ಮೊದಲನೇ ವಾಚನ: ವಿಮೋಚನಾಕಾಂಡ 24:3-8
ಮೋಶೆ ಜನರ ಬಳಿಗೆ ಬಂದು ಸರ್ವೇಶ್ವರನ ಎಲ್ಲ ಆಜ್ಞೆಗಳನ್ನೂ, ವಿಧಿವಿಧಾನಗಳನ್ನೂ ವಿವರಿಸಿದನು. ಜನರೆಲ್ಲರು, "ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ," ಎಂದು ಒಕ್ಕೊರಳಿನಿಂದ ಉತ್ತರ ಕೊಟ್ಟರು. ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು. ಇಸ್ರಯೇಲರ ಯೌವನಸ್ಥರು ಸರ್ವೇಶ್ವರಸ್ವಾಮಿಗೆ ದಹನ ಬಲಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು. ಆ ಬಲಿಪಶುಗಳ ರಕ್ತದಲ್ಲಿ ಅರ್ಧವನ್ನು ತೆಗೆದು ಬಟ್ಟಲುಗಳಲ್ಲಿ ತುಂಬಿದನು. ಮಿಕ್ಕ ಅರ್ಧವನ್ನು, ಬಲಿಪೀಠದ ಮೇಲೆ ಪ್ರೋಕ್ಷಿಸಿದನು. ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, "ಸರ್ವೇಶ್ವರಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ," ಎಂದರು. ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರಮೇಲೆ ಚಿಮುಕಿಸಿ, "ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ," ಎಂದನು.
ಕೀರ್ತನೆ: 50:1-2, 5-6, 14-15
ಶ್ಲೋಕ: ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ
ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ
ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ
ಸುರ ಸುಂದರವಾದ ಸಿಯೋನಿನಿಂದ
ಉದಯಸಿಹನು ದೇವನು ಶೋಭೆಯಿಂದ.
“ಬಲಿ ಮೂಲಕ ಒಡಂಬಡಿಕೆ ಗೈದ ಭಕ್ತರನು
ಸಭೆ ಸೇರಿಸಿ ಇಲ್ಲೆನ್ನ ಮುಂದೆ,” ಎನ್ನುತಿಹನು
ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ
ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ.
ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ
ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ
ಕಷ್ಟದಲಿ ಮೊರೆಯಿಡೆ, ನೆರವಾಗುವೆ
ಆಗ ನೀ ನನ್ನನು ಕೊಂಡಾಡುವೆ.
ಶುಭಸಂದೇಶ: ಮತ್ತಾಯ 13:24-30
No comments:
Post a Comment