ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

21.01.23 - "ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು"

ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 9:2-3, 11-14

ಸಹೋದರರೇ, ದೇವಾರಾಯಧನೆಗೆ  ಒಂದು ಗುಡಾರವನ್ನು ಕಟ್ಟುತ್ತಿದ್ದರು. ಅದರಲ್ಲಿ ಎರಡು ಭಾಗಗಳು ಇದ್ದವು. ಮೊದಲನೆಯ ಭಾಗಕ್ಕೆ ಪವಿತ್ರಸ್ಥಳ ಎಂದು ಹೆಸರು. ಅಲ್ಲಿ, ಒಂದು ದೀಪಸ್ತಂಭ ಮತ್ತು ಒಂದು ಮೇಜು ಇದ್ದವು. ಆ ಮೇಜಿನ ಮೇಲೆ ಅರ್ಪಣೆಯ ನೈವೇದ್ಯ ರೊಟ್ಟಿಗಳನ್ನು ಇಡುತ್ತಿದ್ದರು. 3ಅದರ ಎರಡನೆಯ ಭಾಗಕ್ಕೆ ಗರ್ಭಗುಡಿ ಎಂದು ಹೆಸರು. ಈ ಎರಡು ಭಾಗಗಳ ನಡುವೆ ತೆರೆಯಿತ್ತು. ಗರ್ಭಗುಡಿಯನ್ನು ಈ ತೆರೆ ಮರೆಮಾಡಿತ್ತು ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ. ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ. ಹೋತಹೋರಿಗಳ ರಕ್ತವನ್ನೂ ಯಜ್ಞಪಶುಗಳ ಬೂದಿಯನ್ನೂ ಮಲಿನರಾದವರ ಮೇಲೆ ಚಿಮುಕಿಸುವುದರ ಮೂಲಕ ಶಾರೀರಕ ಮೈಲಿಗೆಯನ್ನು ಹೋಗಲಾಡಿಸಿ ಅವರನ್ನು ಪರಿಶುದ್ಧಗೊಳಿಸಬಹುದಾದರೆ, ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.
ಪ್ರಭುವಿನ ವಾಕ್ಯ

ಕೀರ್ತನೆ: 47:2-3, 6-7, 8-9 
ಶ್ಲೋಕ: ಏರಿದನು ಜಯಜಯಕಾರದೊಂದಿಗೆ, ಆರೋಹಣವಾದನು ತುತೂರಿನಾದದ ಜೊತೆಗೆ. 

ಪರಾತ್ಪರನಾದ ಪ್ರಭುವು ಘನಗಂಭೀರನು I
ಪ್ರಪಂಚಕ್ಕೆಲ್ಲ ರಾಜಾಧಿರಾಜನು II
ಜನಾಂಗಗಳನಾತ ನಮಗಧೀನಪಡಿಸಿಹನು I
ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II


ಕೀರ್ತಿಸಿರಿ, ನಮ್ಮ ದೇವನನು ಸಂಕೀರ್ತಿಸಿರಿ I
ಕೀರ್ತಿಸಿರಿ, ನಮ್ಮ ರಾಜನನು ಸಂಕೀರ್ತಿಸಿರಿ II
ದೇವನು ಭೂಮಂಡಲಕ್ಕೆಲ್ಲಾ ಒಡೆಯನು I
ಕೀರ್ತನೆಯಿಂದ ಕೊಂಡಾಡಿರಿ ಆತನನು II

ವಹಿಸಿಕೊಂಡನು ದೇವನು ಸರ್ವಾಧಿಪತ್ಯ I
ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II
ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I

ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II
ಭೂಪಾಲರೆಲ್ಲರೂ ದೇವರಿಗೆ ಅಧೀನರು I
ಸರ್ವೋನ್ನತನು, ಸಾರ್ವಭೌಮನು ದೇವರು II

ಮಾರ್ಕನು ಬರೆದ ಶುಭಸ೦ದೇಶ 3:20-21


ಯೇಸುಸ್ವಾಮಿ ಮನೆಗೆ ಹೋದಾಗ ಜನರು ಮರಳಿ ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು. :ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದು ತರಲು ಹೊರಟರು.
ಪ್ರಭು ಕ್ರಿಸ್ತರ ಶುಭಸ೦ದೇಶ

No comments:

Post a Comment