ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

05.03.23 - ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,”

ಮೊದಲನೆಯ ವಾಚನ : ಆದಿಕಾಂಡ 12:1-4 


ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ಹೀಗೆಂದರು -    “ನೀನು ನಿನ್ನ ಸ್ವಂತ ನಾಡನ್ನೂ ಬಂಧುಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟಹೋಗುನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆನೀನೇ ಆದರ್ಶದ ಆಶೀರ್ವಾದವಾಗಿ ಬೆಳವೆ"ನಿನ್ನನ್ನು ಹರಸುವವರನು ನಾ ಹರಸುವೆ,

ನಿನ್ನನ್ನು ಶಪಿಸುವವರನು ನಾ ಶಪಿಸುವೆ.
ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ
ದೊರಕುವುದು ನನ್ನಿಂದ ಆಶೀರ್ವಾದ.”
ಸರ್ವೇಶ್ವರ ಹೀಗೆಂದು ಹೇಳಿದ ಮೇಲೆ ಅಬ್ರಾಮನು ಹೊರಟನುಲೋಟನು ಅವನ ಸಂಗಡವೆ ಹೋದನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು.


ಕೀರ್ತನೆ  33:4-5, 18-19, 20,22

ಶ್ಲೋಕ : ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ,
ಕಾದಿಹೆವು ಇದೋ ನಿನ್ನ ನಂಬಿ ಭರವಸದಿ 

ಎರಡನೆಯ ವಾಚನ : 2 ತಿಮೋಥೇಯನಿಗೆ 1:8-10 


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ  ವಿಷಯದಲ್ಲೂ  ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು. ನಾವು ಸ್ವಂತ ಸತ್ಕಾರ್ಯಗಳಿಂದಲ್ಲ,   ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆದೇವರ ಪ್ರಜೆಗಳೆನಿಸಿಕೊಂಡಿದ್ದೇವೆ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆಮೃತ್ಯು ಶಕ್ತಿಯನ್ನು ವಿನಾಶಗೊಳಿಸಿ ಅಮರ   ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.

ಮತ್ತಾಯ 17:1-9


ರು ದಿನಗಳ ಬಳಿಕ ಪೇತ್ರಯೊವಾನ್ನ ಇವರನ್ನು ಯೇಸುಸ್ವಾಮಿ ಪ್ರತ್ಯೇಕವಾಗಿ ತಮ್ಮೊಡನೆ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರುಅಲ್ಲಿ  ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರುಅವರ ಮುಖ ಸೂರ್ಯನಂತೆ ಪ್ರಕಾಶಿಸಿತುಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತುಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಅವರಿಗೆ ಕಾಣಿಸಿತುಆಗ ಪೇತ್ರನು ಯೇಸುವಿಗೆ, “ಪ್ರಭೂನಾವು ಇಲ್ಲೇ ಇರುವುದು ಎಷ್ಟು ಒಳ್ಳೆಯದುಅಪ್ಪಣೆಯಾದರೆ ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನುತಮಗೊಂದುಮೋಶೆಗೊಂದುಎಲೀಯನಿಗೊಂದು,” ಎಂದನುಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರನನಗೆ ಪರಮಪ್ರಿಯನುನನ್ನ ಅಪಾರ ಮೆಚ್ಚುಗೆಗೆ ಪಾತ್ರನುಈತನ ಮಾತಿಗೆ ಕಿವಿಗೊಡಿ,” ಎಂದಿತುಶಿಷ್ಯರು  ವಾಣಿಯನ್ನು ಕೇಳಿ ಭಯಭ್ರಾಂತರಾದರುಬೋರಲು ಬಿದ್ದರುಆಗ ಯೇಸು ಅವರ ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿಭಯಪಡಬೇಡಿ,” ಎಂದರುಅವರು ಕಣ್ಣೆತ್ತಿ ನೋಡಿದಾಗ ಯೇಸುವನ್ನು ಬಿಟ್ಟು ಮತ್ತೆ ಯಾರನ್ನೂ ಕಾಣಲಿಲ್ಲಅವರೆಲ್ಲರು ಬೆಟ್ಟದಿಂದ ಇಳಿದು ಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ  ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.



ಮನಸ್ಸಿಗೊಂದಿಷ್ಟು ಬೆಟ್ಟದ ಮೇಲಿನ ಯೇಸುವಿನ ರೂಪಾಂತರದ ಅದ್ಭುತ ದೃಶ್ಯ ಕಾವ್ಯವನ್ನು ಕಂಡ ಪೇತ್ರ ಅಲ್ಲೇ ಗುಡಾರ ಮಾಡಿಕೊಳ್ಳುವ ಆಲೋಚನೆ ಮಾಡುತ್ತಾನೆಆದರೆ ಯೇಸುವಿಗದು  ಮುಂದೆ ತಾವು ಶಿಲುಬೆ ಏರಿ ಮಾಡಬೇಕಾದ ಮಹತ್ತ್ ಕಾರ್ಯದ ಮೆಟ್ಟಿಲುಅದನ್ನೇ ದೇವರೊಂದಿಗೆ ಮತ್ತೊಮ್ಮೆ ಧೃಡೀಕರಿಸಲು ಬೆಟ್ಟ ರೂಪಾಂತರ ಸಾಧನ,ವೇದಿಕೆಯಾಗುತ್ತದೆನಾವು ಕೂಡ ಎಷ್ಟೋ ಬಾರಿ ನಮಗಿಷ್ಟವಾದ  ವಾತಾವರಣದಲ್ಲಿ ಹಾಯಾಗಿ ಇರಲು ಇಷ್ಟಪಡುತ್ತೇವೆಆದರೆ ಕ್ರೈಸ್ತರಾಗಿ ನಮ್ಮ ಶಿಲುಬೆ ಹೊತ್ತು ನಿಜ ಕ್ರೈಸ್ತ ಜವಾಬ್ದಾರಿಗಳನ್ನು ಹೊರಲು ಸಿದ್ಧರಾಗಬೇಕಾಗಿದೆ.    

ಪ್ರಶ್ನೆ : "ಇವರು ನನಗೆ ಪ್ರಿಯರುಎಂದು ಪಿತ  ದೇವರು ನಮ್ಮನ್ನು ನೋಡಿ ಹೇಳುವಂಥ ಬದುಕು ನಮ್ಮದಾಗಿದೆಯೇ?


ಪ್ರಭುವೇ,
ಕವಿದ ಕತ್ತಲು 
ಅದೆಷ್ಟೇ ಆಗಿರಲಿ  
ಹಿಡಿದು ನಡೆಸುವ 
ಕೈ ನಿನ್ನದಾಗಿರಲಿ 
ನಡೆವ ದೂರ 
ಅದೆಷ್ಟೇ ಆಗಿರಲಿ 
ಯಾವ ದಾರಿ 
ಎಂಬ  ಆಯ್ಕೆ 
ನನ್ನದಲ್ಲ 
ನಿನ್ನದಾಗಿರಲಿ  
-ಚಿತ್ತ

04.03.23 - "ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ"

ಮೊದಲನೇಯ ವಾಚನ ಧರ್ಮೋಪದೇಶಕಾಂಡ 26:16-19

 ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕದು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದುದರಿಂದ ನೀವು ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು. ನಮಗೆ ಸರ್ವೇಶ್ವರನೇ ದೇವರಾಗಿರುವರೆಂದು ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಅವರ ಮಾತಿಗೆ ಲಕ್ಷ್ಯಕೊಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ. ಸರ್ವೇಶ್ವರ ಸ್ವಾಮಿ ಆದರೋ ನಿಮ್ಮ ವಿಷಯದಲ್ಲಿ,‘ಇವರು ನನ್ನ ಆಜ್ಞೆಗಳನ್ನೆಲ್ಲ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರು. ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.

ಕೀರ್ತನೆ 119:1-2, 4-5, 7-8

ಶ್ಲೋಕ ಪ್ರಭುವಿನ ಶಾಸ್ರ್ತಾನುಸಾರ ನಡೆಸುವವರು ಧನ್ಯರು

ಶುಭ ಸಂದೇಶ ಮತ್ತಾಯ 5:43-48
ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ. ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ. ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ? ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


ಮನಸ್ಸಿಗೊಂದಿಷ್ಟು : ’ಶತ್ರುವಿಗಾಗಿ  ಪ್ರೀತಿಸಿ’ ಎಂದ ಯೇಸು ’ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ’ ಎನ್ನುತ್ತಾ ಮತ್ತೊಂದು ಕಠಿಣವಾದ ಮೆಟ್ಟಿಲನ್ನು ಏರಲು ಹೇಳುತ್ತಿದ್ದಾರೆಅದು ಕಠಿಣ ಎನಿಸಿದರೆ ಅವರ ಮುಂದಿನ ಮಾತು ನಮ್ಮ ಕಣ್ಣು ತೆರೆಸಬೇಕುಪಾಪಿ ಪುಣ್ಯವಂತರೆನ್ನದೆ ಎಲ್ಲರ ಮೇಲೆ ಬೆಳಕುಮಳೆ ಸುರಿಸುವ ದೇವರ ಕಾರುಣ್ಯದ ಒಂದಷ್ಟು ಭಾಗವಾದರೂ ನಮ್ಮ ಹೃದಯಕ್ಕೆ ಬರಲು ನಾವು ಅವಕಾಶ ಮಾಡಿಕೊಡಬೇಕಾಗಿದೆ.

