28.10.21

 ಮೊದಲನೇ ವಾಚನ: ಎಫೆಸಿಯರಿಗೆ 2:19-22

ಸಹೋದರರೇ, ನೀವು ಇನ್ನು ಮೇಲೆ ಪರಕೀಯರೂ  ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ. ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮಖ್ಯ ಮೂಲೆಗಲ್ಲು. ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ. ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.

ಕೀರ್ತನೆ: 19:2-3, 4-5
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ

ಶುಭಸಂದೇಶ: ಲೂಕ 6:12-19

ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು. ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ "ಪ್ರೇಷಿತರು" ಎಂದು ಹೆಸರಿಟ್ಟರು. ಹೀಗೆ ಅಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೇಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ, ಮತ್ತಾಯ ಮತ್ತು ತೋಮ, ಆಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ, ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ. ಆನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು. ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು. ಯೇಸುವಿನಿಂದ ದಿವ್ಯ ಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.

No comments:

Post a Comment

12.06.2026 - ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿ ಕೊಡುತ್ತೇನೆ.

  ಯೇಸುವಿನ ಪವಿತ್ರ ಹೃದಯದ ಮಹೋತ್ಸವ ಮೊದಲನೇ ವಾಚನ: ಧರ್ಮೋಪದೇಶಕಾಂಡ 7:6-11 ಮೋಶೆಯು ಜನರಿಗೆ ಹೇಳಿದ್ದೇನೆಂದರೆ: "ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲ...