ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

06.06.22 - “ಅಮ್ಮಾ, ಇಗೋ, ನಿನ್ನ ಮಗ,”

ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 1: 12-14


ಯೇಸು ಸ್ವರ್ಗಾರೋಹಣವಾದ ನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊವಿೂಟರು ದೂರದಲ್ಲಿರುವ ಜೆರುಸಲೇಮಿಗೆ ಹಿಂದಿರುಗಿದರು. ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು. ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.

ಕೀರ್ತನೆ 87:1-2, 3, 5, 6-7 
ಶ್ಲೋಕ: ದೈವ ಶ್ರೀನಗರವೇ, ಕೇಳು ಇವನ್ನು, ನಿನ್ನ ಕುರಿತ ಅತಿಯೋಕ್ತಿಗಳನು  

ಶುಭಸಂದೇಶ: ಯೊವಾನ್ನ 19: 25-34


ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು. ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ತಮ್ಮ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು. ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು. ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು. ಇದಾದ ಮೇಲೆ ಯೇಸುಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು. ಬಳಿಯಲ್ಲೇ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಅವರು ಸ್ಪಂಜನ್ನು ಆ ಹುಳಿರಸದಲ್ಲಿ ತೋಯಿಸಿ ಹಿಸೋಪ್‍ಗಿಡದ ಕೋಲಿಗೆ ಸಿಕ್ಕಿಸಿ, ಯೇಸುವಿನ ಬಾಯಿಗೆ ಮುಟ್ಟಿಸಿದರು. ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು. ತಾವು ಇರಿದವನನ್ನೇ ನಿರೀಕ್ಷಿಸುವರು ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು. ಅಂತೆಯೇ ಸೈನಿಕರು ಬಂದು ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಮತ್ತು ಎರಡನೆಯವನ ಕಾಲುಗಳನ್ನು ಮುರಿದರು. ತರುವಾಯ ಯೇಸುವಿನ ಬಳಿಗೆ ಬಂದರು. ಯೇಸು ಆಗಲೇ ಸತ್ತುಹೋಗಿರುವುದನ್ನು ಕಂಡು, ಅವರ ಕಾಲುಗಳನ್ನು ಮುರಿಯಲಿಲ್ಲ. ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದು ಬಂದವು.

No comments:

Post a Comment