ಮೊದಲನೇ ವಾಚನ: ಉಪದೇಶಕ 1:2, 2:21-23
ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ, ಒಬ್ಬನು ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕೆಲಸಮಾಡಿ ಕಾರ್ಯವನ್ನು ಸಿದ್ಧಿಗೆ ತಂದಮೇಲೆ, ಅದಕ್ಕಾಗಿ ಪ್ರಯಾಸಪಡದವನಿಗೆ ಅದನ್ನು ವಾರಸುದಾರನಾಗಿ ಬಿಡಬೇಕಾಗುತ್ತದೆ. ಇದು ಸಹ ವ್ಯರ್ಥವಲ್ಲವೆ? ಇದು ಅನ್ಯಾಯವಲ್ಲವೆ? ಲೋಕದಲ್ಲಿ ಮಾನವನು ಹೃತ್ಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು? ಅವನ ಮನಸ್ಸಿಗೆ ನೆಮ್ಮದಿ ಇಲ್ಲ. ಇದು ಸಹ ವ್ಯರ್ಥವೇ ಸರಿ.
ಕೀರ್ತನೆ: 90:3-4, 5-6, 12-13, 14, 17
ಶ್ಲೋಕ: ಆತನ ಕರೆಗೆ ಕಿವಿಗೊಟ್ಟರೆನಿತೋ ಒಳಿತು ನೀವಿಂದೇ
ಎರಡನೇ ವಾಚನ: ಕೊಲೊಸ್ಸೆಯರಿಗೆ: 3:1-5, 9-11
ನೀವು ಯೇಸುಕ್ರಿಸ್ತನೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತ ಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ .ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ. ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ, ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರಿಕೃತವಾಗಿರಲಿ. ಕ್ರಿಸ್ತ ಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವು ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಆವರೊಂದಿಗೆ ಪ್ರತ್ಯಕ್ಷರಾಗುವಿರಿ. ನಿಮ್ಮಲ್ಲಿರುವ ಪ್ರಾಪಂಚಿಕ ಆಸೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿರ್ಗಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ, ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ಪೂರ್ಣ ಸ್ವಭಾವವನ್ನು ಅದರ ಕೃತ್ಯಗಳ ಕೂಡ ತೆಗೆದಿಟ್ಟು ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ? ಈ ಸ್ವಭಾವವನ್ನು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ವ ಜ್ಞಾನವನ್ನು ಉಂಟುಮಾಡುತ್ತವೆ. ಇದನ್ನು ಧರಿಸಿಕೊಂಡಿರುವುದರಲ್ಲಿ ಗ್ರೀಕನು - ಯೆಹೂದ್ಯನು ಎಂಬ ಬೇಧವಿಲ್ಲ. ಸುನ್ನತಿ ಮಾಡಿಸಿಕೊಂಡವನು - ಸುನ್ನತಿ ಮಾಡಿಸಿಕೊಳ್ಳದವನು ಎಂಬ ಭೇದವಿಲ್ಲ. ನಾಗರಿಕ - ಅನಾಗರಿಕ, ಆಳು ಒಡೆಯ, ಎಂಬ ಬೇಧವಿಲ್ಲ, ಆದರೆ ಕ್ರಿಸ್ತರೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವರು.
ಶುಭಸಂದೇಶ: ಲೂಕ 12:13-21

No comments:
Post a Comment