ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

11.02.22 - ‘ಎಪ್ಫಥಾ’ ಎಂದರೆ ‘ತೆರೆಯಲಿ’

ಮೊದಲನೇ ವಾಚನ: 1 ಅರಸುಗಳು 11:29-32; 12:19

ಒಂದು ದಿವಸ ಯಾರೊಬ್ಬಾಮನು ಜೆರುಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿ ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ. ಆಗ ಅಹೀಯನು, ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು, ಅದನ್ನು ಹರಿದು ಹನ್ನೆರಡು ತುಂಡುಮಾಡಿ, ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಯೇಲ್ ದೇವರಾದ ಸರ್ವೇಶ್ವರ ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು ತನ್ನ ದಾಸ ದಾವೀದನ ನಿಮಿತ್ತ ಹಾಗು ತಾವು ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ಅವನಿಗೆ ಒಂದೇ ಒಂದು ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾರೆ. ಎಂದನು.  ಇಸ್ರಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.

ಕೀರ್ತನೆ: 81:10-11, 12-13, 14-15

ಶ್ಲೋಕ: ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ

ಶುಭಸಂದೇಶ: ಮಾರ್ಕ 7:31-37

ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು. ಮಾತನಾಡಲಾಗದ ಒಬ್ಬ ಕಿವುಡನನ್ನು ಜನರು ಅವರ ಬಳಿಗೆ ಕರೆತಂದರು. ಅವನ ಮೇಲೆ ಕೈಗಳನ್ನಿಡಬೇಕೆಂದು ಬೇಡಿಕೊಂಡರು. ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು. ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು. ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು. ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರ ಮಾಡಿದರು. ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.

No comments:

Post a Comment