06.03.21 - ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು

ಮೊದಲನೆಯ ವಾಚನ : ಮೀಕ 7:14-15, 18-20


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ. ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ. ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ. ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ. ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.

ಕೀರ್ತನೆ: 103:1-4, 9-12, 21

ಶ್ಲೋಕ : ಪ್ರಭು ದಯಾಳು, ಕೃಪಾಪೂರ್ಣನು I ಸಹನಶೀಲನು, ಪ್ರೀತಿಮಯನು II

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ನನ್ನ ಅಂತರಂಗವೇ, ಭಜಿಸು ಆತನನು I
ನೆನೆ ಆತನ ಪರಮಪಾವನ ನಾಮವನು II

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I

ಮರೆಯದಿರು ಆತನ ಉಪಕಾರಗಳೊಂದನು II
ಮನ್ನಿಸುವನಾತ ನನ್ನ ದೋಷಗಳನು I
ವಾಸಿಮಾಡುವನು ನನ್ನ ರೋಗಗಳನು II

ಉಳಿಸುವನು ಪಾತಾಳದ ಕೂಪದಿಂದ ನನ್ನನು I
ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II
ಆತನು ಸದಾ ತಪ್ಪು ಹುಡುಕುವವನಲ್ಲ I
ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ I|

ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ I
ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ II
ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I
ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II

ಪಡುವಣದಿಂದ ಮೂಡಣವೆಷ್ಟೋ ದೂರ I
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II

ಶುಭಸಂದೇಶ : ಲೂಕ  15:1-3, 11-32


ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರುಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು ಸಂದರ್ಭದಲ್ಲಿ ಯೇಸು ಸಾಮತಿಯನ್ನು ಹೇಳಿದರು. ಯೇಸುಸ್ವಾಮಿ ಮುಂದುವರಿಸುತ್ತಾ ಸಾಮತಿಯನ್ನು ಹೇಳಿದರು: “ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರುಅವರಲ್ಲಿ ಕಿರಿಯವನು, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಟ್ಟುಬಿಡು,’ ಎಂದು ಕೇಳಿದ. ತಂದೆ ಅವರಿಬ್ಬರಿಗೂ ಆಸ್ತಿಯನ್ನು ಹಂಚಿಕೊಟ್ಟಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟಹೀಗೆ ಅವನು ಎಲ್ಲವನ್ನು ಹಾಳುಮಾಡಿಕೊಂಡಮೇಲೆ ದೇಶದಾದ್ಯಂತ ಘೋರವಾದ ಕ್ಷಾಮ ತಲೆದೋರಿತುನಿರ್ಗತಿಕನಾದ ಅವನು ಹೋಗಿ, ಆದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿದ. ಆತ ಇವನನ್ನು ಹಂದಿ ಮೇಯಿಸಲು ತನ್ನ ರೊಪ್ಪಗಳಿಗೆ ಕಳುಹಿಸಿದಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆನಾನು ಇದೀಗಲೇ ಹೊರಟು, ತಂದೆಯ ಬಳಿಗೆ ಹೋಗಿ, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನು ಎನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲನನ್ನನ್ನು ನಿಮ್ಮ ಮನೆಯ ಕೂಲಿಯಾಳುಗಳಲ್ಲಿ ಒಬ್ಬನನ್ನಾಗಿ ಇಟ್ಟುಕೊಳ್ಳಿ ಎಂದು ಬೇಡಿಕೊಳ್ಳುತ್ತೇನೆ,’ ಎಂದುಕೊಂಡಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ.

ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟಆದರೂ ಮಗನು, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪ ಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲಎಂದತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿಕೊಬ್ಬಿಸಿದ ಪ್ರಾಣಿಯನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಆನಂದಿಸೋಣಏಕೆಂದರೆ, ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.