ಪ್ರಶ್ನೆ ನಮ್ಮ ಶತ್ರುಗಳನ್ನು ಪ್ರೀತಿಸುವುದು ಕಷ್ಟವೋಅವರಿಗಾಗಿ ಪ್ರಾರ್ಥಿಸಿವುದು ಹೆಚ್ಚು ಕಷ್ಟವೋ?

ಪ್ರಭುವೇ,
ಮಿತ್ರರಿಗಿಂತ ಶತ್ರುಗಳೇ ಹೆಚ್ಚು
ನಮ್ಮ ಆಲೋಚನೆಗಳಲ್ಲಿರಲು
ಅವರ ಪ್ರೀತಿಸಿ ಪ್ರಾರ್ಥಿಸಿ
ನಿಮ್ಮಂತೆ ಪರಿಪೂರ್ಣರಾಗಲು
ಅರಿವಿನ ಬೆಳಕಾಗಿ ನನ್ನಲ್ಲಿ ಬನ್ನಿ

ಒಲವಿನ ಮಳೆಯನ್ನು ತನ್ನಿ

03.03.23 - "‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು"

ಮೊದಲನೇಯ ವಾಚನ : ಯೆಜಿಕಿಯೇಲ 18:21-28   
      
ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲವಿಧಿಗಳನ್ನು ಕೈಗೊಂಡು, ನ್ಯಾಯನೀತಿಗಳನ್ನು ನಡೆಸಿದರೆ ಸಾಯನು; ಖಂಡಿತ ಜೀವಿಸುವನು. ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರದು. ಅವನು ಮಾಡುತ್ತಿರುವ ಸದ್ಧರ್ಮದಿಂದಲೇ  ಅವನು ಜೀವಿಸುವನು. ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ -  ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.“ಆದರೆ ನೀವು,‘ಸರ್ವೇಶ್ವರನ ಕ್ರಮ ಸರಿಯಲ್ಲ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ. ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು. ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು. ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು

ಕೀರ್ತನೆ : 130:1-2.3-4,5-7,7-8

ಶ್ಲೋಕ : ಪಾಪಗಳ ನೀ ಪಟ್ಟಿ ಮಾಡಿದೆಯಾದರೆ ಪ್ರಭೂ,
ನಿನ್ನ ಮುಂದೆ ಯಾರೂ ತಾನೆ ನಿಲ್ಲಬಲ್ಲರು ವಿಭೂ?

 ಶುಭಸಂದೇಶ : ಮತ್ತಾಯ 5:20-26



ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”  “ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು;‘ಮೂರ್ಖ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು. ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, ನಿನ್ನ ಕಾಣಿಕೆಯನ್ನು  ಬಲಿ ಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು.” “ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಮಾಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೊಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು! ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.”

ಮನಸ್ಸಿಗೊಂದಿಷ್ಟು : ಕೋಪ, ಮನಸ್ತಾಪ, ಹಗೆ ನಮ್ಮ ಅಂತರಂಗವನ್ನೇ ಸುಟ್ಟು ನೆಮ್ಮದಿ ಇಲ್ಲದಂತೆ ಮಾಡಿಕೊಳ್ಳುವುದಕ್ಕಿಂತ ಅದನ್ನೇ ಮೊಳಕೆಯಲ್ಲಿ ಚಿವುಟುವ ಪರಿಹಾರವನ್ನು ಯೇಸು ನೀಡುತ್ತಾರೆ. ದೇವರ ಮುಂದೆ ನಿಲ್ಲುವಾಗ ನಮ್ಮ ಮನಸ್ಸು ತಿಳಿಯಾಗಿರಬೇಕಾದ ಅವಶ್ಯಕತೆಯನ್ನು ಇಲ್ಲಿ ಸ್ಪಷ್ಟಪಡಿಸುತ್ತಾರೆ. ಕಠಿಣ ಆದರೆ ನಿಜಕ್ಕೂ ಫಲದಾಯಕವಾದ ಪರಿಹಾರವಿದು.

ಪ್ರಶ್ನೆ : ನಮ್ಮಲ್ಲಿನ ಮನಸ್ತಾಪಗಳು ನಮ್ಮನ್ನು ನೆಮ್ಮದಿಯಾಗಿ ಬದುಕಲು ಬಿಟ್ಟಿವಿಯೇ?

ಪ್ರಭುವೇ,
ನನ್ನೊಳಗಿನ ಹಗೆತನ ಕೋಪ
ನನ್ನ ಬಾಳಿಗಾಗಿದೆ ಶಾಪ
ಅಂತರಂಗದ ನನ್ನೀ ಕದನ
ನಿನ್ನ ಕೃಪೆಯಲ್ಲಿ ಕಾಣಲಿ ಶಮನ
-ಚಿತ್ತ