01.07.22
30.06.2022 - "ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು"
29.06.22 - "ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು"
28.06.22
27.06.22
26.06.22 - "ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ,"
ಶ್ಲೋಕ: ಪ್ರಭೂ, ನನ್ನ ಸ್ವತ್ತೂ ಸ್ವಾಸ್ಥ್ಯವೂ ನೀನೇ
ತಾವು ಸ್ವರ್ಗರೋಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಾಮುಖವಾಗಿ ಹೊರಡಲು ನಿರ್ಧರಿಸಿದರು. ಅಲ್ಲದೆ ತಮಗೆ ಮುಂದಾಗಿ ದೂತರನ್ನು ಕಳುಹಿಸಿದರು. ಇವರು ಹೊರಟು ಯೇಸುವಿಗೆ ಬೇಕಾದುದನ್ನು ಸಿದ್ದಮಾಡಲು ಸಮಾರಿಯದ ಒಂದು ಹಳ್ಳಿಗೆ ಬಂದರು. ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ. ಇದನ್ನು ಕಂಡು ಶಿಷ್ಯರಾದ ಯಕೋಬ ಮತ್ತು ಯೊವಾನ್ನ, "ಪ್ರಭೂ, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞೆಮಾಡಬಹುದಲ್ಲವೇ?" ಎಂದರು. ಯೇಸು ಅವರ ಕಡೆ ತಿರುಗಿ, "ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ" ಎಂದು ಅವರನ್ನು ಖಂಡಿಸಿದರು. ಆನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು. ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ ಒಬ್ಬನು ಯೇಸುವಿಗೆ, "ನೀವು ಎಲ್ಲಿಗೆ ಹೋದರೂ ನಿಮ್ಮನ್ನು ಹಿಂಬಾಲಿಸುತ್ತೇನೆ," ಎಂದನು. ಯೇಸು ಅವನಿಗೆ, "ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ," ಎಂದರು. ಇನ್ನೊಬ್ಬನಿಗೆ ಯೇಸು, "ನನ್ನನ್ನು ಹಿಂಬಾಲಿಸು," ಎಂದು ಹೇಳಿದಾಗ ಅವನು, ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೇಗಳನ್ನು ಮುಗಿಸುವ ತನಕ ಸಮಯಕೊಡಿ," ಎಂದನು. ಅವನಿಗೆ ಯೇಸು, "ಸತ್ತವರೇ ತಮ್ಮ ಸತ್ತವರನ್ನು ಸಮಾಧಿಮಾಡಿಕೊಳ್ಳಲಿ; ನೀನಾದರೋ, ಹೋಗು, ದೇವರ ಸಾಮ್ರಾಜ್ಯವನ್ನು ಪ್ರಚಾರಮಾಡು," ಎಂದು ಹೇಳಿದರು. ಮತ್ತೊಬ್ಬನು, "ನಿಮ್ಮನ್ನು ಹಿಂಬಾಲಿಸುತ್ತೇನೆ ಪ್ರಭೂ, ಆದರೆ ಮೊದಲು ಮನೆಯವರನ್ನು ಬೀಳ್ಕೊಟ್ಟು ಬರಲು ಅಪ್ಪಣೆ ಆಗಬೇಕು," ಎಂದನು. ಯೇಸು ಅವನನ್ನು ನೋಡಿ, "ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ," ಎಂದರು.
25.06.22 - “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,”
24.06.22 - "ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು"
ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು: "ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳಿವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆ ಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಭತ್ತೊಂಭತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆ ಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ; ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. "ಕಳೆದು ಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ," ಎನ್ನುತ್ತಾನೆ, ಅಲ್ಲವೇ? ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಭತ್ತೊಂಭತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.
23.06.22 - "ಈ ಮಗು ಮುಂದೆ ಎಂಥವನಾಗುವನೋ!"
ಅರಿತುಕೊಂಡಿರುವೆ ಅಂತರಂಗವನು II
ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I
ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ I
ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ II
ನನ್ನ ಅಂತರಂಗವನು ಉಂಟುಮಾಡಿದಾತ ನೀನು I
ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II
ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I
ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II
ನನ್ನ ಅಸ್ಥಿಪಂಜರವನು ರೂಪಿಸುವಾಗ I
ತಾಯಗರ್ಭದೊಳು ಅಚ್ಚರದಿ ರಚಿಸುವಾಗ I
ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ I
ಮರೆಯಾಗಿರಲಿಲ್ಲ ನಾನು ನಿನಗಾಗ II
22.06.22 - ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು
21.06.22 - “ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು"
ದೇವನಖರದಲ್ಲಿ ಆತನ ಪವಿತ್ರ ಪರ್ವತ||
ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ|
ಆನಂದದಾಯಕ ರಾಜಾಧಿರಾಜನ ಆ ನಗರ||
ಅದರ ಕೋಟೆಕೊತ್ತಲಗಳ ನಡುವೆ ದೇವನು|
ತಾನೇ ಸುಭದ್ರ ದುರ್ಗವೆಂದು ತೋರಿಹನು||
ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು|
ನಿನ್ನ ಮಹದಾಲಯದೊಳು ಅದನು ಧ್ಯಾನಿಸುವೆವು||
ನಿನ್ನ ನಾಮದಂತೆ ನಿನ್ನಾ ಹೊಗಳಿಕೆ|
ಮುಟ್ಟುತ್ತದೆ ಜಗದ ಎಲ್ಲೆ ಎಲ್ಲೆಗೆ ||
ಘೋಷಣೆ ಯೊವಾನ್ನ 17:17
ಅಲ್ಲೆಲೂಯ, ಅಲ್ಲೆಲೂಯ!
ಪಿತನೇ, ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.
ಅಲ್ಲೆಲೂಯ!
20.06.22 - "ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು"
19.06.22 - ಸ್ವರ್ಗದತ್ತ ಕಣ್ಣೆತ್ತಿ ನೋಡಿ ದೇವರಿಗೆ ಸ್ತೋತ್ರ ಸಲ್ಲಿಸಿದರು.
ಮೊದಲನೆಯ ವಾಚನ : ಆದಿಕಾಂಡದಿಂದ 14:18-20
ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನು ದ್ರಾಕ್ಷರಸವನ್ನೂ ಅರ್ಪಿಸಿ ಅಬ್ರಹಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು: ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಹಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ" ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.
- ಪ್ರಭುವಿನ ವಾಕ್ಯ
ಕೀರ್ತನೆ : 10:1-4
ಶ್ಲೋಕ: ಮೆಲ್ಕಿಸದೇಕ್ ಪರಂಪರೆಯ ಯಾಜಕ ನೀ ನಿರುತ.
1. ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ|
ಆಸೀನನಾಗಿರು ನೀನು ನನ್ನ ಬಲಗಡೆಗೆ|
ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ||
2. ಸಿಯೋನಿನ ಹೊರಗು ವಿಸ್ತರಿಸುವನು|
ಪ್ರಭು ನಿನ್ನ ರಾಜ್ಯದಾಳಿಕೆಯನು||
ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೇ|
ದೊರೆತನ ಮಾಡುವೆ ನೀನು||
3. ಸೇನೆಯನು ನೀ ಅಣಿಗೊಳಿಸುವ ದಿನದೊಳು|
ಸೇರಿಕೊಳ್ವರು
ತಾವಾಗಿಯೇ ಪ್ರಜೆಗಳು||
ಶುಭ್ರವಸ್ತ್ರಧರಿಸಿ
ನಿನ್ನ ಯುವಕ ಯೋಧರು|
ಉದಯಕಾಲದಿಬ್ಬನಿಯಂತೆ ಇಳಿದು ಬರುವರು||
ಎರಡನೆಯ ವಾಚನ : 1ಕೊರಿಂಥಿಯ 11:23-36
ಸಹೋದರರೇ, ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ; ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, " ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ, " ಎಂದರು. ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, " ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ, " ಎಂದರು. ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ, ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.
ಘೋಷಣೆ : ಯೊವಾನ್ನ 6:51
ಶುಭಸಂದೇಶ ವಾಚನ : ಲೂಕ 9:11-17
ತಮ್ಮನ್ನು ಹಿಂಬಾಲಿಸುತ್ತಿದ್ದ ಜನಸಮೂಹವನ್ನು ಯೇಸು ಸ್ವಾಗತಿಸಿ, ದೇವರ ಸಾಮ್ರಾಜ್ಯದ ವಿಷಯವಾಗಿ ಹೇಳಿ ಅಗತ್ಯವಿದ್ದವರಿಗೆ ಆರೋಗ್ಯದಾನ ಮಾಡಿದರು. ಅಷ್ಟರಲ್ಲಿ ಸಾಯಂಕಾಲವಾಗುತ್ತಾ ಬಂದಿತು. ಹನ್ನೆರಡು ಮಂದಿ ಪ್ರೇಷಿತರು ಯೇಸುವಿನ ಬಳಿಗೆ ಬಂದು, " ಇದು ನಿರ್ಜನಪ್ರದೇಶ; ಜನರನ್ನು ಕಳುಹಿಸಿಬಿಡಿ. ಅವರು ಸಮೀಪದ ಊರುಕೇರಿಗಳಿಗೂ ಹೋಗಿ ಊಟವಸತಿಯನ್ನು ಒದಗಿಸಿಕೊಳ್ಳಲಿ, ಎಂದರು. ಅದಕ್ಕೆ ಯೇಸು, " ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿ, " ಎಂದರು. ಅವರು, " ನಮ್ಮಲ್ಲಿರುವುದು ಐದು ರೊಟ್ಟಿ ಮತ್ತು ಎರಡು ಮೀನು ಮಾತ್ರ, ನಾವು ಹೋಗಿ ಇವರೆಲ್ಲರಿಗೆ ಬೇಕಾಗುವಷ್ಟು ಊಟ ಕೊಂಡುಕೊಂಡು ಬರಬೇಕೇ? " ಎಂದರು. ಏಕೆಂದರೆ ಅಲ್ಲಿ ಗಂಡಸರೇ ಸುಮಾರು ಐದು ಸಾವಿರ ಮಂದಿ ಇದ್ದರು. ಆಗ ಯೇಸು ಶಿಷ್ಯರಿಗೆ, " ಇವರನ್ನು ಐವತ್ತು ಐವತ್ತರಂತೆ ಪಂಕ್ತಿಯಾಗಿ ಕೂರಿಸಿರಿ, " ಎಂದು ಹೇಳಲು ಅವರು ಹಾಗೆಯೇ ಎಲ್ಲರನ್ನು ಕುಳ್ಳರಿಸಿದರು. ಅನಂತರ ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು ಸ್ವರ್ಗದತ್ತ ಕಣ್ಣೆತ್ತಿ ನೋಡಿ ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಅವುಗಳನ್ನು ಮುರಿದು ಜನಸಮೂಹಕ್ಕೆ ಬಡಿಸುವಂತೆ ಶಿಷ್ಯರಿಗೆ ಕೊಟ್ಟರು. ಎಲ್ಲರೂ ಹೊಟ್ಟೆತುಂಬ ತಿಂದು ಸಂತೃಪ್ತರಾದರು. ಇನ್ನು ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿತುಂಬ ಆದವು.