ಇತ್ತ ಹೊಲಕ್ಕೆ ಹೋಗಿದ್ದ ಹಿರಿಯ ಮಗ ಹಿಂದಿರುಗಿ ಮನೆಯನ್ನು ಸಮೀಪಿಸುವಾಗ ಗಾನ, ನರ್ತನಗಳ ಶಬ್ದವು ಅವನ ಕಿವಿಗೆ ಬಿತ್ತು.  ‘ಮನೆಯಲ್ಲೇನು ವಿಶೇಷ?’ ಎಂದು ಒಬ್ಬ ಆಳನ್ನು ಕರೆದು ವಿಚಾರಿಸಿದ. ನಿಮ್ಮ ತಮ್ಮ ಬಂದಿದ್ದಾರೆ; ಅವರು ಮರಳಿ ಸುರಕ್ಷಿತವಾಗಿ ಬಂದುದಕ್ಕಾಗಿ ಕೊಬ್ಬಿಸಿದ ಪ್ರಾಣಿಯನ್ನು ನಿಮ್ಮ ತಂದೆ ಕೊಯ್ಯಿಸಿದ್ದಾರೆ,’ ಎಂದು ಆಳು ತಿಳಿಸಿದ.

ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂದಿತು. ಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲ. ತಂದೆಯೇ ಹೊರಗೆ ಬಂದು ಬೇಡಿಕೊಂಡಾಗ ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಪ್ರಾಣಿಯನ್ನು ಕೊಯ್ಯಿಸಿದ್ದೀರಿ!’ ಎಂದು ವಾದಿಸಿದಆಗ ತಂದೆ ಅವನಿಗೆ, ‘ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ; ನನ್ನ ಸರ್ವಸ್ವವೂ ನಿನ್ನದೇ ಆಗಿದೆ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”

ಮನಸ್ಸಿಗೊಂದಿಷ್ಟು : ರಾಜನ ಮಗನೊಬ್ಬ ತನ್ನ ತಂದೆಯನ್ನು, ಅರಮನೆಯನ್ನು ಬಿಟ್ಟು ದೂರ ಹೋಗಿದ್ದ. ಒಂದಷ್ಟು ದಿನಗಳ ಬಳಿಕ ಮತ್ತೆ ಮನೆಗೆ ಹಿಂತಿರುಗಬೇಕು ಎನಿಸುತ್ತದೆ. ಆದರೆ ತಂದೆಯನ್ನು ಎದುರಿಸಲು ನಾಚಿಕೆಯಾಗಿ ಹಿಂಜರಿಯುತ್ತಾನೆ. ಇದನ್ನು ತಿಳಿದುಕೊಂಡ ರಾಜ ತನ್ನ ದೂತನ ಮೂಲಕ ಹೇಳಿ ಕಳುಹಿಸುತ್ತಾನೆ.  "ಅರ್ಧ ದಾರಿ ಅವನು ಬರಲಿ, ನಾನು ಇನ್ನೂ ಅರ್ಧ ದಾರಿ ಹೋಗಿ ಬರ ಮಾಡಿಕೊಳ್ಳುತ್ತೇನೆ. 

ದೇವರು ನಾವು ನಮ್ಮ ಪಾಪಗಳನ್ನು ಬಿಟ್ಟು ಹಿಂದಿರುಗುವಾಗ ಮತ್ತೆ ಒಪ್ಪಿಕೊಳ್ಳಲು ಸದಾ ಸಿದ್ಧರಿದ್ದಾರೆ. ನಾವು ಮನಸ್ಸು ಮಾಡಬೇಕಷ್ಟೆ. 

"ಕರುಣೆ ದುಂದುಗಾರ ಮಗನಿಗೆ ಮತ್ತೆ ಅವಕಾಶ ನೀಡಿತು. ಕೃಪೆ ಅವನ ಮರುಳುವಿಕೆಗೆ ಔತಣ ಏರ್ಪಡಿಸಿತು" ಎನ್ನುತ್ತಾರೆ ಮ್ಯಾಕ್ಸ್ ಲೂಸುಡೋ.  ಆ ಅಗಾಧ ಕೃಪೆಗೆ ಧನ್ಯರಾಗೋಣ     

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...