ಮೊದಲನೇ ವಾಚನ: ಧರ್ಮೋಪದೇಶಕಾ೦ಡ 6: 4-13
ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ
ಆತನೇ ನನ್ನ ದೇವ, ನನ್ನಾಶ್ರಯದುರ್ಗ
ಆತನೆನಗೆ ಗುರಾಣಿ, ಗಿರಿ, ರಕ್ಷಣಾ ಶೃಂಗ
ಪ್ರಭು ಸ್ತುತ್ಯಾರ್ಹನು
ಶತ್ರುಗಳಿಂದ ಕಾಪಾಡುವರು ನಾನವಗೆ ಮೊರೆಯಿಡಲು
ಸರ್ವೇಶ್ವರನು ಚೈತನ್ಯ ಸ್ವರೂಪನು
ನನ್ನುದ್ಧಾರಕನಾದವನಿಗೆ ಸ್ತುತಿಸ್ತೋತ್ರ
ನನ್ನ ರಕ್ಷಿಸುವ ದೇವರಿಗೆ ಜಯಕಾರ
ಅನುಗ್ರಹಿಸುವನಾತ ಅನಂತಾನಂತ ಕೃಪೆ
ತಾನಭಿಷೇಕಿಸಿದ ದಾವೀದನಿಗೆ, ಆತನ ಸಂತತಿಗೆ
ಶುಭಸಂದೇಶ: ಮತ್ತಾಯ 17:14-21
ಜನರ ಗುಂಪು ಇದ್ದಲ್ಲಿಗೆ ಅವರೆಲ್ಲರು ಮರಳಿಬಂದರು. ಆಗ ಒಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, "ಪ್ರಭೂ, ನನ್ನ ಮಗನ ಮೇಲೆ ಕನಿಕರವಿಡಿ, ಅವನು ಮೂರ್ಛಾರೋಗಿ, ಅವನ ಕಷ್ಟ ಹೇಳತೀರದು, ಆಗಾಗ ಬೆಂಕಿಯಲ್ಲೋ ನೀರಿನಲ್ಲೋ ಬಿದ್ದು ಬಿಡುತ್ತಾನೆ. ಅವನನ್ನು ತಮ್ಮ ಶಿಷ್ಯರ ಬಳಿಗೆ ಕರೆದುಕೊಂಡು ಬಂದೆ. ಆದರೆ ಅವನನ್ನು ಗುಣಪಡಿಸಲು ಅವರಿಂದಾಗಲಿಲ್ಲ," ಎಂದು ಮೊಣಕಾಲೂರಿ ಯಾಚಿಸಿದನು. ಅದಕ್ಕೆ ಯೇಸು, "ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?" ಎಂದು ಹೇಳಿ, "ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ," ಎಂದರು. ಅನಂತರ ಆ ಹುಡುಗನಲ್ಲಿದ್ದ ದೆವ್ವವನ್ನು ಅವರು ಗದರಿಸಿದೊಡನೆಯೇ, ಅದು ಅವನನ್ನು ಬಿಟ್ಟು ಹೋಯಿತು. ಅವನು ತಕ್ಷಣವೇ ಸ್ವಸ್ಥನಾದನು. ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, "ಆ ದೆವ್ವವನ್ನು ಬಿಡಿಸಲು ನಮ್ಮಿಂದಾಗಲಿಲ್ಲವಲ್ಲ, ಅದೇಕೆ?" ಎಂದು ಕೇಳಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ. ನಿಮ್ಮಿಂದ ಅಸಾಧ್ಯವಾದುದು ಒಂದೂ ಇರದು. (ಈ ಬಗೆಯ ದೆವ್ವಗಳನ್ನು ಹೊರಗಟ್ಟಲು ಪ್ರಾರ್ಥನೆ ಮತ್ತು ಉಪವಾಸ ಮಾಡುವುದನ್ನು ಬಿಟ್ಟು ಬೇರೆ ಮಾರ್ಗವಿಲ್ಲ)," ಎಂದರು.
No comments:
Post a Comment