ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

18.09.21 - "ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ, "ಎಂದು ಒತ್ತಿ ಹೇಳಿದರು

ಮೊದಲನೇ ವಾಚನ: 1ತಿಮೊಥೇಯನಿಗೆ 6:13-16


ಅತಿ ಪ್ರಿಯನೇ, ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ, ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸಿಸುವುದೇನೆಂದರೆ: ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು: ಸೂಕ್ತಕಾಲದಲ್ಲಿ ಕ್ರಿಸ್ತ ಯೇಸುವಿನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವನು ಪರಮಾನಂದನು, ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ, ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್.

ಕೀರ್ತನೆ 100:1-2, 3, 4, 5
ಶ್ಲೋಕ: ಹಾಡುತ, ಪಾಡುತ, ಬನ್ನಿ ಪ್ರಭುವಿನ ಸನ್ನಿಧಿಗೆ.

ಭೂನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ|
ಅತಿ ಸಂತೋಷದಿಂದ ಸೇವೆಮಾಡಿ ಆತನಿಗೆ|
ಹಾಡುತ, ಪಾಡುತ, ಬನ್ನಿ ಆತನ ಸನ್ನಿಧಿಗೆ||

ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು|
ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು|
ಆತನ ಜನ ಆತನೇ ಮೇಯಿಸುವ ಕುರಿಗಳು ನಾವು||

ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದಗಳೊಂದಿಗೆ|
ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ|
ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ||

ಹೌದು ಪ್ರಭುವೆನಿತೋ ಒಳ್ಳೆಯವನು|
ಇರುವುದು ಆತನ ಪ್ರೀತಿ ಯುಗಯುಗಕೂ|
ಆತನ ಸತ್ಯತೆ ತಲತಲಾಂತರಕು||

ಶುಭಸಂದೇಶ:  ಲೂಕ 8:4-15


ಜನರು ಊರುರುಗಳಿಂದ ಹೊರಟು ಯೇಸುವಿನ ಬಳಿಗೆ ಬಂದರು. ಜನಸಮೂಹವು ಹೆಚ್ಚುತ್ತಿದ್ದಂತೆ ಯೇಸು ಈ ಸಾಮತಿಯನ್ನು ಹೇಳಿದರು: " ಒಬ್ಬ ರೈತನು ಬಿತ್ತುವುದಕ್ಕೆ ಹೋದನು. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಅವು ಕಾಲುತುಳಿತಕ್ಕೆ ಸಿಕ್ಕಿ ಹೋದವು. ಅವುಗಳನ್ನು ಆಕಾಶದ ಪಕ್ಷಿಗಳು ತಿಂದುಬಿಟ್ಟನು. ಮತ್ತೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು. ಅವು ಮೊಳೆತಾಗಲೂ ತೇವವಿಲ್ಲದ ಕಾರಣ ಒಣಗಿ ಹೋದವು. ಇನ್ನೂ ಕೆಲವು ಮುಳ್ಳು ಪೂದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಅವುಗಳೊಡನೆ ಬೆಳೆದು ಸಸಿಗಳನ್ನು ಅದುಮಿಬಿಟ್ಟವು. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು, " ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, " ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ, "ಎಂದು ಒತ್ತಿ ಹೇಳಿದರು. ಶಿಷ್ಯರು, 'ಈ ಸಾಮತಿಯ ಅರ್ಥವೇನು?' ಎಂದು ಕೇಳಿದಾಗ, ಯೇಸು ಇಂತೆಂದರು: " ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು. ಸಾಮತಿಯ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ. ಕಾಲ್ದಾರಿಯಲ್ಲಿ ಬಿದ್ದ ಬೀಜಗಳು ಎಂದರೆ ಆ ವಾಕ್ಯವನ್ನು ಕೇಳಿದವರು, ಆದರೆ ಅವರು ವಿಶ್ವಾಸಿಸಿ ಜೀವೋದ್ಧಾರವನ್ನು ಪಡೆಯದಂತೆ ಪಿಶಾಚಿ ಬಂದು ಆ ವಾಕ್ಯವನ್ನು ಅವರ ಹೃದಯದಿಂದ ಕೂಡಲೇ ತೆಗೆದುಬಿಡುತ್ತದೆ. ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು, ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪ ಕಾಲ ವಿಶ್ವಾಸಿಸುತ್ತಾರೆ, ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ. ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲ ಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿ ಬಿಡುತ್ತವೆ, ಇವರ ಫಲ ಪಕ್ವವಾಗುವುದಿಲ್ಲ. ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲತರುವವರು, " ಎಂದರು.

No comments:

Post a Comment