ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

07.08.22 - "ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು"

ಮೊದಲನೇ ವಾಚನ: ಸುಜ್ಞಾನ ಗ್ರಂಥ 18:6-9

ಆ ರಾತ್ರಿಯ ಘಟನೆಗಳನ್ನು ನಮ್ಮ ಪೂರ್ವಜರಿಗೆ ಮೊದಲೇ ತಿಳಿಸಲಾಗಿತ್ತು ಎಂದೇ ಅವರು ನಂಬಿದ್ಧ ವಾಗ್ದಾನಗಳಿಂದ ಧೈರ್ಯತಂದುಕೊಂಡರು ಹೀಗೆ ಶತ್ರುಗಳ ಆಳಿವನು. ಸಜ್ಜನರ ಉದ್ಧಾರವನ್ನು ನಿಮ್ಮ ಜನರು ನಿರೀಕ್ಷಿಸಿದರು. ಯಾವ ಸಾಧನಗಳಿಂದ ಶತ್ರುಗಳಿಗೆ ನೀವು ಮುಯ್ಯಿ ತೀರಿಸಿದಿರೋ ಅವುಗಳಿಂದಲೇ ನಮ್ಮನ್ನು ತಮ್ಮ ಬಳಿಗೆ ಕರೆದು ಗೌರವಿಸಿದಿರಿ. ಸಜ್ಜನರ ಸ್ವಂತ ಕುಮಾರರು ಬಲಿಯನ್ನರ್ಪಿಸಿದರು ರಹಸ್ಯವಾಗಿ ದೇವ ನಿಯಮದ ನಿಬಂಧನೆಗಳನ್ನು ಅಂಗೀಕರಿಸಿದರು ಒಮ್ಮನಸ್ಸಾಗಿ. ಅಂತೆಯೇ ಹೆತ್ತವರು ತಾವು ದೇವಜನರೆಂದು ಒಪ್ಪಿಕೊಂಡರು. ಸುಖ - ಸಂಕಟಗಳಲ್ಲಿ ಭಾಗಿಗಳೆಂದು ಹಾಡಿದರು ಪೂರ್ವಜರ ಸ್ತುತಿ ಗೀತೆಯನ್ನು.

ಕೀರ್ತನೆ: 33:1, 12, 18-19, 20-22
ಶ್ಲೋಕ: ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ

ಎರಡನೇ ವಾಚನ: ಹಿಬ್ರಿಯರಿಗೆ 11:1-2, 8-9

ವಿಶ್ವಾಸವೆಂಬುದು ನಾವು ನಿರೀಕ್ಷಿಸುವಂಥವುಗಳು ನಮಗೆ ದೊರಕುತ್ತವೆ ಎಂಬ ದೃಡನಂಬಿಕೆ ಹಾಗು ಕಣ್ಣಿಗೆ ಕಾಣದಂಥವುಗಳು ನಿಶ್ಚಯವಾದವು ಎಂಬ ನಿಲುವು ಆಗಿದೆ. ನಮ್ಮ ಪೂರ್ವಜರು ದೈವ ಸಮ್ಮತಿಯನ್ನು ಪಡೆದದ್ದು ವಿಶ್ವಾಸದಿಃದಲೇ. ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು. ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶೀಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ, ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು. ಏಕೆಂದರೆ, ಶಾಶ್ವತವಾದ ಅಸ್ತಿವಾರವುಳ್ಳ ಅಂದರೆ, ದೇವರೇ ನಿಯೋಜಿಸಿ ನಿರ್ಮಿಸಿದ ನಗರವನ್ನು ಆತನು ಎದುರು ನೋಡುತ್ತಿದ್ದನು. ಇದಲ್ಲದೆ, ಪ್ರಾಯ ಮೀರಿದ ಸಾರಾಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿಯಾಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಗಸ್ಥರು ಎಂಬ ಭರವಸೆ ಆಕೆಗಿತ್ತು. ಹೀಗೆ ಮೃತಪ್ರಾಯನಾಗಿದ್ದ ಒಬ್ಬ ವೆಕ್ತಿ ಆಕಾಶದ ನಕ್ಷತ್ರಗಳಂತೆಯೂ ಕಡಲ ತೀರದ ಮರಳಿನಂತೆಯೂ ಅಸಂಖ್ಯಾತವಾದ ಸಂತತಿಗೆ ತಂದೆಯಾದನು. ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನ ಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲಪರದೇಶಿಗಳೂ ಪ್ರವಾಸಿಗರೂ ಎಂಬದನ್ನು ಒಪ್ಪಿಕೊಂಡರು. ಹೀಗೆ ಒಪ್ಪಿಕೊಳ್ಳುವವರೇ ಸ್ವದೇಶವನ್ನು ಅರಸುವವರು ಎಂಬುದನ್ನು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. ತಾವು ಬಿಟ್ಟು ಬಂದ ನಾಡಿನ ಮೇಲೆ ಅವರು ಮನಸ್ಸಿಡಲಿಲ್ಲ, ಹಾಗಿದ್ದಿದ್ದರೆ, ಮರಳಿ ಅಲ್ಲಿಗೆ ಹೋಗುವುದಕ್ಕೆ ಅವರಿಗೆ ಅವಕಾಶ ಯಾವಾಗಲೂ ಇರುತ್ತಿತ್ತು. ಆದರೆ, ಅವರು ಬಯಸಿದ್ದು ಶ್ರೇಷ್ಟವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಃದಲೇ ದೇವರು, "ಅವರ ದೇವರು" ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ. ವಿಶ್ವಾಸವಿದ್ಧುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು. "ಇಸಾಕನಿಂದ ಹುಟ್ಟುವವರು. ನಿನ್ನ ಸಂತತಿ ಎನಿಸಿಕೊಳ್ಳುವರು," ಎಂಬ ವಾಗ್ದಾನವನ್ನು ಪಡೆದಿದ್ದರೂ ಅಬ್ರಹಾಮನು ತನ್ನ ಆ ಏಕಮಾತ್ರ ಪುತ್ರನನ್ನು ಬಲಿಕೊಡಲು ಹಿಂಜರಿಯಲಿಲ್ಲ. ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇದೊಂದು ಮುನ್ಸೂಚನೆಯಾಗಿತ್ತು.

ಶುಭಸಂದೇಶ: ಲೂಕ 12:32-48



ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ, "ಪುಟ್ಟ ಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ. ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಕರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ: ನುಸಿಹಿಡಿದು ನಾಶವಾಗುವಂತಿಲ್ಲ. ನಿಮ್ಮ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು. ನಿಮ್ಮ ಹೃದಯ . ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ. ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದಿರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ. ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡು ಕಟ್ಟಿ ನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಶ್ಚಯವಾಗಿ ಹೇಳುತ್ತೇನೆ. ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು. ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ. ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು," ಎಂದರು ಆಗ ಪೇತ್ರನು, "ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ?" ಎಂದು ಕೇಳಿದನು. ಅದಕ್ಕೆ ಪ್ರಭು ಹೀಗೆಂದರು: "ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲ ಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸ ಧಾನ್ಯಗಳನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಆದರೆ ಆ ಸೇವಕನು ತನ್ನಲ್ಲೇ, "ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ", ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರ ಹಿಂಸೆಗೂ ವಿಶ್ವಾಸಹೀನರ ದುರ್ಗತಿಗೂ ಗುರಿ ಮಾಡುವನು. ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು.

1 comment:

  1. ದಿನಾಂಕ ಆಗಸ್ಟ್ 6 ಪವಿತ್ರ ವಾಚನಗಳು ಬಂದಿಲ್ಲ

    ReplyDelete