ನಿನ್ನ ವಾಕ್ಯ ನನ್ನ ಕಾಲಿನ ನಡೆಗೆ ಕೈದೀಪ 

ಶುಭಸಂದೇಶ: ಲೂಕ 9:1-6 

ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು. ಅನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೂ ಅವರನ್ನು ಕಳುಹಿಸಿದರು. ಕಳುಹಿಸುವಾಗ ಅವರಿಗೆ ಇಂತೆಂದರು, “ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ, ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಲೂಡ. ಎರಡು ಅಂಗಿಗಳೂ ಬೇಕಾಗಿಲ್ಲ. ಯಾವ ಮನೆಯವರು ನಿಮ್ಮನ್ನು ಬರಮಾಡಿಕೊಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ. ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆ ಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು. ಪ್ರೇಷಿತರು ಹೊರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...