ಮೊದಲನೇ ವಾಚನ: ಯೆಶಾಯ 58:1-9
ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು; ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೊ ಎಂಬಂತೆ, ಇವರು ದಿನ ದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವ ದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.” ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸ ಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ. ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತೀರೊ? “ನಾನು ಹೇಳುವುದನ್ನು ಕೇಳಿ: ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು, ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತ ಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸ ವ್ರತ? “ಇದನ್ನು ಆಚರಿಸುವಾಗ ನೀವು ಉದಯ ಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು. ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು.
ಕೀರ್ತನೆ: 51:3-4, 5-6, 18-19
ಶ್ಲೋಕ: ನೊಂದ ಬೆಂದ ಮನವನಾತ ಬಲ್ಲೆಯೆನನು
ಶುಭಸಂದೇಶ: ಮತ್ತಾಯ 9: 14-15
ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. “ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?" ಎಂದು ಪ್ರಶ್ನೆ ಹಾಕಿದರು. ಅದಕ್ಕೆ ಯೇಸು, "ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.
ಮನಸ್ಸಿಗೊಂದಿಷ್ಟು : ಕೇವಲ ಆಚರಣೆಗಾಗಿ ಮಾತ್ರವೇ ಮಾಡುವ ಉಪವಾಸ ವ್ರತದ ಬಗ್ಗೆ ಇಂದಿನ ಎರಡೂ ವಾಚನಗಳು ಮಾತನಾಡುತ್ತವೆ. ದೇವರಿಗೆ ಇಷ್ಟವಾದ ಉಪವಾಸ ವ್ರತ ಯಾವುದೆಂದು ಯೆಶಾಯ ಪ್ರವಾದಿ ಹೇಳಿದರೆ, "ನಾನು ಜೊತೆಗಿರುವಾಗ ಉಪವಾಸವೇಕೆ ಬೇಕು" ಎನ್ನುತ್ತಾರೆ ಯೇಸು. ನಮ್ಮ ಉಪವಾಸ, ತ್ಯಾಗದಿಂದ ನಮಗೆ ಮಾತ್ರವೇ ಒಳ್ಳೆಯದಾಗಿ ಮತ್ತೊಬ್ಬರಿಗೆ ಅದರಿಂದ ಪ್ರಯೋಜನವಾಗದಿದ್ದರೆ ಅದು ನಿರರ್ಥಕ ಎಂಬ ಪೋಪ್ ಫ್ರಾನ್ಸಿಸ್ ರ ಮಾತು ಚಿಂತನೆಗೆ ಯೋಗ್ಯವಾಗಿದೆ.
ಪ್ರಭುವೇ,
ನೀ ನನ್ನ ಜೊತೆಯಿರೇ ದುಃಖವೇಕೆ
ಕರುಣೆ ಪ್ರೀತಿಯಿಲ್ಲದ ಉಪವಾಸವೇಕೆ?
-ಚಿತ್ತ
ಮನಸ್ಸಿಗೊಂದಿಷ್ಟು : ಕೇವಲ ಆಚರಣೆಗಾಗಿ ಮಾತ್ರವೇ ಮಾಡುವ ಉಪವಾಸ ವ್ರತದ ಬಗ್ಗೆ ಇಂದಿನ ಎರಡೂ ವಾಚನಗಳು ಮಾತನಾಡುತ್ತವೆ. ದೇವರಿಗೆ ಇಷ್ಟವಾದ ಉಪವಾಸ ವ್ರತ ಯಾವುದೆಂದು ಯೆಶಾಯ ಪ್ರವಾದಿ ಹೇಳಿದರೆ, "ನಾನು ಜೊತೆಗಿರುವಾಗ ಉಪವಾಸವೇಕೆ ಬೇಕು" ಎನ್ನುತ್ತಾರೆ ಯೇಸು. ನಮ್ಮ ಉಪವಾಸ, ತ್ಯಾಗದಿಂದ ನಮಗೆ ಮಾತ್ರವೇ ಒಳ್ಳೆಯದಾಗಿ ಮತ್ತೊಬ್ಬರಿಗೆ ಅದರಿಂದ ಪ್ರಯೋಜನವಾಗದಿದ್ದರೆ ಅದು ನಿರರ್ಥಕ ಎಂಬ ಪೋಪ್ ಫ್ರಾನ್ಸಿಸ್ ರ ಮಾತು ಚಿಂತನೆಗೆ ಯೋಗ್ಯವಾಗಿದೆ.
ಪ್ರಭುವೇ,
ನೀ ನನ್ನ ಜೊತೆಯಿರೇ ದುಃಖವೇಕೆ
ಕರುಣೆ ಪ್ರೀತಿಯಿಲ್ಲದ ಉಪವಾಸವೇಕೆ?
-ಚಿತ್ತ
No comments:
Post a Comment