ಮೊದಲನೆಯ ವಾಚನ - ಹಿಬ್ರಿ 13: 15-17, 20-21
ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ. ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.
ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು
ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು. ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.
ಪ್ರಭುವಿನ ವಾಕ್ಯಕೀರ್ತನೆ - 23: 1-4, 5, 6
ಪ್ರಭು ಕುರಿಗಾಹಿಯಾಗಿರಲು ನನಗೆ I
ಕುಂದುಕೊರತೆಗಳೆಲ್ಲಿಯವು ಎನಗೆ? II
ಹಸಿರುಗಾವಲುಗಳಲೆನ್ನ ತಂಗಿಸುವನು I
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II
ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I
ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I
ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II
ಶುಭಸಂದೇಶ - ಮಾರ್ಕ 6: 30-34
ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು. ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ. ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನ ಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು. ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು. ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I
ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II
ಶುಭಸಂದೇಶ - ಮಾರ್ಕ 6: 30-34
ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು. ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ. ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನ ಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು. ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು. ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.
ಪ್ರಭುವಿನ ಶುಭಸಂದೇಶ
No comments:
Post a Comment