26.11.22 - “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ"

ಮೊದಲನೇ ವಾಚನಪ್ರಕಟಣಾ ಗ್ರಂಥ 22:1-7


ಬಳಿಕ  ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನುಅದು ಸ್ಫಟಿಕದಂತೆ ಮಿನುಗುತ್ತಿತ್ತುಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತುಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದುಪ್ರತೀ ತಿಂಗಳೂ ಫಸಲನ್ನೀಯುವಂಥದ್ದು ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದುಶಾಪಗ್ರಸ್ತವಾದುದು ಯಾವುದೂ  ನಗರದಲ್ಲಿ ಇರದುದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದುಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು ಹೆಸರು  ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದುರಾತ್ರಿ ಎಂಬುದೇ ಅಲ್ಲಿ ಇರದುದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದುದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರುಯುಗಯುಗಾಂತರಕ್ಕೂ ಅವರು ರಾಜ್ಯವಾಳುವರುಅನಂತರ  ದೇವದೂತನು ನನಗೆ, “ ಮಾತುಗಳು ಸತ್ಯವಾದುವುನಂಬಲರ್ಹವಾದುವುಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆಯೇಸುಸ್ವಾಮಿ ನುಡಿಯುವುದನ್ನು ಕೇಳು ಇಗೋ ನಾನು ಬೇಗನೆ ಬರುತ್ತೇನೆ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.

ಕೀರ್ತನೆ95:1-2, 3-5, 6-7

ಶ್ಲೋಕ: ಪ್ರಭು ಯೇಸುವೇ, ಬನ್ನಿ  

ಶುಭಸಂದೇಶ: ಲೂಕ 21:34-36 

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಮಿತಿ ಮೀರಿದ ಭೋಜನದಿಂದಾಗಲಿಕುಡಿತದಿಂದಾಗಲಿಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತುಜಾಗರೂಕರಾಗಿರಿ!  ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕುಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...