12.06.22 - "ಈ ನಂಬಿಕೆ ನಿರಿಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ"

ಮೊದಲನೇ ವಾಚನಜ್ಞಾನೋಕ್ತಿಗಳು 8:22--31

ಜ್ಞಾನವೆಂಬಾಕೆ ಇಂತೆನ್ನುತ್ತಾಳೆತನ್ನ ಸೃಷ್ಟಿಕ್ರಮದಲ್ಲಿ ಸರ್ವೇಶ್ವರ ನಿರ್ಮಿಸಿದ ನನ್ನನ್ನು ಮೊತ್ತಮೊದಲು ಆತನ ಪುರಾತನ  ಕಾರ್ಯಕ್ರಮಗಳಲ್ಲಿ ನಾನೇ ಪ್ರಥಮಳುನಾನು ಸ್ಥಾಪಿಸಲ್ಪಟ್ಟೆ ಪ್ರಾರಂಭದಲ್ಲೇ ಜಗದುತ್ಪತ್ತಿಗೆ ಮುಂಚೆಯೇಅನಾದಿಕಾಲದಲ್ಲೇಜಲನಿಧಿಗಳಾಗಲಿನೀರಿನ ಬುಗ್ಗೆಗಳಾಗಲಿ ಇಲ್ಲದಿರುವಾಗಲೇ ನಾ ಬಂದೆ ಜನ್ಮತಾಳಿನಾನು ಹುಟ್ಟಿದೆ ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮೊದಲೇ ನಾನು ಜನಿಸಿದೆ ಭೂಮಿಯನ್ನಾಗಲಿಬೈಲನ್ನಾಗಲಿ ನೆಲದ ಅಣುರೇಣನ್ನಾಗಲಿ ಆತ ನಿರ್ಮಿಸದೆ ಇರುವಾಗಲೇನಾನು ಅಲ್ಲಿದ್ದೆ ಆತ ಆಕಾಶಮಂಡಲವನ್ನು ಸ್ಥಪಿಸುವಾಗ ಸಾಗರದ ಮೇಲೆ ಚಕ್ರಾಕಾರದ ಗೆರೆಯನ್ನು ಎಳೆಯುವಾಗಗಗನವನ್ನು ಮೇಲೆ ಸ್ಥಿರಪಡಿಸುವಾಗ ಸಾಗರದ ಸೆಲೆಗಳನ್ನು ನೆಲೆಗೊಳಿಸಿದಾಗಜಲಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮೂದ್ರಕ್ಕೆ ಎಲ್ಲೆಕಟ್ಟನ್ನು ನೇಮಿಸುವಾಗ ಭೂಮಿಯ ಅಸ್ತಿಭಾರವನ್ನು ಗೊತ್ತುಮಾಡುವಾಗನಾನು ಆತನ ಬಳಿ ಕುಶಲ ಶಿಲ್ಪಿಯಂತಿದ್ದೆ ಅನುದಿನವೂ ಆತನಿಗೆ ಆನಂದವನ್ನೀಯುತ್ತಿದ್ದೆ ಸದಾ ಆತನ ಮುಂದೆ ಸಂತೋಷಪಡುತ್ತಿದ್ದೆಉಲ್ಲಾಸಿಸುತ್ತಿದ್ದೆ ಆತನ ಭುಲೋಕದಲ್ಲಿ ಹರ್ಷಿಸುತ್ತಾ ಇದ್ದೆ ಮಾನವ ಸಂತಾನದಲ್ಲಿ.

ಕೀರ್ತನೆ: 8:4--5, 6--7, 8--9

ಶ್ಲೋಕಪ್ರಭೂ ಎಮ್ಮ ಪ್ರಭೂನಿನ್ನ ನಾಮಾಮೃತಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ

ಎರಡನೇ ವಾಚನರೋಮನರಿಗೆ 5:1--5
ಸಹೋದರರೇವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೆವೆವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರುನಾವೀಗ ನೆಲೆಗೊಂಡಿರುವುದು  ಅನುಗ್ರಹದಲ್ಲಿಯೇಆದ್ದರಿಂದಲೇದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆಅಷ್ಟೇ ಅಲ್ಲನಮಗೆ ಬಂದೊದುಗುವ ಕಷ್ಟಸಂಕಟಗಳಲ್ಲೂ  ಹೆಮ್ಮೆಪಡುತ್ತೇವೆಏಕೆಂದರೆಕಷ್ಟಸಂಕಟಗಳು ಸಹನೆಯನ್ನುಸಹನೆಯು ಸದ್ಗುಣವನ್ನುಸದ್ಗುಣವು ನಂಬಿಕೆ ನಿರಿಕ್ಷೆಯನ್ನು ಬೆಳೆಸುತ್ತವೆಂದು ನಾವು ಬಲ್ಲೆವು ನಂಬಿಕೆ ನಿರಿಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲಏಕೆಂದರೆನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.

ಶುಭಸಂದೇಶಯೊವಾನ್ನ 16:12--15


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರುನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆಸಧ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದುಹೇಗೂ ಸತ್ಯಸ್ವರೂಪಿಯಾದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರುಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರುಮುಂದೆ ನಡೆಯಲ್ಲಿರುವುದನ್ನೂ ನಿಮಗೆ ತಿಳಿಸುವರುಅವರುನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸಿ ನನ್ನ ಮಹಿಮೆಯನ್ನು ಬೆಳಗಿಸುವರುಪಿತನಿಗೆ ಇರುವುದೆಲ್ಲವೂ ನನ್ನದೇಆದುದರಿಂದಲೇ ಪವಿತ್ರಾತ್ಮ ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸುವರೆಂದು ನಾನು ಹೇಳಿದ್ದು."

ಮನಸಿಗೊಂದಿಷ್ಟು : ನಮ್ಮ ಬುದ್ಧಿಯನ್ನು ವಿಕಾಸಗೊಳಿಸುವ ಪವಿತ್ರಾತ್ಮರ ಮಹತ್ವವನು ಯೇಸು ಇಂದು ನಮಗೆ ತಿಳಿಸುತ್ತಾರೆ. ಪವಿತ್ರಾತ್ಮರಿಗೆ ನಮ್ಮ ಬದುಕಿನಲ್ಲಿ ನಾವು ದೊಡ್ಡ ಪಾತ್ರ ಸ್ಥಳ ಕೊಟ್ಟಾಗ ನಮ್ಮ ಬದುಕು ಪಡೆದುಕೊಳ್ಳುವ ಪಾವಿತ್ರತೆ, ಸಾರ್ಥಕತೆ ಅಗಾಧ. ಪವಿತ್ರಾತ್ಮರ ವರಕ್ಕಾಗಿ ನಮ್ಮ ಹೃದಯ ಸದಾ ಹಾತೊರೆಯಲಿ.

ಪ್ರಶ್ನೆ : ಪವಿತ್ರಾತ್ಮರಿಗಾಗಿ ನಾವೆಷ್ಟು ಹಾತೊರೆದಿದ್ದೇವೆ.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...