ಮೊದಲನೇ ವಾಚನ: ಜೆಫನ್ಯನು 3: 1-2, 9-13
ದಬ್ಬಾಳಿಕೆ ನಡೆಸುವ, ದಂಗೆಯೇಳುವ ದುಷ್ಟ ನಗರಕ್ಕೆ ದಿಕ್ಕಾರ! ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ. ತನ್ನ ದೇವರ ಸನ್ನಿಧಿಗೆ ಬರಲಿಲ್ಲ. “ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು. ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು. ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕøತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ. ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು. ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯ ಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”
ದಬ್ಬಾಳಿಕೆ ನಡೆಸುವ, ದಂಗೆಯೇಳುವ ದುಷ್ಟ ನಗರಕ್ಕೆ ದಿಕ್ಕಾರ! ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ. ತನ್ನ ದೇವರ ಸನ್ನಿಧಿಗೆ ಬರಲಿಲ್ಲ. “ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು. ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು. ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕøತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ. ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು. ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯ ಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”
ಕೀರ್ತನೆ: 34: 2-3, 6-7, 17-18, 19 and 23
ಶ್ಲೋಕ: ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು
ಶುಭಸಂದೇಶ: ಮತ್ತಾಯ 21: 28-32
ಯೇಸು ಮುಖ್ಯಯಾಜಕರನ್ನೂ ಪ್ರಜಾಪ್ರಮುಕರನ್ನೂ ಉದ್ದೇಶಿಸಿ ಹೀಗೆಂದರು: “ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸ ಮಾಡು’ ಎಂದ. ಅದಕ್ಕೆ ಅವನು, ‘ನಾನು ಹೋಗುವುದಿಲ್ಲ’ ಎಂದು ಉತ್ತರವಿತ್ತ. ಆದರೂ ಅನಂತರ ಪಶ್ಚಾತ್ತಾಪಪಟ್ಟು ಅವನು ತೋಟಕ್ಕೆ ಹೋದ. ತಂದೆ ಎರಡನೆಯ ಮಗನ ಹತ್ತಿರ ಹೋಗಿ ಅಂತೆಯೇ ತೋಟಕ್ಕೆ ಹೋಗಲು ಹೇಳಿದ. ಅವನು, ‘ಇಗೋ, ಹೋಗುತ್ತೇನಪ್ಪಾ’ ಎಂದು ಹೇಳಿದ. ಆದರೆ ಹೋಗಲೇ ಇಲ್ಲ. ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪ ಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.
No comments:
Post a Comment