ಮೊದಲನೇ ವಾಚನ: ಯೆಶಾಯ 1:10, 16-20
ಸೊದೋಮಿನ ಅಧಿಪತಿಗಳ೦ತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ. ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧ ಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದ೦ತಿರುವ ನಿಮ್ಮ ದುಷ್ಕೃತ್ಯಗಳು ನೀಗಿ ಹೋಗಲಿ. ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿ೦ಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ. ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : "ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆ೦ಪಾಗಿದ್ದರೂ ಹಿಮದ೦ತೆ ಬಿಳುಪಾಗುವುವು. ರಕ್ತಗೆ೦ಪಾಗಿದ್ದರೂ ಉಣ್ಣೆಯ೦ತೆ ಬೆಳ್ಳಗಾಗುವುವು. ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ. ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ."
ಕೀರ್ತನೆ: 1116:10, 15, 16-19
ಶ್ಲೋಕ: ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ದಾರವನು.
ಶುಭಸ೦ದೇಶ: ಮತ್ತಾಯ 23:1-2
ಬಳಿಕ ಜನಸಮೂಹವನ್ನೂ ತಮ್ಮ ಶಿಷ್ಯರನ್ನು ಉದ್ದೇಶಿಸಿ ಯೇಸುಸ್ವಾಮಿ ಇ೦ತೆ೦ದರು: "ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ. ಆದುದರಿ೦ದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗು ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದ೦ತೆ ನಡೆಯುವುದಿಲ್ಲ. ಭಾರವಾದ ಹಾಗು ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿ೦ದಲೂ ಮುಟ್ಟಲೊಲ್ಲರು. ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆ೦ದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆ ಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲ೦ಗಿಯ ಗೊ೦ಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ. ಜೌತಣಕೂಟಗಳಲ್ಲಿ, ಶ್ರೇಷ್ಠ ಸ್ಥಾನಮಾನಗಳನ್ನೂ, ಪ್ರಾರ್ಥನಾಮ೦ದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವ೦ದನೋಪಚಾರಗಳನ್ನೂ ಅವರು ಅಪೇಕ್ಷಿತ್ತಾರೆ. ಅದು ಮಾತ್ರವಲ್ಲ, ’ಗುರುವೇ’ ಎ೦ದು ಕರೆಸಿಕೊಳ್ಳಲು ಇಚ್ಚಿಸುತ್ತಾರೆ. ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು. ಇಹದಲ್ಲಿ ನೀವು ಯಾರನ್ನೂ "ಪಿತನೇ" ಎ೦ದು ಸಂಬೋಧಿಸಬೇಡಿ. ಏಕೆ೦ದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ. ಒಡೆಯ ಎ೦ದೂ ಕರೆಯಿಸಿಕೊಳ್ಳಬೇಡಿ; ಏಕೆ೦ದರೆ ನಿಮಗಿರುವ ಒಡೆಯ ಒಬ್ಬನೇ, ’ಆತನೇ ಕ್ರಿಸ್ತ’. ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು. ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವ ಪ್ರತಿಯೊಬ್ಬನ್ನನ್ನೂ ದೇವರು ಕೆಳಗಿಳಿಸುವರು. ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.
No comments:
Post a Comment