05.03.23 - ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,”

ಮೊದಲನೆಯ ವಾಚನ : ಆದಿಕಾಂಡ 12:1-4 


ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ಹೀಗೆಂದರು -    “ನೀನು ನಿನ್ನ ಸ್ವಂತ ನಾಡನ್ನೂ ಬಂಧುಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟಹೋಗುನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆನೀನೇ ಆದರ್ಶದ ಆಶೀರ್ವಾದವಾಗಿ ಬೆಳವೆ"ನಿನ್ನನ್ನು ಹರಸುವವರನು ನಾ ಹರಸುವೆ,

ನಿನ್ನನ್ನು ಶಪಿಸುವವರನು ನಾ ಶಪಿಸುವೆ.
ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ
ದೊರಕುವುದು ನನ್ನಿಂದ ಆಶೀರ್ವಾದ.”
ಸರ್ವೇಶ್ವರ ಹೀಗೆಂದು ಹೇಳಿದ ಮೇಲೆ ಅಬ್ರಾಮನು ಹೊರಟನುಲೋಟನು ಅವನ ಸಂಗಡವೆ ಹೋದನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು.


ಕೀರ್ತನೆ  33:4-5, 18-19, 20,22

ಶ್ಲೋಕ : ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ,
ಕಾದಿಹೆವು ಇದೋ ನಿನ್ನ ನಂಬಿ ಭರವಸದಿ 

ಎರಡನೆಯ ವಾಚನ : 2 ತಿಮೋಥೇಯನಿಗೆ 1:8-10 


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ  ವಿಷಯದಲ್ಲೂ  ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು. ನಾವು ಸ್ವಂತ ಸತ್ಕಾರ್ಯಗಳಿಂದಲ್ಲ,   ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆದೇವರ ಪ್ರಜೆಗಳೆನಿಸಿಕೊಂಡಿದ್ದೇವೆ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆಮೃತ್ಯು ಶಕ್ತಿಯನ್ನು ವಿನಾಶಗೊಳಿಸಿ ಅಮರ   ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.

ಮತ್ತಾಯ 17:1-9


ರು ದಿನಗಳ ಬಳಿಕ ಪೇತ್ರಯೊವಾನ್ನ ಇವರನ್ನು ಯೇಸುಸ್ವಾಮಿ ಪ್ರತ್ಯೇಕವಾಗಿ ತಮ್ಮೊಡನೆ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರುಅಲ್ಲಿ  ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರುಅವರ ಮುಖ ಸೂರ್ಯನಂತೆ ಪ್ರಕಾಶಿಸಿತುಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತುಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಅವರಿಗೆ ಕಾಣಿಸಿತುಆಗ ಪೇತ್ರನು ಯೇಸುವಿಗೆ, “ಪ್ರಭೂನಾವು ಇಲ್ಲೇ ಇರುವುದು ಎಷ್ಟು ಒಳ್ಳೆಯದುಅಪ್ಪಣೆಯಾದರೆ ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನುತಮಗೊಂದುಮೋಶೆಗೊಂದುಎಲೀಯನಿಗೊಂದು,” ಎಂದನುಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರನನಗೆ ಪರಮಪ್ರಿಯನುನನ್ನ ಅಪಾರ ಮೆಚ್ಚುಗೆಗೆ ಪಾತ್ರನುಈತನ ಮಾತಿಗೆ ಕಿವಿಗೊಡಿ,” ಎಂದಿತುಶಿಷ್ಯರು  ವಾಣಿಯನ್ನು ಕೇಳಿ ಭಯಭ್ರಾಂತರಾದರುಬೋರಲು ಬಿದ್ದರುಆಗ ಯೇಸು ಅವರ ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿಭಯಪಡಬೇಡಿ,” ಎಂದರುಅವರು ಕಣ್ಣೆತ್ತಿ ನೋಡಿದಾಗ ಯೇಸುವನ್ನು ಬಿಟ್ಟು ಮತ್ತೆ ಯಾರನ್ನೂ ಕಾಣಲಿಲ್ಲಅವರೆಲ್ಲರು ಬೆಟ್ಟದಿಂದ ಇಳಿದು ಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ  ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.



ಮನಸ್ಸಿಗೊಂದಿಷ್ಟು ಬೆಟ್ಟದ ಮೇಲಿನ ಯೇಸುವಿನ ರೂಪಾಂತರದ ಅದ್ಭುತ ದೃಶ್ಯ ಕಾವ್ಯವನ್ನು ಕಂಡ ಪೇತ್ರ ಅಲ್ಲೇ ಗುಡಾರ ಮಾಡಿಕೊಳ್ಳುವ ಆಲೋಚನೆ ಮಾಡುತ್ತಾನೆಆದರೆ ಯೇಸುವಿಗದು  ಮುಂದೆ ತಾವು ಶಿಲುಬೆ ಏರಿ ಮಾಡಬೇಕಾದ ಮಹತ್ತ್ ಕಾರ್ಯದ ಮೆಟ್ಟಿಲುಅದನ್ನೇ ದೇವರೊಂದಿಗೆ ಮತ್ತೊಮ್ಮೆ ಧೃಡೀಕರಿಸಲು ಬೆಟ್ಟ ರೂಪಾಂತರ ಸಾಧನ,ವೇದಿಕೆಯಾಗುತ್ತದೆನಾವು ಕೂಡ ಎಷ್ಟೋ ಬಾರಿ ನಮಗಿಷ್ಟವಾದ  ವಾತಾವರಣದಲ್ಲಿ ಹಾಯಾಗಿ ಇರಲು ಇಷ್ಟಪಡುತ್ತೇವೆಆದರೆ ಕ್ರೈಸ್ತರಾಗಿ ನಮ್ಮ ಶಿಲುಬೆ ಹೊತ್ತು ನಿಜ ಕ್ರೈಸ್ತ ಜವಾಬ್ದಾರಿಗಳನ್ನು ಹೊರಲು ಸಿದ್ಧರಾಗಬೇಕಾಗಿದೆ.    

ಪ್ರಶ್ನೆ : "ಇವರು ನನಗೆ ಪ್ರಿಯರುಎಂದು ಪಿತ  ದೇವರು ನಮ್ಮನ್ನು ನೋಡಿ ಹೇಳುವಂಥ ಬದುಕು ನಮ್ಮದಾಗಿದೆಯೇ?


ಪ್ರಭುವೇ,
ಕವಿದ ಕತ್ತಲು 
ಅದೆಷ್ಟೇ ಆಗಿರಲಿ  
ಹಿಡಿದು ನಡೆಸುವ 
ಕೈ ನಿನ್ನದಾಗಿರಲಿ 
ನಡೆವ ದೂರ 
ಅದೆಷ್ಟೇ ಆಗಿರಲಿ 
ಯಾವ ದಾರಿ 
ಎಂಬ  ಆಯ್ಕೆ 
ನನ್ನದಲ್ಲ 
ನಿನ್ನದಾಗಿರಲಿ  
-ಚಿತ್ತ

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...