ಮೊದಲನೆಯ ವಾಚನ: 1 ಕೊರಿಂಥಿಯರಿಗೆ 3:18-23
ಸಹೋದರರೇ, ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ. ಇಹಲೋಕದ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. " ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು " ಎಂದೂ " ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ " ಎಂದೂ ಲಿಖಿತವಾಗಿದೆಯಲ್ಲವೆ? ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ. ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ -- ಇವರಾಗಲಿ; ಜಗತ್ತು, ಜೀವ, ಮರಣ -- ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ. ಆದರೆ ನೀವು ಕ್ರಿಸ್ತ ಯೇಸುವಿಗೆ ಸೇರಿದವರು; ಕ್ರಿಸ್ತ ಯೇಸು ದೇವರಿಗೆ ಸೇರಿದವರು.
ಕೀರ್ತನೆ 24:1-6
ಶ್ಲೋಕ: ಜಗವೂ ಅದರ ಜೀವಜಂತುಗಳೆಲ್ಲವೂ ಪ್ರಭುವಿನದೇ.
ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ|
ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ||
ಕಡಲನು ತಳಪಾಯವನಾಗಿಸಿದವನು ಆತನೇ|
ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೇ||
ಪ್ರಭುವಿನ ಶಿಖರವನು ಏರಬಲ್ಲವನಾರು?|
ಆ ನಿವಾಸದಲಿ ನಿಲ್ಲಲು ಯೋಗ್ಯನಾರು?||
ಅಂಥವನಿರಬೇಕು ಶುದ್ಧ ಹಸ್ತನು, ಸುಮನಸ್ಕನು|
ಅನಾಚಾರಕೆ, ಅಪ್ರಮಾಣಿಕತೆಗೆ ಒಲಿಯನವನು||
ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|
ನೀತಿಯ ಸತ್ಫಲ ರಕ್ಷಕ ದೇವನಿಂದ||
ಇಂಥವರೇ ದೇವರ ದರ್ಶನಾಭ್ಯರ್ಥಿಗಳು|
ಇಂಥವರೇ ಯಕೋಬ ದೇವನ ಭಕ್ತಾದಿಗಳು||
ಶುಭಸಂದೇಶ: ಲೂಕ 5:1-11
No comments:
Post a Comment