ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

3.12.20 - "ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ದಿವಂತನನ್ನು ಹೋಲುತ್ತಾನೆ"

ಮೊದಲನೇ ವಾಚನ: ಯೆಶಾಯ 26: 1-6 


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು: ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ. ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು. ನಿನ್ನ ನೆಚ್ಚಿದವರಿಗೆ, ಸ್ಥಿರ ಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ. ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ. ತಗ್ಗಿಸುವನಾತ ಎತ್ತರದಲಿ ವಾಸಿಸುವವರನು, ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು. ಈಡಾಗುವುದದು ಕಾಲತುಳಿತಕೆ ದೀನದಲಿತರ ಪಾದತುಳಿತಕೆ.

ಕೀರ್ತನೆ: 118: 1 8-9, 19-21, 25-27a 

ಶ್ಲೋಕ: ಪ್ರಭುವಿನ ನಾಮದಲ್ಲಿ ಬರುವವನಿಗೆ ಜಯಮಂಗಳ 

ಶುಭಸಂದೇಶ: ಮತ್ತಾಯ 7: 21, 24-27 

ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನನ್ನನ್ನು "ಸ್ವಾವಿೂ, ಸ್ವಾವಿೂ," ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. "ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ದಿವಂತನನ್ನು ಹೋಲುತ್ತಾನೆ. ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ದಿಹೀನನನ್ನು ಹೋಲುತ್ತಾನೆ. ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!".

No comments:

Post a Comment